Homeಸಾಮಾಜಿಕಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

ಮೈಸೂರು ವಿವಿಯಲ್ಲೊಂದು `ವೇಮುಲ’ ಪ್ರಕರಣ

- Advertisement -
- Advertisement -

ಕಳೆದ ನಾಲ್ಕು ವರ್ಷಗಳಿಂದ ದೇಶದ ಹಲವಾರು ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಧ್ವನಿಯನ್ನು ಮೊಟಕುಗೊಳಿಸುವ ಸಂಚಿನಿಂದ ಸುದ್ದಿಯಾಗುತ್ತಲೇ ಇವೆ. ಬಲಪಂಥೀಯ ಮತೀಯವಾದ ಮತ್ತು ಜಾತಿವಾದಕ್ಕೆ ವಿವಿಗಳು ಬಲಿಯಾಗುತ್ತಿವೆ. ಜಾತಿ-ಧರ್ಮವನ್ನು ಆಧಾರವಾಗಿಟ್ಟುಕೊಂಡು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಆದರೆ, ಮೈಸೂರು ವಿಶ್ವವಿದ್ಯಾಲಯವು ರೋಹಿತ್ ವೇಮುಲ ಪ್ರಕರಣವನ್ನು ನೆನಪಿಸುವಂತಹ ಪ್ರಕರಣವೊಂದಕ್ಕೆ ಸಾಕ್ಷಿಯಾಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲ.
ಹಾಗೆಂದು ಮೈಸೂರು ಅಥವಾ ಬೆಂಗಳೂರಿನಂತಹ ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ಅಥವಾ ಅಧ್ಯಾಪಕರು ದನಿಯಿಲ್ಲದವರೇನೂ ಅಲ್ಲ. ಮಾನಸ ಗಂಗೋತ್ರಿಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟವು ಕಳೆದ 25 ವರ್ಷಗಳಿಂದ ವಿವಿಯೊಳಗೆ ವಿದ್ಯಾರ್ಥಿಗಳ ಪರವಾದ ಹೋರಾಟಗಳನ್ನು ಮಾಡುತ್ತಾ ಬಂದಿದೆ. 2013ರಲ್ಲಿ ಇತಿಹಾಸ ವಿಭಾಗಕ್ಕೆ ಎಂ.ಎ. ಪದವಿಗಾಗಿ ಪ್ರವೇಶ ಪಡೆದ ಮಹೇಶ್ ಸೋಸಲೆ ಎಂಬ ವಿದ್ಯಾರ್ಥಿ ವಿವಿ ಆಡಳಿತದ ಅಕ್ರಮ ಆಡಳಿತ, ಭ್ರಷ್ಟಾಚಾರ, ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮಹೇಶ್ ಕಳೆದ ವರ್ಷ ದಲಿತ ವಿದ್ಯಾರ್ಥಿ ಒಕ್ಕೂಟದ ಗೌರವಾಧ್ಯಕ್ಷನಾಗಿ ಆಯ್ಕೆಯಾಗಿದ್ದರು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗುತ್ತಿರುವ ಅನಾನುಕೂಲಗಳು ಮತ್ತು ವಿವಿಯ ಲೋಪಗಳನ್ನು ಪ್ರಶ್ನಿಸಿದ್ದರು. ಈತ ಎಂ.ಎ ಅಂತಿಮ ಪರೀಕ್ಷೆಯಲ್ಲಿ ಚಿನ್ನದ ಪದಕವನ್ನೂ ಪಡೆದು ತನ್ನ ಮುಡಿಗೇರಿಸಿಕೊಂಡಿದ್ದರು.
