Homeಮುಖಪುಟದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪಲು ರೈಲು ದರ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ ಎಂದು ಘೋಷಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು “ಟ್ರಂಪ್ ಭೇಟಿಯ ವೇಳೆ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ 100 ಕೋಟಿ ಖರ್ಚು ಮಾಡಲಾಗಿದೆ. ಅಲ್ಲದೇ ಪಿಎಂ-ಕೇರ್ಸ್ ನಿಧಿಗೆ ರೈಲ್ವೆ ಇಲಾಖೆಯು 151 ಕೋಟಿ ರೂ ಕೊಡುಗೆ ನೀಡಿದೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಸರ್ಕಾರವು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಹಾಗಾಗಿ “ನಮ್ಮ ಆರ್ಥಿಕತೆಯ ಬೆನ್ನೆಲುಬು” ಮತ್ತು “ನಮ್ಮ ರಾಷ್ಟ್ರದ ಬೆಳವಣಿಗೆಯ ರಾಯಭಾರಿಗಳಾದ ಕಾರ್ಮಿಕರ ರೈಲುದರವನ್ನು ಕಾಂಗ್ರೆಸ್‌ ಪಾವತಿಸಲಿದೆ ಎಂದಿದ್ದಾರೆ.

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

“ವಿದೇಶದಲ್ಲಿ ಸಿಲುಕಿರುವ ನಮ್ಮ ನಾಗರಿಕರಿಗೆ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸುವ ಮೂಲಕ ನಮ್ಮ ಸರ್ಕಾರವು ತನ್ನ ಜವಾಬ್ದಾರಿಯನ್ನು ಮೆರೆದಿದೆ. ಆದರೆ ನಮ್ಮದೇ ರಾಷ್ಟ್ರದಲ್ಲಿರುವ ಕಾರ್ಮಿಕರಿಗೆ ಅದೇ ಸೌಜನ್ಯ ಏಕೆ ತೋರಿಸಲಾಗುವುದಿಲ್ಲ” ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ 

ಕೇಂದ್ರವು ಲಾಕ್ ಡೌನ್ ಘೋಷಿಸುವ ಮುನ್ನ ಯಾವುದೇ ನೋಟಿಸ್ ನೀಡಿರಲಿಲ್ಲ. ಕೇವಲ ನಾಲ್ಕು ಗಂಟೆ ಸಮಯ ಕೊಟ್ಟು ಲಾಕ್‌ಡೌನ್‌ ಘೋಷಿಸಲಾಯಿತು. ಆದ್ದರಿಂದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಮರಳಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.


“1947ರ ವಿಭಜನೆಯ ನಂತರ, ಭಾರತವು ಇಂತಹ ಬೃಹತ್ ಮಾನವ ವೆಚ್ಚದೊಂದಿಗೆ ಒಂದು ದುರಂತಕ್ಕೆ ಸಾಕ್ಷಿಯಾಯಿತು, ಏಕೆಂದರೆ ಸಾವಿರಾರು ವಲಸೆ ಕಾರ್ಮಿಕರು ಮತ್ತು ಕಾರ್ಮಿಕರು ಆಹಾರವಿಲ್ಲದೆ, ಸಾರಿಗೆಯಿಲ್ಲದೆ, ಔಷಧಿಯಿಲ್ಲದೆ ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ನಡೆದು ಮನೆಗೆ ತೆರಳಬೇಕಾಯಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಲ್ಲಿಗೆ ಮರಳುವ ಬಯಕೆಯನ್ನು ಹೊರತುಪಡಿಸಿ, ಅವರಲ್ಲಿ ಏನೇನೂ ಉಳಿದಿರಲ್ಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂದಿಗೂ, ಲಕ್ಷಾಂತರ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡು ನರಳುತ್ತಿದ್ದಾರೆ. ಅವರ ಮನೆ ಮತ್ತು ಕುಟುಂಬಗಳಿಗೆ ಮರಳಲು ಬಯಸಿದರೂ ಅವರ ಬಳಿ ಹಣವಿಲ್ಲ. ಸರ್ಕಾರ ಉಚಿತ ಸಾರಿಗೆ ಒದಗಿಸಿಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು ರೈಲು ಟಿಕೆಟ್‌ಗಾಗಿ ಶುಲ್ಕ ವಿಧಿಸುತ್ತಿರುವುದು ಗೊಂದಲದ ಸಂಗತಿಯಾಗಿದೆ ಎಂದಿದ್ದಾರೆ.

“ಆದ್ದರಿಂದ, ಪ್ರತಿ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ ಸಮಿತಿಯು ಪ್ರತಿ ನಿರ್ಗತಿಕ ಕಾರ್ಮಿಕ ಮತ್ತು ವಲಸೆ ಕಾರ್ಮಿಕರ ರೈಲು ಪ್ರಯಾಣದ ವೆಚ್ಚವನ್ನು ಪ್ರತಿ ಪ್ರದೇಶ ಕಾಂಗ್ರೆಸ್ ಸಮಿತಿಯು ಭರಿಸಲಿದೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಇದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ಇಲ್ಲಿನ ಬಿಜೆಪಿ ಸರ್ಕಾರ ರಾಜ್ಯದೊಳಗಿನ ಬಸ್‌ ಸಾರಿಗೆಗೆ ಮೂರು ಪಟ್ಟು ಬಸ್‌ ದರ ವಿಧಿಸಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷವು ಉಚಿತ ಪ್ರಯಾಣ ಒದಗಿಸಿ ಎಂದು ಒಂದು ಕೋಟಿ ರೂ ನೆರವು ಘೋಷಿಸಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...