Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...