Homeಸಾಮಾಜಿಕಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

- Advertisement -
- Advertisement -

ಕಳೆದ ನಾಲ್ಕು ವರ್ಷಗಳಿಂದ ದೇಶದ ಹಲವಾರು ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಧ್ವನಿಯನ್ನು ಮೊಟಕುಗೊಳಿಸುವ ಸಂಚಿನಿಂದ ಸುದ್ದಿಯಾಗುತ್ತಲೇ ಇವೆ. ಬಲಪಂಥೀಯ ಮತೀಯವಾದ ಮತ್ತು ಜಾತಿವಾದಕ್ಕೆ ವಿವಿಗಳು ಬಲಿಯಾಗುತ್ತಿವೆ. ಜಾತಿ-ಧರ್ಮವನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಮೈಸೂರು ವಿಶ್ವವಿದ್ಯಾಲಯವು ರೋಹಿತ್ ವೇಮುಲ ಪ್ರಕರಣವನ್ನು ನೆನಪಿಸುವಂತಹ ಪ್ರಕರಣವೊಂದಕ್ಕೆ ಸಾಕ್ಷಿಯಾಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲ.
ಹಾಗೆಂದು ಮೈಸೂರು ಅಥವಾ ಬೆಂಗಳೂರಿನಂತಹ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅಥವಾ ಅಧ್ಯಾಪಕರು ದನಿಯಿಲ್ಲದವರೇನೂ ಅಲ್ಲ. ಮಾನಸ ಗಂಗೋತ್ರಿಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟವು ಕಳೆದ 25 ವರ್ಷಗಳಿಂದ ವಿವಿಯೊಳಗೆ ವಿದ್ಯಾರ್ಥಿಗಳ ಪರವಾದ ಹೋರಾಟಗಳನ್ನು ಮಾಡುತ್ತಾ ಬಂದಿದೆ. 2013ರಲ್ಲಿ ಇತಿಹಾಸ ವಿಭಾಗಕ್ಕೆ ಎಂ.ಎ. ಪದವಿಗಾಗಿ ಪ್ರವೇಶ ಪಡೆದ ಮಹೇಶ್ ಸೋಸಲೆ ಎಂಬ ವಿದ್ಯಾರ್ಥಿ ವಿವಿ ಆಡಳಿತದ ಅಕ್ರಮ ಆಡಳಿತ, ಭ್ರಷ್ಟಾಚಾರ, ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹೇಶ್ ಕಳೆದ ವರ್ಷ ದಲಿತ ವಿದ್ಯಾರ್ಥಿ ಒಕ್ಕೂಟದ ಗೌರವಾಧ್ಯಕ್ಷನಾಗಿ ಆಯ್ಕೆಯಾಗಿದ್ದರು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಅನಾನುಕೂಲಗಳು ಮತ್ತು ವಿವಿಯ ಲೋಪಗಳನ್ನು ಪ್ರಶ್ನಿಸಿದ್ದರು. ಈತ ಎಂ.ಎ ಅಂತಿಮ ಪರೀಕ್ಷೆಯಲ್ಲಿ ಚಿನ್ನದ ಪದಕವನ್ನೂ ಪಡೆದು ತನ್ನ ಮುಡಿಗೇರಿಸಿಕೊಂಡಿದ್ದರು.
