Homeಮುಖಪುಟಮೇ 04ರಿಂದ ಕೈಗಾರಿಕೆ ತೆರೆಯಲು ಯೋಚನೆ; ನಾಳೆಯಿಂದ ಸಾರಿಗೆ ವ್ಯವಸ್ಥೆ

ಮೇ 04ರಿಂದ ಕೈಗಾರಿಕೆ ತೆರೆಯಲು ಯೋಚನೆ; ನಾಳೆಯಿಂದ ಸಾರಿಗೆ ವ್ಯವಸ್ಥೆ

- Advertisement -
- Advertisement -

ಪ್ರಧಾನಿ ಸೂಚನೆ ಮೇರೆಗೆ ಕೋವಿಡ್-19 ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ಜೋನ್‌ಗಳನ್ನು ಹೊರತುಪಡಿಸಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮೇ 4ರಿಂದ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಿದ್ದು ಈ ಮೂಲಕ ಆರ್ಥಿಕ ಪುನಶ್ಚೇತನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ಯ ಮಾರಾಟ ಮತ್ತು ಇತರೆ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಕುರಿತು ಮೇ 3ರ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಹೋಟೆಲ್ ಗಳಲ್ಲಿ ಕೇವಲ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಕೊರೋನಾದಿಂದ ಜನರು ಆತಂಕ, ಭೀತಿ ಮತ್ತು ಖಿನ್ನತೆಗೆ ಒಳಗಾಗದಂತೆ ತಿಳುವಳಿಕೆ ಮೂಡಿಸಬೇಕು. ಜನರಲ್ಲಿ ಅತ್ಮಸ್ಥೈರ್ಯ ತುಂಬುವಂತಹ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಇದುವರೆಗೂ ಮಾಧ್ಯಮಗಳು ಸಾಕಷ್ಟು ಕೆಲಸ ಮಾಡಿವೆ ಎಂದು ಶ್ಲಾಘಿಸಿದರು.

ಕೊರೊನ ವ್ಯಾಪಕವಾದರೆ ಲಾಕ್ ಡೌನ್‌ 2-3 ತಿಂಗಳು ಮುಂದೂಡಿದರೂ ಅಚ್ಚರಿ ಇಲ್ಲ. ಆದರೂ ಆರ್ಥಿಕ ಚಟುವಟಿಕೆಗಳು ನಡೆಯಬೇಕು. ಎರಡನ್ನೂ ಒಟ್ಟೊಟ್ಟಿಗೆ ತೆಗೆದುಕೊಂಡು ಹೊಗುತ್ತೇವೆ. ಈ ಹಿನ್ನೆಲೆಯಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ಸಂಜೆ ಕೈಗಾರಿಕೋದ್ಯಮಿಗಳ ಜೊತೆ ಸಮಾಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಲಾಕ್ ಡೌನ್ ನಲ್ಲಿ ಸಿಲುಕಿರುವವರು ತಮ್ಮ ಸ್ವಸ್ಥಾನಗಳಿಗೆ ತೆರಳಲು ಅನುಕೂಲವಾಗುವಂತೆ ಅಂತರ್‌ರಾಜ್ಯ ಮತ್ತು ಅಂತರ್ ಜಿಲ್ಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವಲಸೆ ಕಾರ್ಮಿಕರು ತಮ್ಮ ಖರ್ಚಿನಲ್ಲಿ ತೆರಳಬಹುದು. ಬೇಕೆಂದರೆ ಬಸ್ ವ್ಯವಸ್ಥೆ ಕಲ್ಪಸಲಾಗುವುದು. ಹೀಗೆ ಪ್ರಯಾಣ ಮಾಡುವವರ ಸ್ಯಾಂಪಲ್ ಸಂಗ್ರಹಿಸುವುದು ಕಡ್ಡಾಯವಾಗಿದೆ. ನಾಳೆಯಿಂದಲೇ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಂಪು ವಲಯವನ್ನು ಹೊರತುಪಡಿಸಿ ಎಲ್ಲಾ ವಲಯಗಳಲ್ಲಿ ಬಸ್ ಸಂಚಾರ ಇರಲಿದೆ ಎಂದಿದ್ದಾರೆ.


ಇದನ್ನೂ ಓದಿ: ಅಶಿಸ್ತಿನ ಕ್ರಮ: ಅತಿ ಶ್ರೀಮಂತರಿಗೆ ಕೊರೊನಾ ತೆರಿಗೆ ವಿಧಿಸುವ IRS ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪರಿಸರಕ್ಕೆ ಹಾನಿಕಾರಕ ವಾಗುವ ಕಾರ್ಖಾನೆಗಳು ಈಗೆನೇ ಮುಚ್ಚಿಕೊಂಡೇ ಇರಲಿ.
    ಅದನ್ನು ತೆರೆದು ಇನ್ನಷ್ಟು ರೋಗಿಗಳನ್ನು ನಿರ್ಮಿಸುವುದು ಬೇಡ.

  2. ಜಿಲ್ಲಯ ಯಾವುದೋ ಮೂಲೆಯಲ್ಲಿ ಕರೋನಾ ಸೋಂಕಿತರಿಂದ ಇಡಿ ಜಿಲ್ಲೆಯನ್ನು ರೆಡ್ ಜೋನ್ ಎಂದು ಸಾರುವುದು ತಪ್ಪು.
    ಎತ್ತುಗೆ, ನಂಜನಗೂಡಿನಿಂದಾಗಿ, ಪಿರಿಯಾಪಟ್ಟಣ… ಮುಂತಾದ ಊರುಗಳು ಮಯ್ಸೂರು ಜಿಲ್ಲೆಗೆ ಸೇರಿದ ಊರುಗಳು.
    ರೆಡ್ ಜೋನ್ ಗೆ ಬೇರೆ ಅಳತೆಗೋಲಿರಬೇಕು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...