Homeಮುಖಪುಟಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ

ಲಾಕ್‌ಡೌನ್‌ ಶ್ರಮಜೀವಿಗಳ ಬದುಕನ್ನು ದುಸ್ತರಗೊಳಿಸಿದೆ: ಬಡಜನರ ಸ್ಥಿತಿಗತಿ ಬಿಚ್ಚಿಟ್ಟ ಜನಶಕ್ತಿಯ ಅಧ್ಯಯನ ವರದಿ

ಅಧ್ಯಯನದ ಫಲಿತವಾಗಿ ಮುಂದಿಟ್ಟಿರುವ ಹಕ್ಕೊತ್ತಾಯಗಳು ಸಂಪೂರ್ಣವಾಗಿ ಕಾರ್ಯಸಾಧುವಾದವು ಮತ್ತು ನ್ಯಾಯೋಚಿತವಾದವುಗಳಾಗಿದ್ದು ಕೂಡಲೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಕುಮಾರ್‌ ಸಮತಳ, ಮಲ್ಲಿಗೆ ಸಿರಿಮನೆ, ಚಂದ್ರಶೇಖರ್‌, ವರದರಾಜೇಂದ್ರ, ಸತೀಶ್‌ ಮುಂತಾದವರನ್ನು ಒಳಗೊಂಡ ಕರ್ನಾಟಕ ಜನಶಕ್ತಿಯ ಸಾಮಾಜಿಕ ಅಧ್ಯಯನ ಸಮಿತಿ ಒತ್ತಾಯಿಸಿದೆ. 

- Advertisement -
- Advertisement -

ಕೊರೊನಾ ಕಾರಣಕ್ಕಾಗಿ ತೆಗೆದುಕೊಂಡ ಲಾಕ್‌ಡೌನ್‌ನಿಂದಾಗಿ ರಾಜ್ಯದ ಶ್ರಮಿಕರ, ದುಡಿಯುವವರ, ಬಡವರ ಜೀವನ ಅತ್ಯಂತ ಶೋಚನೀಯ ಮಟ್ಟಕ್ಕೆ ತಲುಪಿದೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯು ನಡೆಸಿದ ಸಾಮಾಜಿಕ ಅಧ್ಯಯನ ವರದಿ ತಿಳಿಸಿದೆ.

ಶ್ರಮಜೀವಿಗಳ ಜನಾಗ್ರಹ ಅಭಿಯಾನ ಹೆಸರಿನಲ್ಲಿ ಏಪ್ರಿಲ್ 22 ರಿಂದ 28ರವರೆಗೆ, ಉತ್ತರ ಕರ್ನಾಟಕ, ಹಳೇ ಮೈಸೂರು ಪ್ರಾಂತ್ಯ, ಮುಂಬೈ ಕರ್ನಾಟಕ, ಮಲೆನಾಡು, ಬೆಂಗಳೂರು-ಹೀಗೆ ರಾಜ್ಯದ ವಿವಿಧ ಪ್ರದೇಶಗಳಿಗೆ ಸೇರಿದ 8 ಜಿಲ್ಲೆಗಳ 153 ಮಂದಿಯನ್ನು ಸಂದರ್ಶನ ನಡೆಸಿದ್ದು ಅದರ ವರದಿಯನ್ನು ಮೇ 1ರ ಕಾರ್ಮಿಕ ದಿನಾಚರಣೆಯಂದು ಬಿಡುಗಡೆ ಮಾಡಲಾಗಿದೆ. ವರದಿಯ ಪ್ರಮುಖ ಅಂಶಗಳು ಕೆಳಗಿನಂತಿವೆ.