ವಿದ್ಯಾಭ್ಯಾಸದಲ್ಲೂ ಮುಂದಿರುವ ಮಹೇಶ್ ಈ ವರ್ಷ ಇತಿಹಾಸ ವಿಭಾಗದಲ್ಲಿಯೇ ಪಿಹೆಚ್‍ಡಿ ಸ್ಕಾಲರ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪಿಹೆಚ್‍ಡಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ನಲ್ಲಿ ಸೀಟುಕೊಡಬೇಕೆಂಬುದು ವಿವಿಯ ನಿಯಮವೂ ಹೌದು. ಆದರೆ ಮಹೇಶ್‍ನನ್ನು ವಿವಿ ಆಡಳಿತ ಹಾಸ್ಟೆಲ್‍ನಿಂದ ಹೊರಗಿಟ್ಟಿತು. ಮಹೇಶ್ ಸೋಸಲೆ ಹಾಸ್ಟೆಲ್‍ನಲ್ಲಿ ಅಕ್ರಮವಾಗಿ ನೆಲೆಸಿದ್ದು ಶೈಕ್ಷಣಿಕ ವಾತವರಣಕ್ಕೆ ಧಕ್ಕೆಯುಂಟು ಮಾಡುತ್ತಿದ್ದಾರೆಂದೂ ಹಾಗೂ ಆಡಳಿತ ವೈಖರಿಯನ್ನು ಪ್ರಶ್ನಿಸುತ್ತಾ ಕಛೇರಿ ಕೆಲಸಕ್ಕೆ ಅಡಚಣೆಯುಂಟುಮಾಡುತ್ತಿದ್ದಾರೆಂದೂ ಆರೋಪಿಸಿ ಮಹೇಶ್‍ನನ್ನು ಕಪ್ಪುಪಟ್ಟಿಗೆ ಸೇರಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಕೋರಿದಲ್ಲಿ ಅವಕಾಶ ಕಲ್ಪಿಸಬಾರದೆಂದು ಆದೇಶವನ್ನೂ ನೀಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಇರುವಾಗ ಈ ವಿದ್ಯಾರ್ಥಿಗೆ ಮಾತ್ರ ಯಾಕೆ ಹೀಗೆ ಎಂದು ನೋಡಿದರೆ ಅಸಲೀ ಸಂಗತಿಗಳು ಬಿಚ್ಚಿಕೊಳ್ಳುತ್ತವೆ. ಮಹೇಶ್ ವಿದ್ಯಾರ್ಥಿ ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ನಂತರ ವಿವಿಯ ಭ್ರಷ್ಟಾಚಾರಗಳನ್ನು ಪ್ರಶ್ನಿಸುವುದರಲ್ಲಿ ಮೊದಲಿಗನಾಗಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವಂತೆ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಜುಲೈ 10ರಂದು ವಿವಿ ಕಾರ್ಯಸೌಧದ ಎದುರು ಪ್ರತಿಭಟನೆ ಮಾಡಿದ್ದರು. ನಂತರ ಜುಲೈ 17ರಂದು ಡೀನ್ ಆಫೀಸ್ ಮಂಭಾಗ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿ ಬೃಹತ್ ಪ್ರತಿಭಟನೆಯನ್ನೂ ಸಹ ಮಾಡಿದ್ದಾರೆ.
ಅದಷ್ಟೇ ಅಲ್ಲದೆ ಕಳೆದ ವರ್ಷ ವಿವಿಯ ಆಡಳಿತವು 124 ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದರಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿವೆ. ನೇಮಕಾತಿಯ ವೇಳೆಯಲ್ಲಿ ಯಾವುದೇ ನೋಟಿಫಿಕೇಷನ್ ನೀಡಿರಲಿಲ್ಲ ಹಾಗೂ ರೋಸ್ಟರ್ ಕೂಡ ಫಾಲೋ ಮಾಡಿರಲಿಲ್ಲವೆಂಬುದು ಆರೋಪ. ಹಾಗಾಗಿ ಈ ನೇಮಕಾತಿ ಅಕ್ರಮವಾದುದ್ದೆಂದು