Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...