ಆಹಾರದ ಲಭ್ಯತೆ

ಲಾಕ್‌ಡೌನ್‌ನಿಂದ ಕೂಲಿ, ಸಂಬಳ ಸಿಗದಿರುವುದರಿಂದ ಬಹಳಷ್ಟು ಜನರು ಹಸಿವಿನಿಂದ ನರಳುತ್ತಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಅಧ್ಯಯನ ವರದಿಯೂ ಅದನ್ನೆ ಸೂಚಿಸುತ್ತದೆ. ಮುಂದಿನ ಒಂದು ತಿಂಗಳಿಗೆ ಆಗುವಷ್ಟು ದಿನಸಿ ತರಕಾರಿ ನಿಮಲ್ಲಿ ಲಭ್ಯವಿದೆಯೇ ಎಂಬ ಪ್ರಶ್ನೆಗೆ ಕೇವಲ 11% ಜನರು ಮಾತ್ರ ಅದಕ್ಕೆ ಶಕ್ತರಾಗಿದ್ದು ಉಳಿದ 89% ಜನರಿಗೆ ಆಹಾರದ ಕೊರತೆಯಿರುವುದನ್ನು ವರದಿ ಕಂಡುಕೊಂಡಿದೆ.

ಅಲ್ಲದೇ ದಿನಸಿಗಳನ್ನು ಕೊಳ್ಳಲು ನಿಮ್ಮಲ್ಲಿ ಹಣವಿದೆಯೇ ಎಂಬ ಪ್ರಶ್ನೆಗೆ ಕೇವಲ 6% ಜನ ಮಾತ್ರ ಹೌದು ಎಂದರೆ 94% ಜನರು ಇಲ್ಲ ಎಂದು ಉತ್ತರ ನೀಡಿದ್ದಾರೆ.

ಸರ್ಕಾರಿ ಸೌಲಭ್ಯಗಳು

ಇನ್ನು ಲಾಕ್‌ಡೌನ್‌ ಕಾರಣಕ್ಕಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ಈ ಕುರಿತು ಕೇಳಲಾದ ಪ್ರಶ್ನೆಗೆ ಬಹಳ ನಿರಾಶದಾಯಕ ಉತ್ತರ ಸಿಕ್ಕಿದ್ದು ಶೇ.72% ಜನರು ಕೇವಲ ರೇಷನ್‌ ಸಿಕ್ಕಿದೆ ಎಂದು ಉತ್ತರಿಸಿದ್ದಾರೆ. ಇನ್ನು ಕೇವಲ 2% ಜನರಿಗೆ ಮಾತ್ರ ಹಣಕಾಸಿನ ಸೌಲಭ್ಯಗಳು ಸಿಕ್ಕಿದ್ದು, ಉಳಿದ ಶೇ.76% ಜನರಿಗೆ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ.

ಜನಪ್ರತಿನಿಧಿಗಳ ಸ್ಪಂದನೆ

ಈ ಸಮಯದಲ್ಲಿ ಜನರ ಕಷ್ಟ ನಷ್ಟಕ್ಕೆ ಆಯಾ ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಹೇಗೆ ಪ್ರತಿಕ್ರಿಯಿಸಿದ್ದಾರೆ, ನಿಮ್ಮ ಕಷ್ಟಕ್ಕೆ ಸ್ಪಂದಿಸಿದ್ದಾರೆಯೇ ಎಂಬ ಪ್ರಶ್ನೆಗೆ 30% ಜನರು ಹೌದು ಎಂದಿದ್ದಾರೆ. ಉಳಿದ 70% ಜನರು ಇಲ್ಲ ಎಂದಿದ್ದಾರೆ.

ಅದೇ ಸಂದರ್ಭದಲ್ಲಿ ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ಪಂದಿಸಿದ್ದಾರೆಯೇ ಎಂಬ ಪ್ರಶ್ನೆಗೆ ಶೇ. 46ರಷ್ಟು ಜನರು ಹೌದು ಎಂದಿದ್ದಾರೆ. ಅಲ್ಲಿಗೆ ಜನಪ್ರತಿನಿಧಿಗಳಿಗಿಂತಲೂ ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಮುಂದೇನು?

ಇನ್ನು ಲಾಕ್‌ಡೌನ್‌ ಮುಗಿದ ನಂತರ ನಿಮಗೆ ಮೊದಲು ಮಾಡುತ್ತಿದ್ದ ಕೆಲಸವೇ ಸಿಗುವ ಭರವಸೆಯಿದೆಯೇ ಎಂಬ ಪ್ರಶ್ನೆಗೆ ಬಹಳಷ್ಟು ಜನರು (34%) ಇಲ್ಲ ಎಂಬ ಉತ್ತರ ನೀಡಿದ್ದಾರೆ. 31% ಜನರು ಸಂದೇಹವಿದೆ ಎಂದರೆ, ಕೇವಲ 7% ಜನರಿಗೆ ಮಾತ್ರ ಅದೇ ಕೆಲಸ ಸಿಗುವ ಖಾತ್ರಿಯಿದೆ.

