Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...