Homeಮುಖಪುಟದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪಲು ರೈಲು ದರ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ ಎಂದು ಘೋಷಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು “ಟ್ರಂಪ್ ಭೇಟಿಯ ವೇಳೆ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ 100 ಕೋಟಿ ಖರ್ಚು ಮಾಡಲಾಗಿದೆ. ಅಲ್ಲದೇ ಪಿಎಂ-ಕೇರ್ಸ್ ನಿಧಿಗೆ ರೈಲ್ವೆ ಇಲಾಖೆಯು 151 ಕೋಟಿ ರೂ ಕೊಡುಗೆ ನೀಡಿದೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಸರ್ಕಾರವು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಹಾಗಾಗಿ “ನಮ್ಮ ಆರ್ಥಿಕತೆಯ ಬೆನ್ನೆಲುಬು” ಮತ್ತು “ನಮ್ಮ ರಾಷ್ಟ್ರದ ಬೆಳವಣಿಗೆಯ ರಾಯಭಾರಿಗಳಾದ ಕಾರ್ಮಿಕರ ರೈಲುದರವನ್ನು ಕಾಂಗ್ರೆಸ್‌ ಪಾವತಿಸಲಿದೆ ಎಂದಿದ್ದಾರೆ.

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

“ವಿದೇಶದಲ್ಲಿ ಸಿಲುಕಿರುವ ನಮ್ಮ ನಾಗರಿಕರಿಗೆ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸುವ ಮೂಲಕ ನಮ್ಮ ಸರ್ಕಾರವು ತನ್ನ ಜವಾಬ್ದಾರಿಯನ್ನು ಮೆರೆದಿದೆ. ಆದರೆ ನಮ್ಮದೇ ರಾಷ್ಟ್ರದಲ್ಲಿರುವ ಕಾರ್ಮಿಕರಿಗೆ ಅದೇ ಸೌಜನ್ಯ ಏಕೆ ತೋರಿಸಲಾಗುವುದಿಲ್ಲ” ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ 

ಕೇಂದ್ರವು ಲಾಕ್ ಡೌನ್ ಘೋಷಿಸುವ ಮುನ್ನ ಯಾವುದೇ ನೋಟಿಸ್ ನೀಡಿರಲಿಲ್ಲ. ಕೇವಲ ನಾಲ್ಕು ಗಂಟೆ ಸಮಯ ಕೊಟ್ಟು ಲಾಕ್‌ಡೌನ್‌ ಘೋಷಿಸಲಾಯಿತು. ಆದ್ದರಿಂದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಮರಳಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.


“1947ರ ವಿಭಜನೆಯ ನಂತರ, ಭಾರತವು ಇಂತಹ ಬೃಹತ್ ಮಾನವ ವೆಚ್ಚದೊಂದಿಗೆ ಒಂದು ದುರಂತಕ್ಕೆ ಸಾಕ್ಷಿಯಾಯಿತು, ಏಕೆಂದರೆ ಸಾವಿರಾರು ವಲಸೆ ಕಾರ್ಮಿಕರು ಮತ್ತು ಕಾರ್ಮಿಕರು ಆಹಾರವಿಲ್ಲದೆ, ಸಾರಿಗೆಯಿಲ್ಲದೆ, ಔಷಧಿಯಿಲ್ಲದೆ ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ನಡೆದು ಮನೆಗೆ ತೆರಳಬೇಕಾಯಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಲ್ಲಿಗೆ ಮರಳುವ ಬಯಕೆಯನ್ನು ಹೊರತುಪಡಿಸಿ, ಅವರಲ್ಲಿ ಏನೇನೂ ಉಳಿದಿರಲ್ಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂದಿಗೂ, ಲಕ್ಷಾಂತರ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡು ನರಳುತ್ತಿದ್ದಾರೆ. ಅವರ ಮನೆ ಮತ್ತು ಕುಟುಂಬಗಳಿಗೆ ಮರಳಲು ಬಯಸಿದರೂ ಅವರ ಬಳಿ ಹಣವಿಲ್ಲ. ಸರ್ಕಾರ ಉಚಿತ ಸಾರಿಗೆ ಒದಗಿಸಿಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು ರೈಲು ಟಿಕೆಟ್‌ಗಾಗಿ ಶುಲ್ಕ ವಿಧಿಸುತ್ತಿರುವುದು ಗೊಂದಲದ ಸಂಗತಿಯಾಗಿದೆ ಎಂದಿದ್ದಾರೆ.

“ಆದ್ದರಿಂದ, ಪ್ರತಿ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ ಸಮಿತಿಯು ಪ್ರತಿ ನಿರ್ಗತಿಕ ಕಾರ್ಮಿಕ ಮತ್ತು ವಲಸೆ ಕಾರ್ಮಿಕರ ರೈಲು ಪ್ರಯಾಣದ ವೆಚ್ಚವನ್ನು ಪ್ರತಿ ಪ್ರದೇಶ ಕಾಂಗ್ರೆಸ್ ಸಮಿತಿಯು ಭರಿಸಲಿದೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಇದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ಇಲ್ಲಿನ ಬಿಜೆಪಿ ಸರ್ಕಾರ ರಾಜ್ಯದೊಳಗಿನ ಬಸ್‌ ಸಾರಿಗೆಗೆ ಮೂರು ಪಟ್ಟು ಬಸ್‌ ದರ ವಿಧಿಸಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷವು ಉಚಿತ ಪ್ರಯಾಣ ಒದಗಿಸಿ ಎಂದು ಒಂದು ಕೋಟಿ ರೂ ನೆರವು ಘೋಷಿಸಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...