Homeಮುಖಪುಟಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

ಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

- Advertisement -
- Advertisement -

ವಲಸೆ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತಲುಪಲು ಇನ್ನು ಹರಸಾಹಸ ಪಡುತ್ತಿದ್ದಾರೆ. ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕಾಂಗ್ರೆಸ್‌ ಒಂದು ಕೋಟಿ ರೂ ನೆರವು ನೀಡಿದೆ. ಅದರ ಬೆನ್ನಿಗೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಬಸ್‌ಗಳಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕಾರ್ಮಿಕರ ಕಷ್ಟ ಕೇಳಲು ಇಂದು ಕಾಂಗ್ರೆಸ್‌ ಪಕ್ಷದ ನಾಯಕರ ದಂಡೇ ಬೆಂಗಳೂರಿನ ಮೆಜೆಸ್ಟಿಕ್‌ಗೆ ಆಗಮಿಸಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಹೆಚ್‌.ಕೆ ಪಾಟೀಲ್, ವಿ.ಎಸ್‌ ಉಗ್ರಪ್ಪ‌ ಉಪಸ್ಥಿತರಿದ್ದು ಕಾರ್ಮಿಕರನ್ನು ಮಾತನಾಡಿಸಿದರು.

ಸಿದ್ದರಾಮಯ್ಯನವರು ಕೆಲ ಕಾರ್ಮಿಕರನ್ನು ಮಾತನಾಡಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜೊತೆಗೆ ಕೊರೊನಾ ಮುಗಿದ ನಂತರ ಕೆಲಸಕ್ಕೆ ವಾಪಸ್‌ ಬೆಂಗಳೂರಿಗೆ ಬರುತ್ತೀರಾ ಎಂದು ಕೇಳಿದರು.

“ವಲಸೆ ಕಾರ್ಮಿಕರು ಬಹಳ ವರ್ಷದಿಂದ ಇಲ್ಲಿ ಕೆಲಸ ಮಾಡಿದ್ದು ಅವರಿಗೆ ಊಟು ವಸತಿಯ ಕೊರತೆಯುಂಟಾಗಿದೆ. ನಾವು ಅವರಿಗೆ ಊಟದ ಕಿಟ್‌ಗಳನ್ನು ನೀಡಿ, ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಅವರ ಊರುಗಳಿಗೆ ಕಳಿಸಿಕೊಡಬೇಕೆಂದು ಒತ್ತಾಯಿಸಿದ್ದೇವು. ಆದರೆ ಸರ್ಕಾರ ಎರಡುಪಟ್ಟು ಬಸ್‌ ದರ ತೆಗೆದುಕೊಳ್ಳುತ್ತಿತ್ತು. ಇದಕ್ಕೆ ಹಣದ ಕೊರತೆಯಿದೆ ಎಂದು ಸರ್ಕಾರ ಹೇಳಿತ್ತು. ಅದಕ್ಕೆ ನಾವು ನಮ್ಮ ಪಕ್ಷದಿಂದ ಕಾರ್ಮಿಕರ ಬಸ್‌ ಚಾರ್ಜ್‌ ನಾವೇ ಕೊಡಲು ತೀರ್ಮಾನಿಸಿದೆವು. ಅದಕ್ಕಾಗಿ ಒಂದು ಕೋಟಿ ರೂ ನೆರವು ಕೊಟ್ಟಿದ್ದೇವೆ. ನಂತರ ಸರ್ಕಾರಕ್ಕೆ ಜ್ಞಾನೋದಯವಾಗಿ ಉಚಿತ ಎಂದಿದ್ದಾರೆ. ಆದರೂ ಬಹಳಷ್ಟು ಊರುಗಳಿಗೆ ಇನ್ನು ಬಸ್‌ ಬಿಟ್ಟಿಲ್ಲ. ಬೆಳಗಾಂ, ಹಾವೇರಿ ಜನ ಕಾಯುತ್ತಿದ್ದಾರೆ. ಖಾಸಗಿ ಬಸ್‌ ವ್ಯವಸ್ಥೆ ಮಾಡಿಯಾದರೂ ಸರಿ ಅವರನ್ನು ಊರಿಗೆ ಕಳಿಸಬೇಕಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿ.ಕೆ ಶಿವಕುಮಾರ್‌ ಮಾತನಾಡಿ, ಈ ಸರ್ಕಾರಕ್ಕೆ ಕಣ್ಣು ಕಿವಿ ಏನೂ ಇಲ್ಲ. ನಾನು ನಿನ್ನೆಯೇ ಹೇಳಿದಂತೆ ಭಿಕ್ಷೆ ಬೇಡಿದರೂ ಸರಿಯೇ ಕಾರ್ಮಿಕರ ಬಸ್‌ ಹಣ ನಾವು ಕೊಡುತ್ತೇವೆ ಎಂದಿದ್ದೆ. ಅದೇ ರೀತಿ ಇಂದು ಒಂದು ಕೋಟಿ ಕೊಡಲು ಬಂದಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ಉಚಿತವಾಗಿ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದ 25 ಎಂಪಿಗಳು ಮನೆಯಲ್ಲಿ ಕೂತಿದ್ದಾರೆ ಎಂದರು.

ನಾವು ಒಂದಷ್ಟು ಊಟದ ಪ್ಯಾಕೆಟ್‌ಗಳನ್ನು ಕಾರ್ಮಿಕರಿಗೆ ಒದಗಿಸಿದ್ದೇವೆ. ಇಲ್ಲಿನ ಪರಿಸ್ಥಿತಿ ಮತ್ತು ವ್ಯವಸ್ಥೆ ಹೇಗಿದೆ ಎಂದು ಪರೀಶಿಲಿಸಲು ಬಂದಿದ್ದೇವೆ. ಆದರೆ ಸರ್ಕಾರ ಇನ್ನೂ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇವೆ ಎಂದರು. ಅಲ್ಲದೇ ಕಾರ್ಮಿಕರು ಕೊರೊನಾ ಮುಗಿದ ನಂತರ ಬೆಂಗಳೂರಿಗೆ ವಾಪಸ್‌ ಬರಬೇಕೆಂದು ಮನವಿ ಮಾಡಿದರು. ಬಸ್‌ ಗಳು ಸಾಲುತ್ತಿಲ್ಲ ಎಂಬ ಪ್ರಶ್ನೆಗೆ ಖಾಸಗಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ನಾವು ಕೂಡ ಹಣ ಕೊಡುತ್ತೇವೆ ಎಂದರು.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...