Homeಕರ್ನಾಟಕಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

ಬಡವನ ಮನೆ ಕಿತ್ತೆಸೆದ ಅರಣ್ಯ ಅಧಿಕಾರಿಗಳು: ಸ್ವೀಕರ್‌ ಕಾಗೇರಿ ಕ್ಷೇತ್ರದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಲಾಕ್‌ಡೌನ್‌ನಿಂದ ಜನರೆಲ್ಲರೂ ಮನೆಯಲ್ಲಿದ್ದಾರೆ. ಮನೆ ಬಿಟ್ಟು ಹೊರಗೆ ಬಾರದೆಂದು ಸರ್ಕಾರ ಸೂಚಿಸಿದೆ. ಆದರೆ ಮನೆಯಲ್ಲಿದ್ದವರನ್ನು ಹೊರಹಾಕಿ, ಬಡವನ ಮನೆಯನ್ನು ನೆಲಸಮಗೊಳಿಸಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಬೇಡ್ಮಣಿ ಗ್ರಾಮ ಪಂಚಾಯ್ತಿಯ ಭಾನ್ಕುಳಿ ಗ್ರಾಮದಲ್ಲಿ ಜರುಗಿದೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆ ಎಂಬುವವರು ಕೂಲಿ ಕಾರ್ಮಿಕರಾಗಿದ್ದು 25 ವರ್ಷಗಳಿಂದ ಭಾನ್ಕುಳಿ ಗ್ರಾಮದಲ್ಲಿ ವಾಸಿಸಿದ್ದಾರೆ. ಅವರ ಹೆಸರಿನಲ್ಲಿ ರೇಷನ್‌ಕಾರ್ಡ್‌ ಇದೆ. 15 ವರ್ಷಗಳಿಂದ ತೆಂಗಿನ ಸಸಿಗಳನ್ನು ನೆಟ್ಟು ಮರಗಳನ್ನಾಗಿ ಮಾಡಿದ್ದಾರೆ. ಅವರು ಸ್ವಂತ ಮನೆಯನ್ನು ಹೊಂದುವುದಕ್ಕಾಗಿ 2017-2018ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ ಅರ್ಜಿ ಹಾಕಿದ್ದಾರೆ. ಅದರನ್ವಯ ಸರ್ಕಾರ ಅವರಿಗೆ ಮನೆ ಕಟ್ಟಿಕೊಡಲು ಷರತ್ತುಬದ್ಧವಾಗಿ ಒಪ್ಪಿದೆ. ಮನೆ ನಿರ್ಮಾಣದ ಅಡಿಪಾಯ ಹಾಕಿ ಹಣ ಸಾಲದಿದ್ದುದ್ದಕ್ಕೆ ಅರ್ಧಕ್ಕೆ ನಿಲ್ಲಿಸಲಾಗಿದೆ. ಅವರು ಪಕ್ಕದಲ್ಲಿ ದನ ಕಟ್ಟುವ ಮನೆಯಲ್ಲಿ ವಾಸಿಸುತ್ತಾ ಬಂದಿದ್ದಾರೆ.

ನಾರಾಯಣ್ ದುರ್ಗಾ ನಾಯ್ಕ್ ನೇರ್ಲಾ ಮನೆಯವರ ಪಡಿತರ ಗುರುತಿನ ಚೀಟಿ

ಅಂತಹ ಮನೆಗೆ ಇಂದು ಏಕಾಏಕಿ ನುಗ್ಗಿದ ಅರಣ್ಯ ಅಧಿಕಾರಿಗಳು ಕ್ಷಣ ಮಾತ್ರದಲ್ಲಿ ನೆಲಸಮ ಮಾಡಿದ್ದಾರೆ. ಅದಕ್ಕೆ ಅವರು ಕೊಟ್ಟಿರುವ ಕಾರಣ ಯಥಾಪ್ರಕಾರ ಅರಣ್ಯ ಒತ್ತುವರಿ ಎಂಬುದಾಗಿದೆ. ಆದರೆ ಮನೆಯ ಮಾಲೀಕರಾದ ನಾರಾಯಣ್ ದುರ್ಗಾ ನಾಯ್ಕ್ ರವರು ಕಳೆದ 25 ವರ್ಷಗಳಿಂದ ಇಲ್ಲಿ ವಾಸಿಸಿದ್ದಾರೆ. ತೆಂಗಿನ ಮರಗಳನ್ನು ಬೆಳೆಸಿದ್ದಾರೆ. ಕಳೆದ 8 ವರ್ಷಗಳಿಂದ ಸರ್ಕಾರದ ವತಿಯಿಂದಲೇ ವಿದ್ಯುತ್‌ ಸಂಪರ್ಕ ಪಡೆದಿದ್ದಾರೆ. ಅಷ್ಟು ಮಾತ್ರವಲ್ಲದೇ 2017-18ರ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ, ಕೃಷ್ಣಪ್ಪನವರು ವಸತಿ ಸಚಿವರಾಗಿದ್ದಾಗಿ ಮನೆ ಕಟ್ಟಲು ಇವರಿಗೆ ಷರತ್ತಬದ್ಧ ಒಪ್ಪಿಗೆ ಪತ್ರವನ್ನು ಸಹ ನೀಡಲಾಗಿದೆ. ಇಷ್ಟೆಲ್ಲ ಇದ್ದರೂ ಕಣ್ಣು ಕಾಣದ ಅರಣ್ಯ ಅಧಿಕಾರಿಗಳು ಅಟ್ಟಹಾಸ ಮೆರೆದಿದ್ದಾರೆ.

