Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...