ರೈತರು

ಲಾಕ್‌ಡೌನ್‌ ಇದ್ದರೂ ಕೃಷಿ ಚಟುವಟಿಕೆಗಳಿಗೆ ಮತ್ತು ಸಾಗಾಣಿಕೆ ಮಾರಾಟಕ್ಕೆ ತೊಂದರೆಯಿಲ್ಲ ಎಂದು ಸರ್ಕಾರ ಘೋಷಿಸಿದೆ. ಆದರೆ ಕೇವಲ 2% ಜನ ಮಾತ್ರ ತಮ್ಮ ಬೆಳೆಗಳನ್ನು ಲಾಭಕ್ಕೆ ಮಾರಾಟ ಮಾಡಿದ್ದಾರೆ. ಶೇ.46 ರಷ್ಟು ಜನರ ನಷ್ಟಕ್ಕೆ ಮಾರಿದ್ದಾರೆ. ಶೇ.50% ರಷ್ಟು ಜನರು ಭಾರೀ ಕಷ್ಟಪಟ್ಟು ತಮ್ಮ ಬೆಳೆಗಳನ್ನು ಮಾರಿದ್ದಾರೆ. ಶೇ.2 ರಷ್ಟು ಜನರು ಸ್ವಲ್ಪ ಮಾತ್ರ ಮಾರಿದ್ದಾರೆ.

ಗುತ್ತಿಗೆ ನೌಕರರು/ಕಾರ್ಮಿಕರು

ಗುತ್ತಿಗೆ ನೌಕರರು, ಕಾರ್ಮಿಕರಂತೂ ಸಂಪೂರ್ಣ ಭರವಸೆ ಕಳೆದುಕೊಂಡಿದ್ದಾರೆ. ಅವರಿಗೆ ತಮ್ಮ ಮುಂದಿನ ಭವಿಷದ್ಯದ ಕುರಿತು ಅನಿಶ್ಚಿತತೆ ಕಾಡುತಲಿದೆ.

ಈ ರೀತಿಯಾಗಿ ಒಟ್ಟಾರೆ ಅಧ್ಯಯನವು ಲಾಕಾ‌ಡೌನ್‌ ಯಾವುದೇ ಮುನ್ನೆಚ್ಚರಿಕೆ ಮತ್ತು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳದೇ ಘೋಷಿಸಲಾಗಿದೆ ಎಂಬ ಅಭಿಪ್ರಾಯಕ್ಕೆ ಬಂದಿದೆ. ಅಲ್ಲದೇ ಲಾಕ್‌ಡೌನ್‌ ಮುಗಿದರೂ ಜನರ ಬದುಕು ಯಥಾಸ್ಥಿತಿಗೆ ಬರಲು ಸರ್ಕಾರದ ಬಲವಾದ ಇಚ್ಛಾಶಕ್ತಿ ಮತ್ತು ಮಧ್ಯಪ್ರವೇಶವನ್ನು ಕೇಳುತ್ತದೆ. ಅದಕ್ಕಾಗಿ ಕರ್ನಾಟಕ ಜನಶಕ್ತಿಯ ವರದಿಯಲ್ಲಿ ಸರ್ಕಾರದ ಮುಂದೆ ಒಂದಷ್ಟು ಹಕ್ಕೊತ್ತಾಯಗಳನ್ನು ಇರಿಸಿದೆ.

