Homeಮುಖಪುಟಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ...

ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ!

- Advertisement -
- Advertisement -

ಕಳೆದ ಮೂರು ದಿನಗಳಿಂದ ವಲಸೆ ಕಾರ್ಮಿಕರು ತಮ್ಮ ಸ್ವಂತ ಊರುಗಳಿಗೆ ತಲುಪಲು ಪಟ್ಟ ಪಾಡು ಅಷ್ಟಿಷ್ಟಲ್ಲ. ಬೆಂಗಳೂರನ್ನು ಕಟ್ಟಿದ ಈ ಕಾರ್ಮಿಕರು ಒಂದೂವರೆ ತಿಂಗಳು ಕಾದರೂ ಸಹ ಕೊನಗೆ ಕಣ್ಣೀರಿಡುತ್ತಾ ತಮ್ಮ ಊರು ತಲುಪಬೇಕಾದ ಪರಿಸ್ಥಿತಿ ಬಂದಿತ್ತು.

ಮೊದಲು ಕರ್ನಾಟಕ ಸರ್ಕಾರ ಒಬ್ಬ ವ್ಯಕ್ತಿಗೆ ನಿಗಧಿತ ಬಸ್‌ ದರಕ್ಕಿಂತ ಮೂರು ಪಟ್ಟು ಹೆಚ್ಚು ಮಾಡಿತ್ತು. ಕಾರ್ಮಿಕರು ಮತ್ತು ಪ್ರಜ್ಞಾವಂತರಿಂದ ಇದಕ್ಕೆ ಬಲವಾದ ವಿರೋಧ ಬಂತು. ನಂತರ ಸರ್ಕಾರ ಒಂದೇ ದರ ಘೋಷಿಸಿತು. ಈ ಕುರಿತು ವಿರೋಧ ಪಕ್ಷ ಕಾಂಗ್ರೆಸ್‌ ಸರ್ಕಾರದ ಮೇಲೆ ತೀವ್ರ ಟೀಕೆ ಮಾಡಿತು. ಅಷ್ಟೇ ಅಲ್ಲದೇ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬೆಂಗಳೂರಿನ ಮೆಜೆಸ್ಟಿಕ್‌ ನಿಲ್ದಾಣಕ್ಕೆ ತೆರಳಿ ಜನರ ಕಷ್ಟ ಆಲಿಸಿದರು. ಅವರಿಗೆ ನೆರವಾಗಲು ಕಾಂಗ್ರೆಸ್‌ ಪಕ್ಷದಿಂದ 1 ಕೋಟಿ ರೂ ನೆರವು ಘೋಷಿಸಿದರು. ಇದರಿಂದ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರಿಗೆ ತೀವ್ರ ಮುಜುಗರ ಉಂಟಾಯಿತು. ಈ ಸರ್ಕಾರ ಕಾರ್ಮಿಕ ವಿರೋಧಿಯೆಂದು, ಕಾಂಗ್ರೆಸ್‌ ಪಕ್ಷ ಕಾರ್ಮಿಕರ ಪರವೆಂದು ಬಿಂಬಿತವಾಗುವುದು ಅವರಿಗೆ ಸಹಿಸಲಾಗಲ್ಲಿಲ್ಲ. ಹಾಗಾಗಿ ಕೂಡಲೇ ಮೂರು ದಿನಗಳ ಕಾಲ ಕಾರ್ಮಿಕರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದರು!

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ಒಂದು ಕೋಟಿ ರೂ ಚೆಕ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರುಗಳು ಕೆಪಿಸಿಸಿ…

