Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...