ವಿದ್ಯಾಭ್ಯಾಸದಲ್ಲೂ ಮುಂದಿರುವ ಮಹೇಶ್ ಈ ವರ್ಷ ಇತಿಹಾಸ ವಿಭಾಗದಲ್ಲಿಯೇ ಪಿಹೆಚ್‍ಡಿ ಸ್ಕಾಲರ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪಿಹೆಚ್‍ಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಸೀಟುಕೊಡಬೇಕೆಂಬುದು ವಿವಿಯ ನಿಯಮವೂ ಹೌದು. ಆದರೆ ಮಹೇಶ್‍ನನ್ನು ವಿವಿ ಆಡಳಿತ ಹಾಸ್ಟೆಲ್‍ನಿಂದ ಹೊರಗಿಟ್ಟಿತು. ಮಹೇಶ್ ಸೋಸಲೆ ಹಾಸ್ಟೆಲ್‍ನಲ್ಲಿ ಅಕ್ರಮವಾಗಿ ನೆಲೆಸಿದ್ದು ಶೈಕ್ಷಣಿಕ ವಾತವರಣಕ್ಕೆ ಧಕ್ಕೆಯುಂಟು ಮಾಡುತ್ತಿದ್ದಾರೆಂದೂ ಹಾಗೂ ಆಡಳಿತ ವೈಖರಿಯನ್ನು ಪ್ರಶ್ನಿಸುತ್ತಾ ಕಛೇರಿ ಕೆಲಸಕ್ಕೆ ಅಡಚಣೆಯುಂಟುಮಾಡುತ್ತಿದ್ದಾರೆಂದೂ ಆರೋಪಿಸಿ ಮಹೇಶ್‍ನನ್ನು ಕಪ್ಪುಪಟ್ಟಿಗೆ ಸೇರಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಕೋರಿದಲ್ಲಿ ಅವಕಾಶ ಕಲ್ಪಿಸಬಾರದೆಂದು ಆದೇಶವನ್ನೂ ನೀಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಇರುವಾಗ ಈ ವಿದ್ಯಾರ್ಥಿಗೆ ಮಾತ್ರ ಯಾಕೆ ಹೀಗೆ ಎಂದು ನೋಡಿದರೆ ಅಸಲೀ ಸಂಗತಿಗಳು ಬಿಚ್ಚಿಕೊಳ್ಳುತ್ತವೆ. ಮಹೇಶ್ ವಿದ್ಯಾರ್ಥಿ ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಂತರ ವಿವಿಯ ಭ್ರಷ್ಟಾಚಾರಗಳನ್ನು ಪ್ರಶ್ನಿಸುವುದರಲ್ಲಿ ಮೊದಲಿಗನಾಗಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವಂತೆ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಜುಲೈ 10ರಂದು ವಿವಿ ಕಾರ್ಯಸೌಧದ ಎದುರು ಪ್ರತಿಭಟನೆ ಮಾಡಿದ್ದರು. ನಂತರ ಜುಲೈ 17ರಂದು ಡೀನ್ ಆಫೀಸ್ ಮಂಭಾಗ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿ ಬೃಹತ್ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.
ಅದಷ್ಟೇ ಅಲ್ಲದೆ ಕಳೆದ ವರ್ಷ ವಿವಿಯ ಆಡಳಿತವು 124 ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದರಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿವೆ. ನೇಮಕಾತಿಯ ವೇಳೆಯಲ್ಲಿ ಯಾವುದೇ ನೋಟಿಫಿಕೇಷನ್ ನೀಡಿರಲಿಲ್ಲ ಹಾಗೂ ರೋಸ್ಟರ್ ಕೂಡ ಫಾಲೋ ಮಾಡಿರಲಿಲ್ಲವೆಂಬುದು ಆರೋಪ. ಹಾಗಾಗಿ ಈ ನೇಮಕಾತಿ ಅಕ್ರಮವಾದುದ್ದೆಂದು