Posted by Indian National Congress – Karnataka on Saturday, May 2, 2020

ಹೌದು ಇದು ನಿಜ. ಕಾಂಗ್ರೆಸ್‌ ಪಕ್ಷದಿಂದ ಕೆಎಸ್‌ಆರ್‌ಟಿಸಿ ಎಂಡಿಗೆ ಒಂದು ಕೋಟಿ ರೂಗಳ ಚೆಕ್‌ ಹಸ್ತಾಂತರವಾಗುತ್ತಿದ್ದಂತೆಯೇ ಅತ್ತ ಮುಖ್ಯಮಂತ್ರಿ ಯಡಿಯೂರಪ್ಪನವರು “ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್.ಆರ್‌.ಟಿ.ಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ಧಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ” ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದಷ್ಟೇ ಕಾರ್ಮಿಕರಿಂದ ಮೂರು ಪಟ್ಟು ಹಣ ವಸೂಲಿಗ ಮುಂದಾಗಿದ್ದ ಸರ್ಕಾರ ಕೂಡಲೇ ಉಚಿತ ಎಂದು ಘೋಷಿಸುವಂತಾಗಿದೆ. ದುಪ್ಪಟ್ಟು ಬಸ್‌ ದರಕ್ಕೆ ಪ್ರಜ್ಞಾವಂತರ, ಕಾರ್ಮಿಕರ, ವಿರೋಧ ಪಕ್ಷಗಳ ತೀವ್ರ ಒತ್ತಡ ಬಂದ ನಂತರ ಅದರಲ್ಲೂ ಕಾಂಗ್ರೆಸ್‌ ಪಕ್ಷ ಒಂದು ಕೋಟಿ ರೂ ನೆರವು ನೀಡಿದ ನಂತರ ಸರ್ಕಾರ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದೆ.

ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿಯು ಕೆಎಸ್ಆರ್ಟಿಸಿ ಎಂಡಿಗೆ 1 ಕೋಟಿ ರುಪಾಯಿ ಚೆಕ್ ನೀಡಿದೆ.

Posted by DK Shivakumar on Saturday, May 2, 2020

ಹಲವು ರಾಜ್ಯಗಳು ಬೇರೆ ಬೇರೆ ರಾಜ್ಯಗಳಲ್ಲಿ ಸಿಕ್ಕಿಕೊಂಡಿರುವ ತಮ್ಮ ಕಾರ್ಮಿಕರನ್ನು ಉಚಿತವಾಗಿ ಆಹಾರ ಸೌಲಭ್ಯ ನೀಡಿ ಕರೆಸಿಕೊಳ್ಳುತ್ತಿವೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ಜಿಲ್ಲೆಯಿಂದ ಜಿಲ್ಲೆಗೆ ಮೂರು ಪಟ್ಟು ಹಣ ನಿಗಧಿ ಮಾಡಿ ರಾಜ್ಯ ಸರ್ಕಾರ ಟೀಕೆಗೊಳಗಾಗಿತ್ತು. ಮೊದಲೇ ಈ ಉಚಿತ ಯೋಜನೆ ಘೋಷಿಸಿದ್ದರೆ ಕಾರ್ಮಿಕರು ಸಂತಸದಿಂದ ತಮ್ಮ ಊರುಗಳನ್ನು ಸೇರುತ್ತಿದ್ದರು. ಈಗ ಈಗಾಗಲೇ ಮೂರು ಪಟ್ಟು ಹಣಕೊಟ್ಟು ಕಣ್ಣೀರಾಕುತ್ತ ಊರೂ ಸೇರಿರುವವರು ಸಹ ಈ ಸರ್ಕಾರವನ್ನು ದೂಷಿಸಲಿದ್ದಾರೆ.

ಏನೇ ಆಗಲಿ ಈಗಲಾದರೂ ಎಲ್ಲಾ ಕಾರ್ಮಿಕರು ತಮ್ಮ ತಮ್ಮ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಬೇಕಿದೆ. ಅವರಿಗೆ ಉಚಿತ ಪ್ರಯಾಣದ ಜೊತೆಗೆ ಮುಂದಿನ ಬದುಕಿನ ಬಗೆಗೂ ಸರ್ಕಾರ ಈಗಲೇ ಮುಂಜಾಗ್ರತೆ ವಹಿಸಬೇಕಿದೆ.


ಇದನ್ನೂ ಓದಿ: ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is fantastic to st. Publics, help from both side equally. We are all voted one another, in the fast.thay came togetherat this critical moments.
    We thank & remember u for ever

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...