Homeಚಳವಳಿಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ಬಡವರ ಜೀವ ಪಣಕ್ಕಿಡಬೇಡಿ: ಮದ್ಯ ನಿಷೇಧಕ್ಕೆ ಆಗ್ರಹಿಸಿ ಪತ್ರ ಚಳವಳಿ 

ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು.

- Advertisement -
- Advertisement -

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಕಾರಣಕ್ಕಾಗಿ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ. ಆದರೆ ಇಂದು ಎರಡನೇ ಹಂತದ ಲಾಕ್‌ಡೌನ್‌ ಕೊನೆಗೊಳ್ಳಲಿದ್ದು ನಾಳೆಯಿಂದ ಮೂರನೇ ಹಂತದ ಲಾಕ್‌ಡೌನ್‌ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಹಳಷ್ಟು ಜನರು ಆತಂಕಿತರಾಗಿದ್ದು, ಮದ್ಯ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮದ್ಯ ನಿಷೇಧ ಆಂದೋಲನದ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಸಹ ಬರೆದಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಮಾನ್ಯ ಯಡಿಯೂರಪ್ಪನವರು
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

ಮಾನ್ಯರೇ ,

ಮಹಾಮಾರಿಯಂತೆ ಬಂದೆರಗಿರುವ ಕೊರೋನಾದ ಲಾಕ್‍ಡೌನ್, ಬಡವರ ಪಾಲಿಗೆ ಸಂಕಷ್ಟಗಳ ಮೂಟೆಯನ್ನೇ ಹೊತ್ತು ತಂದಿದೆ. ಕೊರೋನಾ ಕಾರಣವಾಗಿ ಮದ್ಯದಂಗಡಿಗಳನ್ನು ಮುಚ್ಚಿಸಿದ್ದು ಮಾತ್ರ ಕುಡುಕರ ಕುಟುಂಬದ ಹೆಣ್ಣುಮಕ್ಕಳಿಗೆ ಕೊಂಚ ನೆಮ್ಮದಿಯನ್ನು ಕೊಟ್ಟಿತ್ತು. ರೇಷನ್ನಿನ ಬರಿಯ ಅಕ್ಕಿಯ ಗಂಜಿಯನ್ನೇ ಕುಡಿದಿರಬಹುದು, ಆದರೆ ಮನೆಯವರೆಲ್ಲ ಹಂಚಿಕೊಂಡು ಕುಡಿದಿದ್ದರು. ಅಪ್ಪ ಕುಡಿದು ಬಂದು ಅಮ್ಮನಿಗೆ ಪೆಟ್ಟು ಕೊಡುವುದು ನಿಂತಿದ್ದರಿಂದ ಮಕ್ಕಳು ಸಮಾಧಾನದ ನಿದ್ದೆ ಮಾಡಿದ್ದವು. ಬಹಳ ದಿನಗಳ ನಂತರ ಮದ್ಯದ ದುಃಸಪ್ನವಿಲ್ಲದೇ ಬಹಳಷ್ಟು ಕುಟುಂಬಗಳು ನೆಮ್ಮದಿಯ ಉಸಿರುಬಿಟ್ಟಿದ್ದವು. ಚಟಕ್ಕೆ ಬಿದ್ದವರೂ ಒಂದೂವರೆ ತಿಂಗಳಿಂದ ಮದ್ಯವಿಲ್ಲದೇ, ಪ್ರಾರಂಭದಲ್ಲಿ ದೈಹಿಕ, ಮಾನಸಿಕ ತೊಂದರೆ ಅನುಭವಿಸಿದರೂ ಈಗ ಎಲ್ಲ ಮೀರಿ ಸಮಚಿತ್ತವನ್ನು ಗಳಿಸಿಕೊಂಡಿದ್ದಾರೆ. ಹೆಚ್ಚಿನವರು ಈಗ ಮದ್ಯನಿಷೇಧದ ಪರವಾಗಿದ್ದಾರೆ.

