Homeಮುಖಪುಟಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

ಕೊರೊನಾ ಎಫೆಕ್ಟ್: ಆರು ತಿಂಗಳು ಕೇರಳದಲ್ಲಿ ಉಳಿಯಲು ಅಮೆರಿಕಾದ ಪ್ರಜೆ ಹೈಕೋರ್ಟ್‌ಗೆ ಮೊರೆ

- Advertisement -
- Advertisement -

ಕೊರೊನಾ ವೈರಸಿನ ಭಯಕ್ಕೆ ಕೊರೊನಾ ವೈರಸ್ ಸುರಕ್ಷಿತ ಧಾಮವಾದ ಕೇರಳದಲ್ಲಿ ತನ್ನನ್ನು ಇರಿಸುವಂತೆ ಅಮೆರಿಕಾದ ಪ್ರಜೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ.

ತನ್ನನ್ನು ಇನ್ನೂ ಆರು ತಿಂಗಳು ಕೇರಳದಲ್ಲಿ ಇರಲು ಅವಕಾಶ ನೀಡುವಂತೆ ಅಮೇರಿಕಾದ ಪ್ರಜೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕೇರಳವು ಸೋಂಕನ್ನು ಪರೀಕ್ಷಿಸಲು ತನ್ನ ದೇಶ ಅಮೆರಿಕಾಗಿಂತ ಉತ್ತಮ ಕ್ರಮಗಳನ್ನು ಅನುಸರಿಸುತ್ತಿದೆ ಹಾಗೂ ಅಮೆರಿಕಾಗಿಂತ ಕೇರಳ ಹೆಚ್ಚು ಸುರಕ್ಷಿತವೆಂದು ಅವರು ಹೇಳಿದ್ದಾರೆ.

74 ವರ್ಷದ ರಂಗಭೂಮಿ ಬರಹಗಾರ ಮತ್ತು ನಿರ್ದೇಶಕ ಟೆರ್‍ರಿ ಜಾನ್ ಕಾನ್ವರ್ಸ್, ತಮ್ಮ ವೀಸಾ ಅವಧಿ ಮೇ 17 ಕ್ಕೆ ಮುಕ್ತಾಯವಾಗುವುದರಿಂದ, ಅದನ್ನು ಇನ್ನೂ ಆರು ತಿಂಗಳು ಮುಂದೂಡುವಂತೆ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

“ನ್ಯಾಯಾಲಯವನ್ನು ಸಂಪರ್ಕಿಸುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆ ಇರಲಿಲ್ಲ. ಅಮೆರಿಕಾದಲ್ಲಿ ಪರಿಸ್ಥಿತಿ ಅಪಾಯಕಾರಿಯಾಗಿದೆ. ಭಾರತ ಅದರಲ್ಲೂ ಮುಖ್ಯವಾಗಿ ಕೇರಳ ಅಮೆರಿಕಾಗಿಂತ ವೈರಸ್ ವಿರುದ್ದ ಉತ್ತಮ ಕೆಲಸ ಮಾಡುತ್ತಿದೆ” ಎಂದು ಟೆರ್‍ರಿ ಹೇಳುತ್ತಾರೆ


ಇದನ್ನೂ ಓದಿ: ಲಾಕ್‌ಡೌನ್ ವಿಷಯದಲ್ಲಿ ಕರ್ನಾಟಕಕ್ಕೆ ಕೇರಳ ಮಾದರಿಯಾಗಬಾರದೇಕೆ?


ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ರಂಗಭೂಮಿ ಪ್ರಾಧ್ಯಾಪಕರಾದ ಟೆರ್‍ರಿ, ಸೆಪ್ಟೆಂಬರ್ 28, 2019 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ಅಂದಿನಿಂದ ಅವರು ಹಲವಾರು ನಾಟಕ ಕಾರ್ಯಾಗಾರಗಳನ್ನು ನಡೆಸಿದ್ದರು.

ಟೆರ್‍ರಿ ಮಾರ್ಚ್ 27 ರೊಳಗೆ ಮರಳಬೇಕಾಗಿದ್ದರೂ, ಲಾಕ್‌ಡೌನ್ ಆಗಿದ್ದರಿಂದ ಅವರ ವೀಸಾವನ್ನು ಏಪ್ರಿಲ್ 25 ವರೆಗೆ ವಿಸ್ತರಿಸಲಾಗಿತ್ತು. ನಂತರ ಮತ್ತೇ ಲಾಕ್‌ಡೌನ್ ಅನ್ನು ಮೇ 3 ಕ್ಕೆ ವಿಸ್ತರಿಸಿದ್ದರಿಂದ ವೀಸಾವನ್ನು ಮತ್ತೊಮ್ಮೆ ಮೇ 17 ಕ್ಕೆ ವಿಸ್ತರಿಸಲಾಯಿತು. ಈಗ ಅವರು ಅಮೆರಿಕಾದಲ್ಲಿ ಸಾಂಕ್ರಾಮಿಕದಿಂದ ಉಂಟಾಗಿರುವ ಬೆದರಿಕೆಯಿಂದಾಗಿ ಅಮೆರಿಕಾಗೆ ಹಿಂತಿರುಗುವುದು ಸುರಕ್ಷಿತವಲ್ಲ ಎಂದು ಭಾವಿಸಿದ್ದಾರೆ.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿ, ಅಂತಾರಾಷ್ಟ್ರೀಯ ವಿಮಾನಗಳು ಪ್ರಾರಂಭಿಸದಿದ್ದರೆ ವೀಸಾವನ್ನು ವಿಸ್ತರಿಸಬೇಕಾಗುತ್ತದೆ ಎಂದಿದೆ.

ಟೆರ್‍ರಿ ಈ ಹಿಂದೆ ಮಲಯಾಳಂನ ಪ್ರಸಿದ್ದ ಬರಹಗಾರ ವೈಕಂ ಮುಹಮ್ಮದ್ ಬಶೀರ್ ಅವರ “ವಿಶ್ವವಿಕ್ಯಾತಮಾಯ ಮೂಕ್ಕ್”(ವಿಶ್ವಪ್ರಸಿದ್ಧ ಮೂಗು) ಎಂಬ ಸಣ್ಣ ಕಥೆಯ ನಾಟಕೀಯ ರೂಪಾಂತರವನ್ನು ನಿರ್ದೇಶಿಸಿದ್ದರು.

ಕೃಪೆ: ಮಲಯಾಳಂ ಮನೋರಮ


ಇದನ್ನೂ ಓದಿ: ಕೊರೊನಾ ವಿರುದ್ಧದ ಸಮರದಲ್ಲಿ ಕೇರಳ ಸರ್ಕಾರ ಮತ್ತು ಜನತೆಯ ಪ್ರಬುದ್ಧತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ನಿಯಂತ್ರಣ ಮಾಡುವಲ್ಲಿ ಕೇರಳದ ಸಾದನೆ ಶ್ಲಾಘನೀಯ ಮತ್ತು ಅನುಕರಣನೀಯ.

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...