Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...