Homeಮುಖಪುಟಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

ಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

- Advertisement -
- Advertisement -

ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ಗುಂಡಿಗೆ ಪೊಲೀಸ್ ಅಧಿಕಾರಿ ಮತ್ತು ಇಬ್ಬರು ಸೇನಾ ಸೈನಿಕರು ಪ್ರಾಣ ಬಿಟ್ಟಿದ್ದಾರೆ.

ರಾಜಧಾನಿ ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಸಶಸ್ತ್ರ ಪಡೆ ಮತ್ತು ಜಮ್ಮು ಕಾಶ್ಮೀರ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹಲವಾರು ನಾಗರಿಕರನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

“ಕುಪ್ವಾರಾ ಜಿಲ್ಲೆಯ ಹಂದ್ವಾರ ಚಾಂಗಿಮುಲ್ಲಾದ ಮನೆಯೊಂದರಲ್ಲಿ ನಾಗರಿಕ ಕೈದಿಗಳನ್ನು ಭಯೋತ್ಪಾದಕರು ಒತ್ತೆಯಾಳುಗಳಾಗಿ ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನಾ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜಮ್ಮುಕಾಶ್ಮೀರದ ಪೊಲೀಸ್ ಹಾಗೂ ಸೇನೆಯ ಐವರು ಜನರಿರುವ ತಂಡ ನಾಗರೀಕರು ಇರುವ ಭಯೋತ್ಪಾದಕರ ತಾಣದ ಮೇಲೆ ದಾಳಿಮಾಡಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಸೈನ್ಯ ಮತ್ತು ಜಮ್ಮುಕಾಶ್ಮೀರ ಪೊಲೀಸರ ತಂಡವು ಗುರಿ ಪ್ರದೇಶವನ್ನು ಪ್ರವೇಶಿಸಿ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ, ಈ ಪ್ರಕ್ರಿಯೆಯಲ್ಲಿ, ತಂಡವು ಭಯೋತ್ಪಾದಕರಿಂದ ಭಾರೀ ಪ್ರಮಾಣದ ಗುಂಡಿನ ಚಕಮಕಿಗೆ ನಡೆಯಿತು” ಎಂದು ಹೇಳಲಾಗಿದೆ.

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್‌ನಲ್ಲಿ ಗೌರವ ಸಲ್ಲಿಸಿದರು. “ಹಂದ್ವಾರದಲ್ಲಿ ನಮ್ಮ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಯ ನಷ್ಟವು ತುಂಬಾ ನೋವಿನ ವಿಷಯವಾಗಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅವರು ಅನುಕರಣೀಯ ಧೈರ್ಯವನ್ನು ತೋರಿಸಿದರು. ದೇಶಕ್ಕೆ ಸೇವೆಯಲ್ಲಿ ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ಅವರ ಧೈರ್ಯ ಮತ್ತು ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ” ಎಂದು ರಾಜಾನಾಥ್ ಸಿಂಗ್ ಬರೆದಿದ್ದಾರೆ.

“ಕರ್ನಲ್ ಅಶುತೋಷ್ ಶರ್ಮಾ, ಮೇಜರ್ ಅನುಜ್ ಸೂದ್ ಮತ್ತು ಜಮ್ಮುಕಾಶ್ಮೀರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಕೀಲ್ ಖಾಜಿ ಸೇರಿದಂತೆ ಐವರು ಧೈರ್ಯಶಾಲಿ ಸಿಬ್ಬಂದಿಗಳು ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾಗಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಟಿಐಗೆ ತಿಳಿಸಿದ್ದಾರೆ.

ಜಮ್ಮುಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಹುಸೇನ್ “ಸುದೀರ್ಘ ಆತಂಕಿತ ರಾತ್ರಿಯ ನಂತರ, ಕೆಚ್ಚೆದೆಯ ವೀರರು ಹುತಾತ್ಮರಾಗಿದ್ದಾರೆಂಬ ದುಖದ ವಿಚಾರವನ್ನು ಕೇಳುತ್ತಿದ್ದೇವೆ” ಎಂದು ಟ್ವಿಟ್ಟರಿನಲ್ಲಿ ಬರೆದಿದ್ದಾರೆ.

 

ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಕರ್ತವ್ಯದ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಜವಾನರು ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಕೇಳುತ್ತಿದ್ದೇನೆ. ಅವರ ಆತ್ಮಗಳು ಶಾಂತಿಯನ್ನು ಕೋರುತ್ತಿದ್ದೇನೆ ಹಾಗೂ ಅವರ ಕುಟುಂಬಗಳು ಮತ್ತು ಸಹೋದ್ಯೋಗಿಗಳು ಅವರ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಪಡೆದುಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಶೇಷ ಸ್ಥಾನಮಾನ ಕಸಿದ ಬೆನ್ನಿಗೆ, ಜಮ್ಮುಕಾಶ್ಮೀರದ ಜನರ ಸರ್ಕಾರಿ ಹುದ್ದೆಯನ್ನು ಕಸಿದ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...