ಅವುಗಳೆಂದರೆ,

1. ರಾಜ್ಯದ ಪ್ರತಿಯೊಂದು ಶ್ರಮಜೀವಿ ಕುಟುಂಬಕ್ಕೆ ಮೇತಿಂಗಳಿನಿಂದ ಆರಂಭಿಸಿ ಸಂಪೂರ್ಣ ಲಾಕ್‌ಡೌನ್ ತೆರೆದ ನಂತರದ 3 ತಿಂಗಳ ಕಾಲ ಆಹಾರ ಕಿಟ್ ಉಚಿತವಾಗಿ ನೀಡಬೇಕು. ವ್ಯಕ್ತಿಯೊಬ್ಬರಿಗೆ 10 ಕೆ.ಜಿ ಅಕ್ಕಿ ಮತ್ತು ಇತರೆ ಬೇಳೆಕಾಳುಗಳು, ಎಣ್ಣೆ, ಉಪ್ಪು, ಸಂಬಾರು ಪದಾರ್ಥಗಳು ಸೇರಿದಂತೆ ಕುಟುಂಬದ ಆಹಾರ ಅಗತ್ಯಗಳೆಲ್ಲವನ್ನೂ ಅದು ಒಳಗೊಂಡಿರಬೇಕು. ಪೌಷ್ಟಿಕಾಂಶ ಕೊರತೆಯಿಂದ ಸೋಂಕು ಬೇಗ ಬರುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು. ತಮಿಳುನಾಡು ಮತ್ತು ಕೇರಳ ಸರ್ಕಾರಗಳ ಮಾದರಿಯನ್ನು ಎಲ್ಲೆಡೆ ಅನುಷ್ಠಾನಕ್ಕೆ ತರಬೇಕು.

2.   ದುಡಿಯುವ ಜನರ ಕುಟುಂಬಗಳಿಗೆ ನೇರ ವರ್ಗಾವಣೆಯ ಮೂಲಕ ತಿಂಗಳಿಗೆ 7,000₹ ರೂ.ನಂತೆ ಮುಂದಿನ 3 ತಿಂಗಳು ಸಹಾಯ ಧನ ನೀಡಬೇಕು. ಅಲೆಮಾರಿ, ಬುಡಕಟ್ಟು ಜನರು ಸೇರಿದಂತೆ ಬಿಪಿಎಲ್ ಕಾರ್ಡು, ಜನಧನ್ ಅಕೌಂಟುಗಳಿಲ್ಲದ ಯಾರೂ ಇದರಿಂದ ಹೊರಗುಳಿಯದಂತೆ ವ್ಯವಸ್ಥೆ ಆಗಬೇಕು. ದೆಹಲಿ ರಾಜ್ಯ ಸರ್ಕಾರದ ಮಾದರಿಯನ್ನು ಇನ್ನೂ ವಿಸ್ತಾರಗೊಳಿಸಬೇಕು.

3.   ತಾಲೂಕು ಮಟ್ಟದಲ್ಲಿ ಸಾರ್ವಜನಿಕ ಆರೋಗ್ಯ ಕೇತ್ರವನ್ನು ಬಲಪಡಿಸುವುದು ಈ ಸಂದರ್ಭದ ತುರ್ತು ಅಗತ್ಯಗಳಲ್ಲೊಂದಾಗಿದೆ. ವೆಂಟಿಲೇಟರ್, ಆಕ್ಸಿಜನ್, ಡಯಾಲಿಸಿಸ್, ಶಸ್ತ್ರಚಿಕಿತ್ಸೆ ಲಭ್ಯವಿರುವ ಸುಸಜ್ಜಿತ ಘಟಕಗಳು ಪ್ರತಿ ತಾಲೂಕಿನಲ್ಲಿ ಏರ್ಪಾಡಾಗಬೇಕು. ಅಗತ್ಯಬಿದ್ದರೆ ಖಾಸಗಿ ವಲಯದ ಆಸ್ಪತ್ರೆಗಳನ್ನು ಸೂಕ್ತ ಪ್ರಕ್ರಿಯೆಯ ಮೂಲಕ ಸರ್ಕಾರದ ವಶಕ್ಕೆ ಪಡೆಯಬೇಕು. ಆರೋಗ್ಯ ವ್ಯವಸ್ಥೆಯ ತುರ್ತು ಸುಧಾರಣೆ ತಕ್ಷಣದಲ್ಲಿ, ಅಲ್ಪಕಾಲದಲ್ಲಿ ಮತ್ತು ದೀರ್ಘಾವಧಿಯಲ್ಲಿ ದೊಡ್ಡ ಡಿವಿಡೆಂಡ್ ನೀಡುತ್ತದೆ.

