Homeಮುಖಪುಟಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

- Advertisement -
- Advertisement -

ಕೊರೊನಾ ವೈರಸ್ ಟ್ರ್ಯಾಕಿಂಗ್ ಆ್ಯಪ್ ’ಆರೋಗ್ಯ ಸೇತು’ “ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ”ಯಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಏಪ್ರಿಲ್ ಆರಂಭದಲ್ಲಿ ಸ್ವಯಂಪ್ರೇರಿತ ಬಳಕೆಗಾಗಿ ಉದ್ದೇಶಿಸಲಾದ ಈ ಅಪ್ಲಿಕೇಶನ್ ಅನ್ನು ಕೇಂದ್ರ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ಕಡ್ಡಾಯಗೊಳಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಲ್ಲಿ ತಮ್ಮ ಫೋನ್‌ನಲ್ಲಿ ಆ್ಯಪ್ ಇಲ್ಲದಿರುವುದು ಕಂಡುಬಂದಲ್ಲಿ, ಕಂಪನಿಯ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ.

ಈ ಹಿನ್ನೆಲೆಯಲ್ಲಿ “ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದಾರೆ.

ಅಪ್ಲಿಕೇಶನ್‌ನಲ್ಲಿ ಗೌಪ್ಯತೆ ಕಾಳಜಿಗಳ ಬಗ್ಗೆ ಕೆಲವು ತಜ್ಞರು ಹೇಳಿದ್ದನ್ನು ರಾಹುಲ್‌ ಗಾಂಧಿ ಪುನರುಚ್ಚರಿಸಿದ್ದಾರೆ. ಜಿಪಿಎಸ್ ಆಧಾರಿತ ಸ್ಥಳ ದತ್ತಾಂಶವನ್ನು ಬಳಸುವುದು ಒಂದು ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ವಿಸ್ತೃತ ಲಾಕ್‌ಡೌನ್‌ ಆರಂಭವಾಗುವ ಮೇ 04 ರಿಂದ ಪ್ರತಿಯೊಬ್ಬ ಖಾಸಗಿ ಕಂಪನಿಯ ಉದ್ಯೋಗಿಯು ತಮ್ಮ ಮೊಬೈಲ್‌ನಲ್ಲಿ ಆ್ಯಪ್ ಹೊಂದಿರಬೇಕು ಎಂದು ಸರ್ಕಾರ ಹೇಳಿದೆ. ಮನೆಯಿಂದ ಕೆಲಸ ಮಾಡುವವರು ಆ್ಯಪ್ ಬಳಸಬೇಕಾಗಿಲ್ಲ. ಮುಂದಿನ ಕೆಲವು ವಾರಗಳಲ್ಲಿ 30 ಕೋಟಿ ಆ್ಯಪ್ ಡೌನ್‌ಲೋಡ್‌ಗಳನ್ನು ಸಾಧಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಕಂಟೈನ್‌ಮೆಂಟ್‌ ವಲಯದಲ್ಲಿರುವವರು ಪ್ರತಿಯೊಬ್ಬರು ಇದನ್ನು ಹೊಂದಿರಲೇಬೇಕಾಗುತ್ತದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದಾರೆ.

ಅಲ್ಲದೇ “ದೈನಂದಿನ ಹೊಸ ಸುಳ್ಳು. ಆರೋಗ್ಯ ಸೇತು ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ. ಇದು ದೃಢವಾದ ದತ್ತಾಂಶ ಭದ್ರತಾ ಸಾಮರ್ಥ್ಯ ಹೊಂದಿದೆ. ತಮ್ಮ ಜೀವನದುದ್ದಕ್ಕೂ ಕಣ್ಗಾವಲಿನಲ್ಲಿ ತೊಡಗಿರುವವರಿಗೆ, ತಂತ್ರಜ್ಞಾನವನ್ನು ಹೇಗೆ ಉತ್ತಮವಾಗಿ ಬಳಸಿಕೊಳ್ಳಬಹುದು ಎಂದು ತಿಳಿದಿರುವುದಿಲ್ಲ!” ಎಂದು ರವಿಶಂಕರ್‌ ಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಈ ಅಪ್ಲಿಕೇಶನ್‌ನ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) ಶಿಕ್ಷಣ ಸಂಸ್ಥೆಗಳು ಸಹ ಪ್ರೋತ್ಸಾಹಿಸಿವೆ.

ಭಾರತವು ಶನಿವಾರ 2,411 ಪ್ರಕರಣಗಳನ್ನು ಹೊಂದಿದ್ದು ಒಟ್ಟು 37,776 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 1,223 ಸಾವುಗಳು ಈವರೆಗೆ ವರದಿಯಾಗಿವೆ ಎಂದು ಅದು ಹೇಳಿದೆ. ಕಳೆದ 24 ಗಂಟೆಗಳಲ್ಲಿ ಎಪ್ಪತ್ತೊಂದು ಸಾವುಗಳು ವರದಿಯಾಗಿವೆ.


ಇದನ್ನೂ ಓದಿ: ಲಾಕ್ ಡೌನ್ ನಂತರದ ಪ್ರಥಮ ಆದ್ಯತೆ – ಕೃಷಿ ಮತ್ತು ಗ್ರಾಮೀಣ ವಲಯಗಳ ಪುನಶ್ಚೇತನ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...