Homeಮುಖಪುಟಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

ಕೊರೊನ ಸಾವಿನಲ್ಲೂ ರಾಜಕೀಯ: ತುಮಕೂರಿನಲ್ಲಿ ಮಾಜಿ-ಹಾಲಿ ಶಾಸಕರ ಜಟಾಪಟಿ

- Advertisement -
- Advertisement -

ಕೊರೊನ ರೋಗದಿಂದ ರಾಜ್ಯದಲ್ಲಿ ಒಬ್ಬೊಬ್ಬರೇ ಬಲಿಯಾಗುತ್ತಿರುವ ಚಿಂತಾಜನಕ ಸ್ಥಿತಿ ನಮ್ಮ ಕಣ್ಣ ಮುಂದಿದೆ. ಇಂಥ ಸ್ಥಿತಿಯಲ್ಲಿ ಸಾವಿಗೆ ಮರುಗುವ ಮತ್ತು ರೋಗ ನಿವಾರಣೆಗೆ ಪರಿಹಾರ ಕಂಡುಕೊಳ್ಳುವ ಬದಲು ರಾಜಕೀಯ ಮಾಡುತ್ತಿರುವ ಪ್ರಕರಣಗಳು ಅಲ್ಲಲ್ಲಿ ನಡೆಯುತ್ರಿರುವುದು ವರದಿಯಾಗುತ್ತಲೇ ಇವೆ. ವಿಶೇಷವಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಜನರ ನಡುವಿನ ಸಾಮರಸ್ಯ ಹಾಳುಗೆಡವುವ ಯತ್ನ ನಿರಂತರವಾಗಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಜನಮಾನಸದಲ್ಲಿ ಮುಸ್ಲಿಮರ ಕುರಿತು ಕೆಟ್ಟ ಆಲೋಚನೆಗಳನ್ನು ಬಿತ್ತಲಾಗಿದ್ದು, ಬೇರೆಬೇರೆ ಸಮುದಾಯಗಳಿಂದ ವ್ಯಕ್ತವಾಗುತ್ತಿರುವ ಮಾತುಗಳು ಪುಷ್ಟೀಕರಿಸುತ್ತವೆ. ಇದು ಸಹಬಾಳ್ವೆ ಮುರಿದುಬಿದ್ದಿರುವಂಥ ಸಂಗತಿಯನ್ನು ತಿಳಿಸುತ್ತದೆ. ಬಲಪಂಥೀಯ ಸಂಘಟನೆಗಳು, ಕೆಲ ಕೊರೊನ ವಾರಿಯರ್ ಗಳು ಹರಡುತ್ತಿರುವ ಸುಳ್ಳುಸುದ್ದಿಗಳಿಗೆ ಬಿಜೆಪಿ ಮುಖಂಡರು ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಸ್ಲಿಮ್ ಸಮುದಾಯದ ಬಗ್ಗೆ ಸುಳ್ಳುಸುದ್ದಿ ಹರಡಬಾರದೆಂದು ಮನವಿ ಮಾಡಿದರೂ ಅವರ ಮಾತುಗಳು ಲೆಕ್ಕಕ್ಕೆ ಇಲ್ಲವಾಗಿದೆ.

ಇಂಥದ್ದೇ ಒಂದು ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ, ತಾನು ಸ್ಪರ್ಧಿಸುತ್ತಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಕೊರೊನ ಸೋಂಕಿತ ವ್ಯಕ್ತಿಯ ಮೃತದೇಹ ದಫನ್ ಮಾಡಿದ್ದನ್ನೇ ರಾಜಕೀಯಕ್ಕೆ ಎಳೆದುತಂದಿದ್ದಾರೆ. ಪ್ರಬಲರ ಒತ್ತಡದಿಂದ ಮೃತದೇಹದ ಪರೀಕ್ಷೆ ನಡೆಸದೆ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಪ್ರಧಾನಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಎರಡು ಬಾರಿ ಶಾಸಕರಾಗಿದ್ದ ಸುರೇಶ್ ಗೌಡರಿಗೆ ಜವಾಬ್ದಾರಿ ಇರಬೇಕಾಗಿತ್ತು. ಆದರೆ ತನ್ನ ಪಕ್ಷದ ನಾಯಕರನ್ನ ತೃಪ್ತಿಪಡಿಸಲು ಬಾಯಿ ಹರಿಬಿಟ್ಟಿದ್ದಾರೆ.