4.   ರೈತರು ಬೆಳೆದಿರುವ ಎಲ್ಲಾ ರೀತಿಯ ಬೆಳೆಗಳನ್ನು ಬೆಂಬಲ ಬೆಲೆಯಡಿ ಕೊಂಡುಕೊಂಡು ಎಲ್ಲಾ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ತಲುಪಿಸಬೇಕು. ರೈತರು ಸರಕುಗಳನ್ನು ಮಾರುಕಟ್ಟೆಗೆ ಒಯ್ಯುವಾಗ ಹೈವೇಗಳಲ್ಲಿ ಟೋಲ್‌ಗಳನ್ನು ಈಗಿಂದೀಗಲೇ ರದ್ದುಗೊಳಿಸಬೇಕು.

5.   ಮುಂಗಾರು ಮಳೆಗಾಲ ಆರಂಭವಾಗಿದ್ದು ಎಲ್ಲಾ ರೈತರಿಗೆ ಬೆಳೆ ಬೆಳೆಯಲು ಆಯಾ ಪ್ರದೇಶಕ್ಕೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರಗಳ ಪೂರೈಕೆಗೆ ಯಾವುದೇ ತೊಂದರೆಯಿಲ್ಲದಂತೆ ನೋಡಿಕೊಳ್ಳಬೇಕು. 5 ಎಕರೆಯವರೆಗಿನ ವ್ಯವಸಾಯಕ್ಕೆ ಹಿಂದಿನ ಸುಸ್ತಿಗಳು ಏನೇ ಇದ್ದರೂ, ಕಾಗದ ಪತ್ರಗಳು ಅನುಭೋಗದಾರರ ಬಳಿ ಇರದಿದ್ದರೂ ಶೂನ್ಯ ಬಡ್ಡಿಯ ಸಾಲದ ವ್ಯವಸ್ಥೆ ಮಾಡಬೇಕು.

6.   ಕೊರೋನ ಕಾರಣದಿಂದ ಉದ್ಯೋಗ ಕಳೆದುಕೊಂಡಿರುವ ಎಲ್ಲಾ ಕಾರ್ಮಿಕರಿಗೆ ಲಾಕ್‌ಡೌನ್ ಕಾಲದ ವೇತನವನ್ನು ಖಾತ್ರಿಪಡಿಸಬೇಕು. ಈ ಸಂದರ್ಭದ ದುರುಪಯೋಗ ಮಾಡಿಕೊಳ್ಳಲು ಉದ್ದಿಮೆದಾರರಿಗೆ ಅವಕಾಶ ನೀಡಬಾರದು.

7.   ಕರೋನ ಕಾರಣದಿಂದ ನಷ್ಟ ಹೊಂದಿರುವ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ಮತ್ತು ಗುಡಿ ಕೈಗಾರಿಕೆಗಳಿಗೆ ಸಹಾಯ ಧನ ಘೋಷಿಸಿ ಪೋಷಿಸಬೇಕು.

8.   ಕೊರೋನ ದುಸ್ಥಿತಿಯ ದುರುಪಯೋಗ ಮಾಡಿಕೊಳ್ಳಲು ಹೊರಟಿರುವ ಕಾರ್ಪೋರೇಟ್ ಉದ್ದಿಮೆದಾರರು ಕೆಲಸದ ಅವಧಿಯನ್ನು 8 ಗಂಟೆಯಿಂದ ಹೆಚ್ಚಿಸಲು ಮಾಡುತ್ತಿರುವ ಹುನ್ನಾರದ ಜೊತೆಗೆ ಜನರಿಂದ ಆಯ್ಕೆಯಾದ ಸರ್ಕಾರವು ಶಾಮೀಲಾಗಬಾರದು.

9.  ಆರ್ಥಿಕತೆಯ ಅಭಿವೃದ್ಧಿಗೆ ಮತ್ತು ಹೊಸ ಉದ್ಯೋಗ ಸೃಷ್ಟಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಸ್ಥಳೀಯ ಬೆಳೆಗಳ ಮತ್ತು ಸ್ಥಳೀಯ ಸಂಪನ್ಮೂಲಗಳನ್ನು ಆಧರಿಸಿ ಸ್ಥಳೀಯ ಉದ್ಯೋಗ ಸೃಷ್ಟಿಯ ಎಲ್ಲಾ ಸಾಧ್ಯತೆಗಳನ್ನೂ ಪರಿಶೀಲಿಸಿ ಉತ್ತೇಜನ ನೀಡಬೇಕು.