ಸರ್ಕಾರದಿಂದ ನೀಡಿರುವ ಅರ್ಹತಾ ಪತ್ರ

ಈ ಕುರಿತು ನಾನುಗೌರಿ.ಕಾಂ ಅಲ್ಲಿನ ಸ್ಥಳೀಯ ನಿವಾಸಿಯಾದ ಗುರುಮೂರ್ತಿ ದೀವ್ರುರವರನ್ನು ಸಂಪರ್ಕಿಸಿತು. ಅವರು “ನಾರಾಯಣ್ ದುರ್ಗಾ ನಾಯ್ಕ್ ರವರು ಬಡವರಾಗಿದ್ದು ಕಳೆದ 25 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದಾರೆ. ಅರಣ್ಯಕ್ಕೆ ಇವರಿಂದ ಯಾವ ತೊಂದರೆಯೂ ಆಗಿಲ್ಲ. ಅರಣ್ಯ ಅಧಿಕಾರಿಗಳು ತಪ್ಪು ಮಾಹಿತಿಯಿಂದ ಈ ಅತಾಚುರ್ಯ ಎಸಗಿದ್ದಾರೆ. ಇಲ್ಲಿಯೇ ಪಕ್ಕದಲ್ಲಿ 50 ಎಕರೆಯನ್ನು ಒತ್ತುವರಿ ಮಾಡಿಕೊಂಡು ಗೋಸ್ವರ್ಗ ಎಂಬ ಕಟ್ಟಡ ಕಟ್ಟಲಾಗಿದೆ. ಹತ್ತಾರು ಬಲಾಢ್ಯ ಜನರು ಒತ್ತುವರಿ ಮಾಡಿದ್ದಾರೆ. ಅವರನ್ನು ಮುಟ್ಟುವ ಧೈರ್‍ಯವಿಲ್ಲದ ಅರಣ್ಯ ಅಧಿಕಾರಿಗಳು ಬಡವನ ಮೇಲೆ ದೌರ್ಜನ್ಯ ಮೆರೆದಿದ್ದಾರೆ” ಎನ್ನುತ್ತಾರೆ.

ಘಟನೆ ನಡೆದ ಬಳಿಕ ನಾವು ಡಿಎಫ್‌ಓ (district forest officer) ಬಳಿ ಮಾತನಾಡಿ ದೂರು ಸಲ್ಲಿಸಿದ್ದೇವೆ. ಕೂಡಲೇ ವಾಪಸ್ ಮನೆ ಕಟ್ಟಿಕೊಡುವುದು ನಿಮ್ಮ ಜವಾಬ್ದಾರಿ ಎಂದು ತಾಕೀತು ಮಾಡಿದ್ದೇವೆ. ಸ್ಥಳೀಯ ಶಾಸಕರ ಗಮನಕ್ಕೆ ತಂದರೂ ಅವರು ಕಾಳಜಿವಹಿಸಿಲ್ಲ ಎಂದರು.

ಸ್ಪೀಕರ್‌ ಕಾಗೇರಿಯವರು ಏನು ಮಾಡುತ್ತಿದ್ದಾರೆ?

ಅರಣ್ಯ ಇಲಾಖೆಯ ಈ ಅತಾಚುರ್ಯದಿಂದಾಗಿ ಬಡವನ ಮನೆ ನೆಲಸಮವಾಗಿದೆ. ಈ ಕುರಿತು ಸ್ಥಳೀಯ ಶಾಸಕರಾದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ದೂರು ನೀಡಲಾಗಿದೆ. ಆದರೂ ಅವರು ಮೌನವಹಿಸಿದ್ದಾರೆ. ಮೇಲ್ನೋಟದಲ್ಲಿಯೇ ಇದರಲ್ಲಿ ಆ ಬಡವನ ತಪ್ಪಿಲ್ಲ ಎಂದು ಅನಿಸಿದರೂ, ಹಲವಾರು ಸಾಕ್ಷಿಗಳಿದ್ದರೂ ಸಹ ಅವರು ಕನಿಷ್ಠ ಕಾಳಜಿವಹಿಸಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಶಾಸಕರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಕೂಡಲೇ ಆ ಬಡವನಿಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಬೇಕಿದೆ. ಮತ್ತೆ ಮನೆ ಕಟ್ಟಿಕೊಟ್ಟು, ಅಚಾತುರ್ಯವೆಸಗಿದ ಅರಣ್ಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಿದೆ.


ಇದನ್ನೂ ಓದಿ: ಕೊರೊನಾ ನಡುವೆಯೇ ಇರುಳಿಗ ಬುಡಕಟ್ಟು ಸಮುದಾಯದ ಮೇಲೆ ಅರಣ್ಯ ಇಲಾಖೆ ದಾಳಿ: ಗುಡಿಸಲುಗಳ ಧ್ವಂಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...