ತುಮಕೂರಿನ ಜಯಪುರದ ಹೌಸಿಂಗ್ ಬೋರ್ಡ್ ಕಾಲೋನಿಯ 70 ವರ್ಷದ ವೃದ್ದರೊಬ್ಬರು ಏಪ್ರಿಲ್ 26 ರಂದು ಮೃತಪಟ್ಟರು. ಅವರ ಕೊರೊನಾ ಪರೀಕ್ಷೆ ನೆಗೆಟಿವ್ ವರದಿ ಬಂದಿತ್ತು. ಸರಿ ಆರೋಗ್ಯ ಇಲಾಖೆ ಸಂಬಂಧಿಕರಿಗೆ ಅಂದೇ ಮೃತದೇಹ ಹಸ್ತಾಂತರಿಸಿತು. ನಾಗವಲ್ಲಿ ಸಮೀಪದ ರಿಸಾಲದಲ್ಲಿ ಮೃತದೇಹ ದಫನ್ ಮಾಡಿದರು. ಅದಾದ ಮೂರು ದಿನಗಳ ನಂತರ ಅಂದರೆ ಏಪ್ರಿಲ್ 29 ರಂದು ಪರೀಕ್ಷೆಯಲ್ಲಿ ಮೃತವ್ಯಕ್ತಿಗೆ ಕೊರೊನ ಪಾಸೀಟಿವ್ ವರದಿ ಬಂತು. ಮೊದಲು ನೆಗೆಟಿವ್ ಇದ್ದುದು ನಂತರ ಪಾಸಿಟಿವ್ ಹೇಗೆ ಬಂತು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಬಳಿ ಉತ್ತರವಿಲ್ಲ. ಜಿಲ್ಲಾಡಳಿತ ಎಡವಟ್ಟು ಮಾಡಿತೋ? ಇಲ್ಲವೇ ಮತ್ತೆ ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲಾಯಿತೋ ತಿಳಿದುಬಂದಿಲ್ಲ. ಅಂತೂ ಗೊಂದಲ ಸೃಷ್ಟಿಸಿದರು.. ಜನರ ಮನದಲ್ಲೂ ಕೆಟ್ಟ ಬಾವನೆ ಬರುವಂತೆ ನೋಡಿಕೊಂಡರು. ಒಂದು ಸಮುದಾಯ ಮಾನಸಿಕವಾಗಿ ನಲುಗುವಂತೆ ಮಾಡಿದರು.

ನಂತರ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಲಿ ಶಾಸಕ ಗೌರಿಶಂಕರ ಮತ್ತು ಬಿಜೆಪಿಯ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವೆ ವಾಕ್ಸಮರ ನಡೆಯಿತು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತದೇಹ ದಫನ್ ಮಾಡಿ ಕ್ಷೇತ್ರದ ಹೆಸರನ್ನು ಕೆಡಿಸಿದರು ಎಂದು ಗೌರಿಶಂಕರ್ ಹೇಳಿದರೆ, ಪ್ರಬಲರ ಒತ್ತಡದಿಂದ ಇದೆಲ್ಲವೂ ನಡೆದಿದೆ. ತನಿಖೆ ನಡೆಯಲಿ ಎಂದು ಸುರೇಶ್ ಗೌಡ ಒತ್ತಡ ಹೇರಿದ್ದಾರೆ. ಚುನಾವಣೆಯಲ್ಲಿ ಮತಗಳಿಗೆ ಧರ್ಮ ಅಂಟಿಕೊಳ್ಳುವುದಿಲ್ಲ. ಯಾರು ಬೇಕಾದರೂ ಓಟು ಹಾಕಬಹುದು. ಕೊರೊನ ಸೋಂಕು ಬಂದು ಜನ ಸತ್ತರೆ ಸಾವಿನಲ್ಲೂ ಇಂಥ ನಾಚಿಗೇಡಿನ ಮುಖಂಡರು ರಾಜಕೀಯ ಮಾಡುತ್ತಾರೆ. ಅನುಕಂಪ, ಮಾನವೀಯತೆ, ಸಹಬಾಳ್ವೆ, ಭ್ರಾತೃತ್ವ, ಸೋದರತೆ ಇದ್ಯಾವುದೂ ಇವರಿಗೆ ಅರ್ಥವಾದಂತೆ ಕಾಣುತ್ತಿಲ್ಲ. ಇಂಥ ಬೇಜವಾಬ್ದಾರಿ ಮಾಜಿ-ಹಾಲಿ ಶಾಸಕರಿಗೆ ಜನರೇ ತಕ್ಕ ಬುದ್ದಿ ಕಲಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...