Homeಅಂತರಾಷ್ಟ್ರೀಯಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ತಂಡಕ್ಕೆ ’ನೋಬೆಲ್ ಶಾಂತಿ’ ಪ್ರಶಸ್ತಿ ನೀಡುವಂತೆ ಪ್ರತಿಪಾದನೆ

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು

- Advertisement -
- Advertisement -

ಕೊರೊನಾ ವಿರುದ್ಧದ ಹೋರಾಟಕ್ಕಾಗಿ 20 ಕ್ಕೂ ಹೆಚ್ಚು ದೇಶಗಳಲ್ಲಿ ನಿಯೋಜಿಸಲಾಗಿರುವ ಕ್ಯೂಬಾದ ವೈದ್ಯಕೀಯ ದಳವಾದ ’ಹೆನ್ರಿ ರೀವ್‌’‌ಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡುವಂತೆ ಫ್ರೆಂಚ್ ಸಂಘ ಕ್ಯೂಬಾ ಲಿಂಡಾ ಪ್ರತಿಪಾದಿಸಿದೆ.

ಕೊರೊನಾ ಸಾಂಕ್ರಮಿಕ ಹರಡುತ್ತಿರುವಾಗ ಇತರ ದೇಶಗಳಿಗೆ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದ ಕ್ಯೂಬಾ ದೇಶವನ್ನು ವಿಶ್ವದಾದ್ಯಂತ ಜನರು ಅಭಿನಂಧಿಸಿದ್ದರು. ವೈದ್ಯಕೀಯ ನೆರವಿಗಾಗಿ ಕ್ಯೂಬಾ ಈ ಹಿಂದೆಯೂ ತನ್ನ ತಂಡವನ್ನು ಬೇರೆ ಬೇರೆ ಸಂದರ್ಭದಲ್ಲಿ ಕಳುಹಿಸಿತ್ತು.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ, ಕ್ಯೂಬಾ ತನ್ನ ಮೊದಲ ಕಾರ್ಯಾಚರಣೆಯನ್ನು ಕೊರೊನಾ ಪೀಡಿತ ಪ್ರದೇಶವಾದ ಇಟಲಿಯ ಲೊಂಬಾರ್ಡಿಗೆ ಕಳುಹಿಸಿತ್ತು. ಇಟಲಿಯ ನಂತರ, ವೆನಿಜುವೆಲಾ, ನಿಕರಾಗುವಾ, ಬೆಲೀಜ್, ಸುರಿನಾಮ್, ಡೊಮಿನಿಕಾ, ಸೇಂಟ್ ಲೂಸಿಯಾ, ಮೆಕ್ಸಿಕೊ, ಸೇಂಟ್ ಕಿಟ್ಸ್ ಮತ್ತು ನೆವಿಸ್, ಆಂಟಿಗುವಾ ಮತ್ತು ಬಾರ್ಬುಡಾ, ಜಮೈಕಾ, ಹೊಂಡುರಾಸ್, ಗ್ರೆನಡಾ, ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೈನ್ಸ್, ಬಾರ್ಬಡೋಸ್, ಹೈಟಿ, ಅಂಡೋರಾ, ಅಂಗೋಲಾ, ಟೋಗೊ, ಸೇಂಟ್ ಥಾಮಸ್ ಮತ್ತು ಪ್ರಿನ್ಸ್, ಕತಾರ್, ಕೇಪ್ ವರ್ಡೆ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ನರವಿಗಾಗಿ ತನ್ನ ವೈದ್ಯಕೀಯ ದಳವನ್ನು ಕಳುಹಿಸಿದೆ.


ಇದನ್ನೂ ಓದಿ: ಕ್ಯೂಬಾದ ವೈದ್ಯರು ಜಗತ್ತಿನ ಅತ್ಯುತ್ತಮ ವೈದ್ಯರಾಗಿದ್ದು ಹೇಗೆ?


ಕ್ಯೂಬಾ ಕ್ರಾಂತಿಕಾರಿ ಹಾಗೂ ಮಾಜಿ ಅಧ್ಯಕ್ಷರಾದ ಫಿಡೆಲ್ ಕ್ಯಾಸ್ಟ್ರೊ ಕ್ಯೂಬಾದ ವೈದ್ಯರನ್ನು ಕ್ಯೂಬಾದ “ಬಿಳಿ ಕೋಟುಗಳ ಸೈನ್ಯ” ಎಂದು ವ್ಯಾಖ್ಯಾನಿಸಿದ್ದರು. ಹಲವಾರು ವರ್ಷಗಳಿಂದ ಈ ಸೈನ್ಯವು ಸಾರ್ಸ್, ಎಬೋಲಾ, ಕಾಲರಾ ಮುಂತಾದ ಮಾರಣಾಂತಿಕ ವೈರಸ್‌ಗಳ ವಿರುದ್ದ ಹೋರಾಡಲು ಹಲವಾರು ದೇಶಗಳಿಗೆ ಸಹಾಯ ಮಾಡಿತ್ತು.