ನಾವು ತಮ್ಮ ಗಮನಕ್ಕೆ ತರುತ್ತಿರುವುದು ಏನೆಂದರೆ- ಈಗ ಮದ್ಯ ಮಾರಾಟ ಮತ್ತೆ ಪ್ರಾರಂಭಿಸಿದರೆ,  ಕುಡಿದ ಮತ್ತಿನಲ್ಲಿ ಸೋಂಕು ಅಂಟಿಸುವ ಯಾವ ಅನಾಹುತಕಾರಿ ಕೆಲಸವನ್ನಾದರೂ ಕುಡುಕರು ಮಾಡುವ ಸಾಧ್ಯತೆ ಹೆಚ್ಚುತ್ತದೆ. ಮತ್ತೆ ಈ ಕಾರಣಕ್ಕೇ ಸೋಂಕು ವ್ಯಾಪಕವಾದರೆ ಅದರ ಹೊಣೆ ಯಾರದ್ದು? ಲಾಕ್‍ಡೌನ್ ನಿಯಂತ್ರಿಸಲು ಹರಸಾಹಸ ಪಟ್ಟು ಹೈರಾಣಾಗಿರುವ ಪೊಲೀಸರು ಈಗ ಮದ್ಯದಂಗಡಿ ಮುಂದೆ ಕುಡುಕರನ್ನೂ ಕಾಯಬೇಕು! ಜೀವ ಪಣಕ್ಕಿಟ್ಟು ಹಗಲಿರುಳು ಜನರ ಜೀವ ರಕ್ಷಿಸಲು ಹೋರಾಡುತ್ತಿರುವ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಮೇಲೆ ಮತ್ತಷ್ಟು ಈ ಆತಂಕದ ಹೊರೆ ಹೊರಿಸಿದಂತಾಗುತ್ತದೆ. ಮದ್ಯದಂಗಡಿ ತೆರೆಯದಿರಲು ಇಷ್ಟೆಲ್ಲ ಗಂಭೀರ ಸಕಾರಣಗಳಿವೆ. ಆದರೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ,  ‘ಮದ್ಯ ಮಾರಾಟಗಾರರ ಹಿತಾಸಕ್ತಿಗೆ ಸರ್ಕಾರ ಮಣಿದಿದೆ’ ಎಂಬ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ನಾಡಿನ ಸ್ವಾಸ್ಥ್ಯ ಮತ್ತು ಜನರ ಆರೋಗ್ಯವನ್ನು ದಯಮಾಡಿ ಪಣಕ್ಕಿಡಬೇಡಿ ಎಂದು ಮನವಿ ಮಾಡುತ್ತೇವೆ.

ಸರಕಾರಕ್ಕೆ ಆದಾಯ ಬೇಕು ನಿಜ.  ಅದಕ್ಕಾಗಿ ಕೋಟಿಗಟ್ಟಲೆ  ಸಂಪತ್ತಿರುವ ಸಿರಿವಂತರಿಗೆ ‘ಕೊರೋನಾ ತೆರಿಗೆ’ ಹಾಕುವುದು ಹಾಗೂ ಮುಜರಾಯಿ ದೇವಸ್ಥಾನಗಳ ಹಣ, ಬಂಗಾರ ಬಳಸಿಕೊಳ್ಳುವುದು ಇವುಗಳೇ ಮುಂತಾದ ಹಲವು ನೈತಿಕ, ಯೋಗ್ಯ ದಾರಿಗಳಿವೆ. ಈ ದಿಕ್ಕಲ್ಲಿ ತಾವು ಯೋಚಿಸಬೇಕೆಂದು ವಿನಂತಿಸುತ್ತೇವೆ. ಆದರೆ ಯಾವ ಕಾರಣಕ್ಕೂ ನೊಂದ ಹೆಣ್ಮಕ್ಕಳ ಬೆವರು, ರಕ್ತ, ಕಣ್ಣೀರಿನಿಂದ ಕಟ್ಟಿರುವ ಲಕ್ಷಾಂತರ ಕುಟುಂಬಗಳು, ಈ ಮದ್ಯ ಮಾರಾಟವಿಲ್ಲದ ದಿನಗಳಲ್ಲಿ ಅನುಭವಿಸಿದ ಕೊಂಚ ನೆಮ್ಮದಿಯನ್ನೂ ಸರ್ಕಾರದ ಆದಾಯದ ಹೆಸರಲ್ಲಿ ಒದ್ದು ಒರೆಸಿ ಹಾಕಿ, ಜೀವಗಳ ಬಲಿ ಕೇಳಬೇಡಿ ಎಂದು  ಪ್ರಾರ್ಥಿಸುತ್ತೇವೆ.  ದಯಮಾಡಿ ‘ಬಡವರ ಬದುಕು, ಜೀವ ಪಣಕ್ಕಿಡಬೇಡಿ. ಮದ್ಯದಂಗಡಿ ತೆರೆಯಬೇಡಿ’ ಎಂದು ಲಕ್ಷಾಂತರ ನೊಂದ ಮಹಿಳೆ ಮತ್ತು ಮಕ್ಕಳ ಪರವಾಗಿ ಇದು ನಮ್ಮ ಕಳಕಳಿಯ ಮನವಿ.

ರೂಪ ಹಾಸನ ಹಾಸನ ಮತ್ತು
ಶಾರದಾ ಗೋಪಾಲ , ಧಾರವಾಡ


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...