ರಾಜ್ಯಪಾಲರ ಕಛೇರಿಯಿಂದ ಪರಿಶೀಲನೆ ನಡೆದು ಈ ನೇಮಕಾತಿಯನ್ನು ಕೈ ಬಿಡಬೇಕೆಂದು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆದೇಶವನ್ನೂ ಸಹ ನೀಡಲಾಗಿತ್ತು. ಒಂದು ತಿಂಗಳಾದರೂ ಆದೇಶವನ್ನು ಜಾರಿಮಾಡದ ವಿವಿಯ ವಿರುದ್ಧ ವಿದ್ಯಾರ್ಥಿ ಒಕ್ಕೂಟವು ಆಗಸ್ಟ್ 10ರಂದು ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯ ನಾಯಕತ್ವವನ್ನು ಮಹೇಶ್ ವಹಿಸಿಕೊಂಡಿದ್ದರು. ಜುಲೈ 17ರಂದು ನಡೆದ ಪ್ರತಿಭಟನೆಯನ್ನು ಆಧಾರವಾಗಿ ಇಟ್ಟುಕೊಂಡು ಡೀನ್ ಪ್ರವೀಣ್ ಅವರು ಆಗಸ್ಟ್ 18ರಂದು ಪೋಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ಧ ದೂರು ನೀಡಿ ಎಫ್‍ಐಆರ್ ದಾಖಲಿಸಿದ್ದಾರೆ. ಹಾಸ್ಟೆಲ್ ಆಡಳಿತವು ಈತನ ಹಾಸ್ಟೆಲ್ ಪ್ರವೇಶಾತಿಗೆ ಅನುಮತಿ ನಿರಾಕರಿಸಲು ಕೋರಿ ಕುಲಪತಿಗೆ ಪತ್ರ ಬರೆದಿತ್ತು. ಕೋರಿಕೆಗೆ ಸಮ್ಮತಿಸಿರುವ ಕುಲಪತಿ ಕಛೇರಿ ಕೆಲಸಕ್ಕೆ ಅಡಚಣೆ ಮಾಡಿರುವುದರಿಂದ, ಕಪ್ಪುಪಟ್ಟಿಗೆ ಸೇರಿಸಿದ್ದೇವೆ ಮತ್ತು ಆತನಿಗೆ ಪ್ರವೇಶಾತಿಯನ್ನು ನೀಡಬಾರದೆಂದು ಆಗಸ್ಟ್ 14ರಂದು ಲಿಖಿತವಾಗಿ ಅನುಮತಿ ನೀಡಿದೆ ಹಾಗೂ ಈ ವಿಚಾರವಾಗಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದೂ ಸಹ ವಿವಿ ಆಡಳಿತ ಬೆದರಿಕೆ ಹಾಕಿದೆ.
ಆದರೆ, ಮಹೇಶ್‍ನನ್ನು ಕಪ್ಪುಪಟ್ಟಿ ಸೇರಿಸುವುದಾಗಿ ಅಥವಾ ಸೇರಿಸಿರುವುದಾಗಿ ಆತನಿಗೆ ಈವರೆಗೂ ಯಾವುದೇ ನೋಟೀಸ್ ನೀಡಿಲ್ಲ. ಅಲ್ಲದೆ ವಿವಿಯ ಶಿಸ್ತುಪಾಲನಾ ಕಮಿಟಿಯು ಈತನನ್ನು ಇದುವರೆಗೆ ಒಮ್ಮೆಯೂ ವಿಚಾರಣೆಯನ್ನು ಮಾಡಿಲ್ಲ. ತಮ್ಮ ಅಕ್ರಮಗಳ ಬಗೆಗೆ ಪ್ರಶ್ನಿಸುತ್ತಾರೆಂಬ ಒಂದೇ ಒಂದು ಕಾರಣಕ್ಕೆ ಏಕಾಏಕಿ ಹಾಸ್ಟೆಲ್‍ನಿಂದ ಹೊರದಬ್ಬಿದ್ದಾರೆ. ಹಾಸ್ಟೆಲ್ ನಿರಾಕರಣೆಯನ್ನು ಪ್ರಶ್ನಿಸಿ ನನ್ನನ್ನು ಮಾನಸಿಕವಾಗಿ ಹಿಂಸೆಗೆ ಸಿಲುಕಿಸಲು ಕಾರಣವೇನು? ಹಾಗೂ ಪ್ರತಿದಿನ ಊರಿನಿಂದ ಪ್ರಯಾಣ ಮಾಡಿದರೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ ಎಂದು ಮಹೇಶ್ ಇದುವರೆಗೂ 2 ಬಾರಿ ಪತ್ರ ಬರೆದಿದ್ದಾರೆ. ಆದರೆ ಯಾವುದೇ ಪತ್ರಕ್ಕೂ ಕುಲಪತಿಗಳಿಂದ ಪ್ರತಿಕ್ರಿಯೆ ನೀಡಿಲ್ಲ. ಹಾಗಾಗಿ ಕಳೆದ ಎಂಟು ದಿನಗಳಿಂದ ಹಾಸ್ಟೆಲ್‍ನ ಕಾರಿಡಾರ್‍ನಲ್ಲಿ ವಾಸಿಸುತ್ತಿರುವ ಮಹೇಶ್ ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