ರಾಜ್ಯಪಾಲರ ಕಛೇರಿಯಿಂದ ಪರಿಶೀಲನೆ ನಡೆದು ಈ ನೇಮಕಾತಿಯನ್ನು ಕೈ ಬಿಡಬೇಕೆಂದು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆದೇಶವನ್ನೂ ಸಹ ನೀಡಲಾಗಿತ್ತು. ಒಂದು ತಿಂಗಳಾದರೂ ಆದೇಶವನ್ನು ಜಾರಿಮಾಡದ ವಿವಿಯ ವಿರುದ್ಧ ವಿದ್ಯಾರ್ಥಿ ಒಕ್ಕೂಟವು ಆಗಸ್ಟ್ 10ರಂದು ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ನಾಯಕತ್ವವನ್ನು ಮಹೇಶ್ ವಹಿಸಿಕೊಂಡಿದ್ದರು. ಜುಲೈ 17ರಂದು ನಡೆದ ಪ್ರತಿಭಟನೆಯನ್ನು ಆಧಾರವಾಗಿ ಇಟ್ಟುಕೊಂಡು ಡೀನ್ ಪ್ರವೀಣ್ ಅವರು ಆಗಸ್ಟ್ 18ರಂದು ಪೋಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ಧ ದೂರು ನೀಡಿ ಎಫ್‍ಐಆರ್ ದಾಖಲಿಸಿದ್ದಾರೆ. ಹಾಸ್ಟೆಲ್ ಆಡಳಿತವು ಈತನ ಹಾಸ್ಟೆಲ್ ಪ್ರವೇಶಾತಿಗೆ ಅನುಮತಿ ನಿರಾಕರಿಸಲು ಕೋರಿ ಕುಲಪತಿಗೆ ಪತ್ರ ಬರೆದಿತ್ತು. ಕೋರಿಕೆಗೆ ಸಮ್ಮತಿಸಿರುವ ಕುಲಪತಿ ಕಛೇರಿ ಕೆಲಸಕ್ಕೆ ಅಡಚಣೆ ಮಾಡಿರುವುದರಿಂದ, ಕಪ್ಪುಪಟ್ಟಿಗೆ ಸೇರಿಸಿದ್ದೇವೆ ಮತ್ತು ಆತನಿಗೆ ಪ್ರವೇಶಾತಿಯನ್ನು ನೀಡಬಾರದೆಂದು ಆಗಸ್ಟ್ 14ರಂದು ಲಿಖಿತವಾಗಿ ಅನುಮತಿ ನೀಡಿದೆ ಹಾಗೂ ಈ ವಿಚಾರವಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದೂ ಸಹ ವಿವಿ ಆಡಳಿತ ಬೆದರಿಕೆ ಹಾಕಿದೆ.
ಆದರೆ, ಮಹೇಶ್‍ನನ್ನು ಕಪ್ಪುಪಟ್ಟಿ ಸೇರಿಸುವುದಾಗಿ ಅಥವಾ ಸೇರಿಸಿರುವುದಾಗಿ ಆತನಿಗೆ ಈವರೆಗೂ ಯಾವುದೇ ನೋಟೀಸ್ ನೀಡಿಲ್ಲ. ಅಲ್ಲದೆ ವಿವಿಯ ಶಿಸ್ತುಪಾಲನಾ ಕಮಿಟಿಯು ಈತನನ್ನು ಇದುವರೆಗೆ ಒಮ್ಮೆಯೂ ವಿಚಾರಣೆಯನ್ನು ಮಾಡಿಲ್ಲ. ತಮ್ಮ ಅಕ್ರಮಗಳ ಬಗೆಗೆ ಪ್ರಶ್ನಿಸುತ್ತಾರೆಂಬ ಒಂದೇ ಒಂದು ಕಾರಣಕ್ಕೆ ಏಕಾಏಕಿ ಹಾಸ್ಟೆಲ್‍ನಿಂದ ಹೊರದಬ್ಬಿದ್ದಾರೆ. ಹಾಸ್ಟೆಲ್ ನಿರಾಕರಣೆಯನ್ನು ಪ್ರಶ್ನಿಸಿ ನನ್ನನ್ನು ಮಾನಸಿಕವಾಗಿ ಹಿಂಸೆಗೆ ಸಿಲುಕಿಸಲು ಕಾರಣವೇನು? ಹಾಗೂ ಪ್ರತಿದಿನ ಊರಿನಿಂದ ಪ್ರಯಾಣ ಮಾಡಿದರೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂದು ಮಹೇಶ್ ಇದುವರೆಗೂ 2 ಬಾರಿ ಪತ್ರ ಬರೆದಿದ್ದಾರೆ. ಆದರೆ ಯಾವುದೇ ಪತ್ರಕ್ಕೂ ಕುಲಪತಿಗಳಿಂದ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಕಳೆದ ಎಂಟು ದಿನಗಳಿಂದ ಹಾಸ್ಟೆಲ್‍ನ ಕಾರಿಡಾರ್‍ನಲ್ಲಿ ವಾಸಿಸುತ್ತಿರುವ ಮಹೇಶ್ ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