10.  ನರೇಗಾ ಕೆಲಸದ ಕನಿಷ್ಠ ಕೂಲಿಯನ್ನು 300 ರೂ.ಗಳಿಗೆ ಹೆಚ್ಚಿಸಬೇಕು. ವರ್ಷಕ್ಕೆ 200 ದಿನಗಳಿಗೆ ಹೆಚ್ಚಿಸಬೇಕು. ಕುಟುಂಬಕ್ಕೆ ಒಬ್ಬರು ಎಂಬ ಸೀಲಿಂಗ್ ತೆಗೆಯಬೇಕು. ಒರಿಸ್ಸಾ ಸರ್ಕಾರ ಮಾಡುತ್ತಿರುವ ರೀತಿಯಲ್ಲಿ ನಗರ ಪ್ರದೇಶಕ್ಕೆ ವಿಸ್ತರಿಸಬೇಕು

11. ಗ್ರಾಮೀಣ ಉದ್ಯೋಗ ಖಾತರಿಯ ಮಾದರಿಯಲ್ಲೇ(ನರೇಗಾ) ನಗರ ಉದ್ಯೋಗ ಖಾತರಿ ಯೋಜನೆ ಜಾರಿಮಾಡಬೇಕು

12. ಶ್ರಮಜೀವಿಗಳ ಕುಟುಂಬಗಳಿಗೆ ಶಾಪವಾಗಿರುವ ಹೆಂಡಸಾರಾಯಿಯಿಂದ ಈ ಅವಧಿಯಲ್ಲಿ ತಾತ್ಕಾಲಿಕ ಬಿಡುಗಡೆ ಸಿಕ್ಕಿತ್ತು. ಅದೇ ರೀತಿ ಲಾಕ್‍ಡೌನ್ ತೆರವುಗೊಳಿಸಿದ ನಂತರವೂ ಮದ್ಯನಿಷೇಧ ಮುಂದುವರೆಯಬೇಕು

13. ದುಡಿಯುವ ವರ್ಗದ ಕುಟುಂಬದ ಮಕ್ಕಳಿಗೆ ತೊಂದರೆಯಾಗದಂತೆ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳೆರಡರಲ್ಲೂ ಶುಲ್ಕ ವಿನಾಯಿತಿ ಘೋಷಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಶ್ರಮಿಕರ ಕುಟುಂಬದ ಮಕ್ಕಳ ಶಿಕ್ಷಣ ಮತ್ತು ಶುಲ್ಕಕ್ಕೆ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು.

ಈ ವರದಿಯು ಮುಂದಿಟ್ಟಿರುವ ಅಂಕಿ-ಅಂಶಗಳನ್ನು ಗಮನಿಸಿದಾಗ ಅಧ್ಯಯನದ ಫಲಿತವಾಗಿ ಮುಂದಿಟ್ಟಿರುವ ಹಕ್ಕೊತ್ತಾಯಗಳು ಸಂಪೂರ್ಣವಾಗಿ ಕಾರ್ಯಸಾಧುವಾದವು ಮತ್ತು ನ್ಯಾಯೋಚಿತವಾದವುಗಳಾಗಿದ್ದು ಕೂಡಲೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಕುಮಾರ್‌ ಸಮತಳ, ಮಲ್ಲಿಗೆ ಸಿರಿಮನೆ, ಚಂದ್ರಶೇಖರ್‌, ವರದರಾಜೇಂದ್ರ, ಸತೀಶ್‌ ಮುಂತಾದವರನ್ನು ಒಳಗೊಂಡ ಕರ್ನಾಟಕ ಜನಶಕ್ತಿಯ ಸಾಮಾಜಿಕ ಅಧ್ಯಯನ ಸಮಿತಿ ಒತ್ತಾಯಿಸಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...