university order letter

ಒಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ವಿಷಯದಲ್ಲಿ ನಡೆಯುವ ಅಕ್ರಮಗಳು, ಭ್ರಷ್ಟಾಚಾರಗಳು, ಆಡಳಿತ ದೋಷಗಳನ್ನು ಪ್ರಶ್ನಿಸಿದರೆ ಅವರನ್ನು ಎಲ್ಲಾ ಸೌಕರ್ಯಗಳಿಂದ ಹೊರದಬ್ಬುವುದು ಇತ್ತೀಚಿನ ವರ್ಷಗಳಲ್ಲಿ ಸಹಜ ಎನ್ನುವಂತೆ ಆಗಿಹೋಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯವೆಂದೇ ಹೆಸರು ಪಡೆದಿರುವ ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮೊಳಗಿಸುತ್ತಿದ್ದ ಪ್ರಜಾತಂತ್ರದ ಧ್ವನಿಯನ್ನು ಹತ್ತಿಕ್ಕಲು ಪಿಎಚ್‍ಡಿ ಸ್ಕಾಲರ್ ಕನ್ಹಯ್ಯ ಕುಮಾರ್‍ನ ಮೇಲೆ ರಾಷ್ಟ್ರದ್ರೋಹಿಯೆಂದು ಬಂಧನದಲ್ಲಿಡಲಾಗಿತ್ತು.
ಆ ಸುದ್ದಿ ಮಾಸುವ ಮೊದಲೇ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಸಂಘಟನೆ ಕಟ್ಟಿಕೊಂಡು ದಲಿತ ವಿದ್ಯಾರ್ಥಿಗಳ ಪರವಾಗಿ ಹಾಗೂ ವಿವಿಯ ದುರಾಡಳಿತ ವಿರುದ್ಧ ಹೋರಾಟ ಮಾಡುತ್ತಿದ್ದ ರೋಹಿತ್ ವೇಮುಲನ ಮೇಲೆ ಆಡಳಿತವು ಬಿದ್ದಿತು. ಎಬಿವಿಪಿ ಗೂಂಡಾಗಳು ರೂಪಿಸಿದ್ದ ಸಂಚಿಗೆ ಕೈ ಜೋಡಿಸಿದ್ದ ಹೆಚ್‍ಸಿಯುನ ಕುಲಪತಿ ಅಪ್ಪಾರಾವ್ ಮತ್ತು ಕೇಂದ್ರ ಸಚಿವೆ ಸ್ಮøತಿ ಇರಾನಿ ವೇಮುಲನ ಫೆಲೋಶಿಪ್ ಕಡಿತಗೊಳಿಸಿ ವಿದ್ಯಾರ್ಥಿ ನಿಲಯದಿಂದ ಹೊರಹಾಕಿದ್ದರು. ತನ್ನ ಫೆಲೋಶಿಪ್ ಕೇಳಿ ಒತ್ತಾಯಿಸಿ ಹೋರಾಡಿದ ವೇಮುಲ 2016ರ ಜನವರಿ 17ರಂದು ತನಗಾದ ಅನ್ಯಾಯದ ಬಗೆಗೆ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇಂತಹ ದೌರ್ಜನ್ಯ ದಬ್ಬಾಳಿಕೆಯ ಪಟ್ಟಿಗೆ ಈಗ ಮೈಸೂರು ವಿವಿಯೂ ಸೇರಿದಂತಾಗಿದೆ. ಇದು ಆಧಿಕಾರದಲ್ಲಿರುವವರ ದುರಾಡಳಿತದ ವಿರುದ್ಧ ವಿದ್ಯಾರ್ಥಿಗಳು ದನಿಯೆತ್ತದಂತೆ ಅವರನ್ನು ನಿಯಂತ್ರಿಸಲು ಸರ್ಕಾರಗಳು ಮತ್ತು ಅಧಿಕಾರಿ ವರ್ಗ ಮಾಡಿರುವ ಹುನ್ನಾರವಾಗಿದೆ. ಮೈಸೂರಿನವರೇ ಆಗಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಇದೆಲ್ಲಾ ಕೇಳಿಸುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...