Homeಮುಖಪುಟತಮ್ಮ ಸ್ಥಾನವನ್ನು ಅಸ್ಥಿರಗೊಳಿಸಲಾಗುತ್ತಿದೆ: ಪ್ರಧಾನಿಯೊಂದಿಗೆ ಮಾತನಾಡಿದ ಉದ್ದವ್ ಠಾಕ್ರೆ

ತಮ್ಮ ಸ್ಥಾನವನ್ನು ಅಸ್ಥಿರಗೊಳಿಸಲಾಗುತ್ತಿದೆ: ಪ್ರಧಾನಿಯೊಂದಿಗೆ ಮಾತನಾಡಿದ ಉದ್ದವ್ ಠಾಕ್ರೆ

ಕೊರೊನಾ ವೈರಸ್‌ನಿಂದಾಗಿ ವಿಧಾನ ಪರಿಷತ್‌ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ ಅವರು ವಿಧಾನ ಪರಿಷತ್ತಿಗೆ ಆಯ್ಕೆಯಾಗಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರನ್ನು ವಿಧಾನ ಪರಿಷತ್ತಿಗೆ ರಾಜ್ಯಪಾಲರು ನಾಮನಿರ್ದೇಶನ ಮಾಡಬೇಕೆಂದು ಆಡಳಿತ ಪಕ್ಷ ಮನವಿ ಮಾಡಿದೆ.

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, “ಕೊರೊನಾ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಮಹಾರಾಷ್ಟ್ರದಂತಹ ಬೃಹತ್ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಸರಿಯಲ್ಲ” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಪ್ರಧಾನ ಮಂತ್ರಿಗೆ ಇದನ್ನು ಪರಿಶೀಲಿಸುವಂತೆ ಒತ್ತಾಯಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಲು ರಾಜ್ಯಪಾಲರನ್ನು ಅವಲಂಬಿಸಿರುವ ಅವರು, ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯದಲ್ಲಿ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯನ್ನು ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಠಾಕ್ರೆ ಮುಖ್ಯಮಂತ್ರಿಯಾಗಿ ಉಳಿಯಲು ಅವರನ್ನು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿ ನಾಮನಿರ್ದೆಶನ ಮಾಡಬೇಕಾಗಿದೆ. ಆದರೆ ಈ ಸಮಯದಲ್ಲಿ ಬಿಜೆಪಿ ಅದನ್ನು ಅಸ್ಥಿರಗೊಳಿಸುವ ಯೋಜನೆಯನ್ನು ರೂಪಿಸಿದೆ ಎಂದು ಶಿವಸೇನೆ ಹೇಳಿದೆ.

ಉದ್ಧವ್ ಠಾಕ್ರೆ ಅವರನ್ನು ರಾಜ್ಯ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ಮಹಾರಾಷ್ಟ್ರ ಸರ್ಕಾರ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಕೋಶ್ಯರಿ ಇನ್ನೂ ಪ್ರತಿಕ್ರಿಯಿಸಿಲ್ಲ. ಸೋಮವಾರ ಮಹಾರಾಷ್ಟ್ರ ಸಚಿವ ಸಂಪುಟ ಜ್ಞಾಪನೆ ಕಳುಹಿಸಿ, ಆಡಳಿತ ಪಕ್ಷವಾದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಒಕ್ಕೂಟದ ಮುಖಂಡರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ನವೆಂಬರ್ 28 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಉದ್ದವ್ ಠಾಕ್ರೆ  ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ನಿಯಮದಂತೆ ಆರು ತಿಂಗಳೊಳಗೆ ರಾಜ್ಯ ವಿಧಾನಸಭೆ /ವಿಧಾನ ಪರಿಷತ್ತಿನಲ್ಲಿ ಸದಸ್ಯರಾದರೆ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬಹುದಾಗಿದೆ. ಈ ಗಡುವು ಮೇ 28 ಕ್ಕೆ ಕೊನೆಗೊಳ್ಳುತ್ತದೆ.

ಕೊರೊನಾ ವೈರಸ್‌ನಿಂದಾಗಿ ವಿಧಾನ ಪರಿಷತ್‌ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ ಅವರು ವಿಧಾನ ಪರಿಷತ್ತಿಗೆ ಆಯ್ಕೆಯಾಗಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರನ್ನು ವಿಧಾನ ಪರಿಷತ್ತಿಗೆ ರಾಜ್ಯಪಾಲರು ನಾಮನಿರ್ದೇಶನ ಮಾಡಬೇಕೆಂದು ಆಡಳಿತ ಪಕ್ಷ ಮನವಿ ಮಾಡಿದೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ರಾಜ್ಯ ಸರ್ಕಾರದ ನಿಯೋಗವು ರಾಜ್ಯಪಾಲರಿಗೆ ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ವಿನಂತಿಸಿದೆ. ರಾಜ್ಯ ಸಚಿವ ಸಂಪುಟದ ನಿರ್ಧಾರವು ರಾಜ್ಯಪಾಲರಿಗೆ ಬದ್ಧವಾಗಿದೆ ಎಂದಿರುವ ಮೂಲಗಳು, ರಾಜ್ಯಪಾಲರು ತಮ್ಮ ನಿರ್ಧಾರವನ್ನು ಒಂದು ವಾರದೊಳಗೆ ಪ್ರಕಟಿಸುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಈ ಬಿಕ್ಕಟ್ಟಿಗೆ ಮಾಜಿ ಮಿತ್ರ ಪಕ್ಷವಾದ ಬಿಜೆಪಿ ಕಾರಣವೆಂದು ಶಿವಸೇನೆ ನಾಯಕರು ದೂಷಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು, ತಾನು ಅಧಿಕಾರದಲ್ಲಿಲ್ಲದ ರಾಜ್ಯಗಳ ಮೇಲೆ ಒತ್ತಡ ಹೇರಲು ರಾಜ್ಯಪಾಲರನ್ನು ಬಳಸುತ್ತಿದೆ ಎಂದು ಆರೋಪಿಸಿದೆ. ಬಿಜೆಪಿ ಜೊತೆ ಅಧಿಕಾರ ಹಂಚಿಕೆ ಕುರಿತು ಮಹಾರಾಷ್ಟ್ರದ ಚುನಾವಣೆಯ ನಂತರ ದೀರ್ಘಕಾಲದ ತಮ್ಮ ಸ್ನೇಹವನ್ನು ಮುರಿದುಕೊಂಡು ಶೀವಸೇನೆ ತನ್ನ ಪ್ರತಿಸ್ಫರ್ದಿಗಳಾದ ಎನ್ಸಿಪಿ, ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿ ಅಧಿಕಾರ ಹಿಡಿದಿದೆ.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...