Homeನಿಜವೋ ಸುಳ್ಳೋನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ...

ನಟ ರಿಷಿ ಕಪೂರ್ ವೈರಲ್‌ ವಿಡಿಯೋ ಸಾವಿನ ಹಿಂದಿನ ರಾತ್ರಿ ಚಿತ್ರೀಕರಿಸಿದ್ದಲ್ಲ; ನಾವೆಲ್ಲರೂ ಮೂರ್ಖರಾಗಿದ್ದು ಹೀಗೆ…

- Advertisement -
- Advertisement -

ಹಿರಿಯ ನಟ ರಿಷಿ ಕಪೂರ್ ಏಪ್ರಿಲ್ 30ರ ಬೆಳಿಗ್ಗೆ ನಿಧನರಾದರು. ಸ್ವಲ್ಪ ಸಮಯದಲ್ಲಿಯೇ ಮಾಜಿ ನಟಿ ಮತ್ತು ಕಾಂಗ್ರೆಸ್ ಮುಖಂಡೆ ನಗ್ಮಾ ಅವರು ರಿಷಿ ಕಪೂರ್ ಅವರ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡು, “ನಿನ್ನೆ ರಾತ್ರಿಯ ಕ್ಲಿಪ್, ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ವೈದ್ಯರೊಂದಿಗೆ.” ಎಂಬ ಟೈಟಲ್‌ ನೀಡಿದ್ದರು.

ಕೂಡಲೇ ಆ ವಿಡಿಯೋ ಕ್ಲಿಪ್ ಎಲ್ಲೆಡೆ ವೈರಲ್‌ ಆಯಿತು. ಅಲ್ಲದೇ ಹಲವಾರು ಮಾಧ್ಯಮಗಳ ವರದಿಗಳ ಭಾಗವಾಯಿತು. ಕಪೂರ್ ಅವರು ತೀರಿಕೊಳ್ಳುವ ಹಿಂದಿನ ರಾತ್ರಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ, ಆಗಲೂ ಅವರು ಎಷ್ಟು ಆರೋಗ್ಯಕರವಾಗಿ ಸಂತೋಷದಿಂದ ಇದ್ದಾರೆ ಎಮದು ಇಂಡಿಯಾ ಟುಡೆ ಮತ್ತು ನ್ಯೂಸ್ ನೇಷನ್ ಇದನ್ನು ಪ್ರಸಾರ ಮಾಡಿತು.

ಎಬಿಪಿ ನ್ಯೂಸ್, ಫ್ರೀ ಪ್ರೆಸ್ ಜರ್ನಲ್ ಮತ್ತು ದಿ ಟ್ರಿಬ್ಯೂನ್ ಆರಂಭದಲ್ಲಿ ವೀಡಿಯೊ ಕಪೂರ್ ಅವರ “ಕೊನೆಯ ವಿಡಿಯೋ” ಎಂದು ವರದಿ ಮಾಡಿದವು. ಆದರೆ ನಂತರ ವರದಿಗಳನ್ನು ಬದಲಾಯಿಸಿದವು. ದಿ ಟ್ರಿಬ್ಯೂನ್ ತನ್ನ ಟ್ವೀಟ್ ಅನ್ನು ಅಳಿಸಿಹಾಕಿತು ಮತ್ತು ‘ಕೊನೆಯ’ ಎಂಬ ಪದವನ್ನು ತೆಗೆದು ಪೋಸ್ಟ್ ಮಾಡಿತು. ಇತರರು ತಮ್ಮ ವರದಿಗಳನ್ನು ಬದಲಾಯಿಸಿದರು.

ಫ್ಯಾಕ್ಟ್‌ ಚೆಕ್‌:

ವೀಡಿಯೊದಲ್ಲಿ ರಿಷಿ ಕಪೂರ್‌ ಪಕ್ಕ ನಿಂತು ಹಾಡು ಹಾಡಿರುವ ಆ ವ್ಯಕ್ತಿ ಡಿಕೆ ಕುಮಾರ್ ಸಾನು ಎನ್ನಲಾಗಿದೆ. ಆತನ ಕಪೂರ್ ಅವರ 1992ರಲ್ಲಿ ಬಿಡುಗಡೆಯಾದ ಚಲನಚಿತ್ರ ‘ದಿವಾನ’ ದಿಂದ ‘ತೇರೆ ದಾರ್ಡ್ ಸೆ ದಿಲ್ ಆಬಾದ್ ರಾಹಾ’ ಹಾಡು ಹಾಡಿದ್ದಾರೆ. ಈ ವಿಡಿಯೋವನ್ನು ಕಳೆದ ಫೆಬ್ರವರಿ ತಿಂಗಳಿನಲ್ಲಿ ಚಿತ್ರೀಕರಿಸಲಾಗಿದೆ. ಫೆಬ್ರವರಿ 29, 2020ರಂದು ‘ಡಿಕೆ ಕುಮಾರ್ ಸಾನು’ ಅವರ ಯೂಟ್ಯೂಬ್‌ನಲ್ಲಿ ಇದನ್ನು ಅಪ್‌ಲೋಡ್ ಮಾಡಲಗಿದೆ. ಅದರ ಸ್ಕ್ರೀನ್‌ಗ್ರಾಬ್ ಕೆಳಗೆ ಇದೆ.

ಆದರೆ ಅದನ್ನು ಕಪೂರ್‌ ರವರು ನಿಧನರಾದ ಹಿಂದಿನ ರಾತ್ರಿ ಎಂದು ಪ್ರಸಾರ ಮಾಡಿದ್ದರಿಂದ ಬಹಳಷ್ಟು ಜನರು ಅದನ್ನು ನಿಜವೆಂದು ತಿಳಿದು ಸಾಕಷ್ಟು ಸಂಖ್ಯೆಯಲ್ಲಿ ಷೇ‌ರ್‌ ಮಾಡಿದ್ದಾರೆ.

ಆಶ್ಚರ್‍ಯವೆಂದರೆ ಇಂಡಿಯಾ ಟುಡೆ ಚಾನೆಲ್‌ ಸಹ ಇದನ್ನು ಕಪೂರ್‌ ನಿಧನದ ಹಿಂದಿನ ರಾತ್ರಿಯ ಲಾಸ್ಟ್‌ ವಿಡಿಯೋ ಎಂದು ವರದಿ ಪ್ರಸಾರ ಮಾಡಿದೆ. ಯೂಟ್ಯೂಬ್‌ನಲ್ಲಿ ಹಾಕಿದೆ. ಆದರೆ ಸತ್ಯ ತಿಳಿದ ನಂತರ ಅದನ್ನು ಡಿಲಿಟ್‌ ಮಾಡಿದ್ದಲ್ಲದೇ ಅವರೇ ಫ್ಯಾಕ್ಟ್‌ ಚೆಕ್‌ ನಡೆಸಿ ಹಳೆಯ ವಿಡಿಯೋ ಎಂದಿದೆ. ಆ ಚಾನೆಲ್‌ನ ನಿರ್ದೇಶಕರಾದ ರಾಹುಲ್‌ ಕುನ್ವಾಲ್‌ ಫ್ಯಾಕ್ಟ್‌ ಚೆಕ್‌ ವರದಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Fact check: ಕೊರೊನಾ ಹರಡಲು ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದ ಮುಸ್ಲಿಂ ವ್ಯಕ್ತಿ: ಈ ಸುದ್ದಿಯ ಅಸಲಿಯತ್ತೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...