Homeಮುಖಪುಟವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ

ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಮರಳಲು ರೈಲು ಪ್ರಯಾಣದ ಶುಲ್ಕವನ್ನು ವಿಧಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ಭಾರೀ ಟೀಕಾಪ್ರಹಾರ ಮಾಡಿವೆ.

ಕೊರೊನಾ ವೈರಸ್ ಅನ್ನು ಎದುರಿಸಲು ದೇಶಾದ್ಯಂತದ ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಲಾಗುತ್ತಿದ್ದಂತೆ, ಕೇಂದ್ರ ಸರ್ಕಾರವು ಶುಕ್ರವಾರದಿಂದ ವಿಶೇಷ ರೈಲುಗಳನ್ನು ಓಡಿಸಲು ಪ್ರಾರಂಭಿಸಿದೆ. ಹಲವಾರು ರಾಜ್ಯಗಳು ರೈಲು ಪ್ರಯಾಣಕ್ಕೆ ಶುಲ್ಕ ವಿಧಿಸಬಾರದು ಎಂದು ಕೇಂದ್ರದ ಬಳಿ ಬೇಡಿಕೆ ಇಟ್ಟಿದ್ದವು, ಆದರೆ ರಾಜ್ಯಗಳ ಬೇಡಿಕೆಗೆ ವಿರುದ್ಧವಾಗಿ, ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ ರೈಲು ಶುಲ್ಕ ವಿಧಿಸುತ್ತಿದೆ.

ಕೇಂದ್ರವು ಟಿಕೆಟ್ ನೀಡುವ ಮತ್ತು ಶುಲ್ಕವನ್ನು ಸಂಗ್ರಹಿಸುವ ಉಸ್ತುವಾರಿಯನ್ನು ರಾಜ್ಯ ಸರ್ಕಾರಗಗಳಿಗೆ ವಹಿಸಿದೆ. ಅನೇಕ ರಾಜ್ಯಗಳು, ಅದರಲ್ಲೂ ಹೆಚ್ಚಾಗಿ ಪ್ರತಿಪಕ್ಷಗಳು ಆಳುವ ರಾಜ್ಯಗಳು ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸುತ್ತಿವೆ.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ “ಮನೆಗೆ ಹಿಂದಿರುಗುವ ವಲಸಿಗರನ್ನು ಬಿಜೆಪಿ ಸರ್ಕಾರವು ರೈಲು ಪ್ರಯಾಣಕ್ಕೆ ಹಣ ಪಾವತಿಸಲು ಕೇಳಿಕೊಳ್ಳುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಆಡಳಿತಗಾರ ಸರ್ಕಾರವು ಬಂಡವಾಳಶಾಹಿಗಳು ಹಾಗೂ ಉದ್ಯಮಿಗಳಿಗೆ ಸಾಲವನ್ನು ಮನ್ನಾ ಮಾಡುತ್ತದೆ ಮತ್ತು ಶ್ರೀಮಂತರನ್ನು ಬೆಂಬಲಿಸುತ್ತದೆ ಎಂಬುದಕ್ಕೆ ಇಂದು ಸ್ಪಷ್ಟವಾಗಿದೆ. ದುರಂತದ ಸಮಯದಲ್ಲಿ ಶೋಷಣೆ ಮಾಡುವುದು ಹಣದಾಸೆದಾರರ ಕೆಲಸವೇ ಹೊರತು ಸರ್ಕಾರದ್ದಲ್ಲ.”ಎಂದು ಟ್ವೀಟ್ ಮಾಡಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ “ನಾವು ರೈಲು ಪ್ರಯಾಣಕ್ಕೆ ಹಣ ಪಾವತಿಸಲು ವಲಸಿಗ ಕಾರ್ಮಿಕರನ್ನು ಕೇಳುವುದಿಲ್ಲ. ಅವರು ಈಗಾಗಲೇ ಬಹಳ ತೊಂದರೆಯಲ್ಲಿದ್ದಾರೆ. ಕೇಂದ್ರವು ಅವರ ಹಣ ಪಾವತಿಸಲು ನಿರಾಕರಿಸಿದರೆ ನಮ್ಮ ಜಾರ್ಖಂಡ್ ಸರ್ಕಾರವು ಹಣ ಒದಗಿಸಲು ಬೇರೆ ಮಾರ್ಗಗಳನ್ನು ಹುಡುಕುತ್ತದೆ ಆದರೆ ವಲಸಿಗರಿಗೆ ಹಣ ಪಾವತಿಸಲು ನಾವು ಖಂಡಿತವಾಗಿಯೂ ಕೇಳುವುದಿಲ್ಲ” ಎಂದು ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಸಾರ್ವಕಾಲಿಕ ಕಡಿಮೆ ಇರುವ ಸಮಯದಲ್ಲಿ ಕೇಂದ್ರವು ರಾಜ್ಯಗಳಿಗೆ ಆರ್ಥಿಕ ಒತ್ತಡವನ್ನುಂಟುಮಾಡುತ್ತಿದೆ ಎಂದು ಚತ್ತೀಸ್‌ಘಡ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಹೋಗದಂತೆ ತಡೆಯುತ್ತಿರುವ ಸರ್ಕಾರದ ಕ್ರೌರ್ಯದ ಗಣಿತ: ಶಿವಸುಂದರ್‌ 


ವಿಡಿಯೊ ನೋಡಿ: ನಿಮ್ಮ ಸುತ್ತಲಿರುವ ಕಾರ್ಮಿಕರಿಗೆ ಸಹಾಯ ಮಾಡಲು ನಿಮಗೊಂದು ಅವಕಾಶ.‌ ಹೀಗೆ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...