Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...