ಕ್ಯೂಬಾದ ಹೆನ್ರಿ ರೀವ್ ಅಂತರಾಷ್ಟ್ರೀಯ ವೈದ್ಯಕೀಯ ದಳ 2005 ಮತ್ತು 2017 ರ ನಡುವೆ 21 ದೇಶಗಳಲ್ಲಿ 3.5 ಮಿಲಿಯನ್ ಜನರಿಗೆ ಸಹಾಯ ಮಾಡಿದೆ.

ಕ್ಯೂಬನ್ ಕ್ರಾಂತಿಯ ಆರಂಭಿಕ ದಿನಗಳಿಂದಲೂ, ನಾಯಕ ಫಿಡೆಲ್ ಕ್ಯಾಸ್ಟ್ರೊ ದೇಶವನ್ನು ನಿರ್ಮಿಸುವಲ್ಲಿ ಸಾರ್ವತ್ರಿಕ ಮುಕ್ತ ಆರೋಗ್ಯ ರಕ್ಷಣೆ ಮತ್ತು ಶಿಕ್ಷಣವು ಪ್ರಮುಖ ತಂತ್ರವಾಗಿದೆ ಎಂದು ನಂಬಿದ್ದರು. ಕ್ಯೂಬಾದಲ್ಲಿ ಅಮೆರಿಕಾಗಿಂತ ತಲಾ ಮೂರು ಪಟ್ಟು ಹೆಚ್ಚು ವೈದ್ಯರಿದ್ದಾರೆ.

ಕ್ಯೂಬಾದ ಆರೋಗ್ಯ ಮಂತ್ರಿ ಜೋಸ್ ಏಂಜಲ್ ಪೋರ್ಟಲ್ ಮಿರಾಂಡಾ ಒಂದು ತಿಂಗಳ ಹಿಂದೆ ಟ್ವೀಟ್ ಮಾಡಿ ““ಕ್ಯೂಬಾ ಹಲವು ಬಾರಿ ಸಹಾಯಕ್ಕೆ ಕೈ ಚಾಚಿದೆ ಆದರೆ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಬಾರಿ ಸಹಾಯ ಮಾಡಿದ್ದು ಇದು ಮೊದಲ ಬಾರಿಯಗಿದೆ. ಕಳೆದ ವಾರದಲ್ಲಿ ಹೆನ್ರಿ ರೀವ್ ಬ್ರಿಗೇಡ್ ಪ್ರತಿ ಸೂರ್ಯೋದಯದೊಂದಿಗೆ ಹೊರಟಿದೆ. ಹೀಗಾಗಿದ್ದು ಇದುವೇ ಮೊದಲು, ಈಗಾಗಲೇ ಒಟ್ಟು 11 ಬಾರಿ ಅದು ಇಲ್ಲಿಂದ ಹೊರಟಿದೆ”

ಕ್ಯೂಬಾದ ವೈದ್ಯಕೀಯ ನೆರವನ್ನು ತಿರಸ್ಕರಿಸುವಂತೆ ಅಮೇರಿಕಾ ಕರೆನೀಡಿ ಅಂತರಾಷ್ಟ್ರೀಯವಾಗಿ ವಿವಾದಕ್ಕೊಳಗಾಗಿತ್ತು. ಜಗತ್ತು ಒಗ್ಗಟ್ಟಿನಲ್ಲಿ ನಿಲ್ಲಬೇಕಾದ ಈ ಕಾಲದಲ್ಲಿ, ‘ಬಿಳಿ ಕೋಟುಗಳ ಸೈನ್ಯ’ ಮಾಡಿದ ಮಾನವೀಯ ಕಾರ್ಯಗಳು ಮಹತ್ವದ್ದಾಗಿದೆ ಎಂದು ಅಂತರಾಷ್ಟೀಯ ಸಮುದಾಯ ಅಮೆರಿಕಾಕ್ಕೆ ತಿರುಗೆಟು ನೀಡಿತ್ತು.


ಇದನ್ನೂ ಓದಿ: ಕ್ಯೂಬಾದ ವೈದ್ಯಕೀಯ ಸಹಾಯ ತಿರಸ್ಕರಿಸುವಂತೆ ಹಲವು ದೇಶಗಳಿಗೆ ಅಮೆರಿಕದ ಒತ್ತಡ


ಇದೇ ಸುದ್ದಿಯನ್ನು ಇನ್ನಷ್ಟು ವಿಸ್ತಾರವಾಗಿ ಓದಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...