university order letter

ಒಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ವಿಷಯದಲ್ಲಿ ನಡೆಯುವ ಅಕ್ರಮಗಳು, ಭ್ರಷ್ಟಾಚಾರಗಳು, ಆಡಳಿತ ದೋಷಗಳನ್ನು ಪ್ರಶ್ನಿಸಿದರೆ ಅವರನ್ನು ಎಲ್ಲಾ ಸೌಕರ್ಯಗಳಿಂದ ಹೊರದಬ್ಬುವುದು ಇತ್ತೀಚಿನ ವರ್ಷಗಳಲ್ಲಿ ಸಹಜ ಎನ್ನುವಂತೆ ಆಗಿಹೋಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವೆಂದೇ ಹೆಸರು ಪಡೆದಿರುವ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮೊಳಗಿಸುತ್ತಿದ್ದ ಪ್ರಜಾತಂತ್ರದ ಧ್ವನಿಯನ್ನು ಹತ್ತಿಕ್ಕಲು ಪಿಎಚ್‍ಡಿ ಸ್ಕಾಲರ್ ಕನ್ಹಯ್ಯ ಕುಮಾರ್‍ನ ಮೇಲೆ ರಾಷ್ಟ್ರದ್ರೋಹಿಯೆಂದು ಬಂಧನದಲ್ಲಿಡಲಾಗಿತ್ತು.
ಆ ಸುದ್ದಿ ಮಾಸುವ ಮೊದಲೇ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಸಂಘಟನೆ ಕಟ್ಟಿಕೊಂಡು ದಲಿತ ವಿದ್ಯಾರ್ಥಿಗಳ ಪರವಾಗಿ ಹಾಗೂ ವಿವಿಯ ದುರಾಡಳಿತ ವಿರುದ್ಧ ಹೋರಾಟ ಮಾಡುತ್ತಿದ್ದ ರೋಹಿತ್ ವೇಮುಲನ ಮೇಲೆ ಆಡಳಿತವು ಬಿದ್ದಿತು. ಎಬಿವಿಪಿ ಗೂಂಡಾಗಳು ರೂಪಿಸಿದ್ದ ಸಂಚಿಗೆ ಕೈ ಜೋಡಿಸಿದ್ದ ಹೆಚ್‍ಸಿಯುನ ಕುಲಪತಿ ಅಪ್ಪಾರಾವ್ ಮತ್ತು ಕೇಂದ್ರ ಸಚಿವೆ ಸ್ಮøತಿ ಇರಾನಿ ವೇಮುಲನ ಫೆಲೋಶಿಪ್ ಕಡಿತಗೊಳಿಸಿ ವಿದ್ಯಾರ್ಥಿ ನಿಲಯದಿಂದ ಹೊರಹಾಕಿದ್ದರು. ತನ್ನ ಫೆಲೋಶಿಪ್ ಕೇಳಿ ಒತ್ತಾಯಿಸಿ ಹೋರಾಡಿದ ವೇಮುಲ 2016ರ ಜನವರಿ 17ರಂದು ತನಗಾದ ಅನ್ಯಾಯದ ಬಗೆಗೆ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇಂತಹ ದೌರ್ಜನ್ಯ ದಬ್ಬಾಳಿಕೆಯ ಪಟ್ಟಿಗೆ ಈಗ ಮೈಸೂರು ವಿವಿಯೂ ಸೇರಿದಂತಾಗಿದೆ. ಇದು ಆಧಿಕಾರದಲ್ಲಿರುವವರ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು ದನಿಯೆತ್ತದಂತೆ ಅವರನ್ನು ನಿಯಂತ್ರಿಸಲು ಸರ್ಕಾರಗಳು ಮತ್ತು ಅಧಿಕಾರಿ ವರ್ಗ ಮಾಡಿರುವ ಹುನ್ನಾರವಾಗಿದೆ. ಮೈಸೂರಿನವರೇ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಇದೆಲ್ಲಾ ಕೇಳಿಸುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...