Homeಮುಖಪುಟದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪಲು ರೈಲು ದರ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ ಎಂದು ಘೋಷಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು “ಟ್ರಂಪ್ ಭೇಟಿಯ ವೇಳೆ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ 100 ಕೋಟಿ ಖರ್ಚು ಮಾಡಲಾಗಿದೆ. ಅಲ್ಲದೇ ಪಿಎಂ-ಕೇರ್ಸ್ ನಿಧಿಗೆ ರೈಲ್ವೆ ಇಲಾಖೆಯು 151 ಕೋಟಿ ರೂ ಕೊಡುಗೆ ನೀಡಿದೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಸರ್ಕಾರವು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಹಾಗಾಗಿ “ನಮ್ಮ ಆರ್ಥಿಕತೆಯ ಬೆನ್ನೆಲುಬು” ಮತ್ತು “ನಮ್ಮ ರಾಷ್ಟ್ರದ ಬೆಳವಣಿಗೆಯ ರಾಯಭಾರಿಗಳಾದ ಕಾರ್ಮಿಕರ ರೈಲುದರವನ್ನು ಕಾಂಗ್ರೆಸ್‌ ಪಾವತಿಸಲಿದೆ ಎಂದಿದ್ದಾರೆ.

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

“ವಿದೇಶದಲ್ಲಿ ಸಿಲುಕಿರುವ ನಮ್ಮ ನಾಗರಿಕರಿಗೆ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸುವ ಮೂಲಕ ನಮ್ಮ ಸರ್ಕಾರವು ತನ್ನ ಜವಾಬ್ದಾರಿಯನ್ನು ಮೆರೆದಿದೆ. ಆದರೆ ನಮ್ಮದೇ ರಾಷ್ಟ್ರದಲ್ಲಿರುವ ಕಾರ್ಮಿಕರಿಗೆ ಅದೇ ಸೌಜನ್ಯ ಏಕೆ ತೋರಿಸಲಾಗುವುದಿಲ್ಲ” ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ 

ಕೇಂದ್ರವು ಲಾಕ್ ಡೌನ್ ಘೋಷಿಸುವ ಮುನ್ನ ಯಾವುದೇ ನೋಟಿಸ್ ನೀಡಿರಲಿಲ್ಲ. ಕೇವಲ ನಾಲ್ಕು ಗಂಟೆ ಸಮಯ ಕೊಟ್ಟು ಲಾಕ್‌ಡೌನ್‌ ಘೋಷಿಸಲಾಯಿತು. ಆದ್ದರಿಂದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಮರಳಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.


“1947ರ ವಿಭಜನೆಯ ನಂತರ, ಭಾರತವು ಇಂತಹ ಬೃಹತ್ ಮಾನವ ವೆಚ್ಚದೊಂದಿಗೆ ಒಂದು ದುರಂತಕ್ಕೆ ಸಾಕ್ಷಿಯಾಯಿತು, ಏಕೆಂದರೆ ಸಾವಿರಾರು ವಲಸೆ ಕಾರ್ಮಿಕರು ಮತ್ತು ಕಾರ್ಮಿಕರು ಆಹಾರವಿಲ್ಲದೆ, ಸಾರಿಗೆಯಿಲ್ಲದೆ, ಔಷಧಿಯಿಲ್ಲದೆ ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ನಡೆದು ಮನೆಗೆ ತೆರಳಬೇಕಾಯಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಲ್ಲಿಗೆ ಮರಳುವ ಬಯಕೆಯನ್ನು ಹೊರತುಪಡಿಸಿ, ಅವರಲ್ಲಿ ಏನೇನೂ ಉಳಿದಿರಲ್ಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂದಿಗೂ, ಲಕ್ಷಾಂತರ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡು ನರಳುತ್ತಿದ್ದಾರೆ. ಅವರ ಮನೆ ಮತ್ತು ಕುಟುಂಬಗಳಿಗೆ ಮರಳಲು ಬಯಸಿದರೂ ಅವರ ಬಳಿ ಹಣವಿಲ್ಲ. ಸರ್ಕಾರ ಉಚಿತ ಸಾರಿಗೆ ಒದಗಿಸಿಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು ರೈಲು ಟಿಕೆಟ್‌ಗಾಗಿ ಶುಲ್ಕ ವಿಧಿಸುತ್ತಿರುವುದು ಗೊಂದಲದ ಸಂಗತಿಯಾಗಿದೆ ಎಂದಿದ್ದಾರೆ.

“ಆದ್ದರಿಂದ, ಪ್ರತಿ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ ಸಮಿತಿಯು ಪ್ರತಿ ನಿರ್ಗತಿಕ ಕಾರ್ಮಿಕ ಮತ್ತು ವಲಸೆ ಕಾರ್ಮಿಕರ ರೈಲು ಪ್ರಯಾಣದ ವೆಚ್ಚವನ್ನು ಪ್ರತಿ ಪ್ರದೇಶ ಕಾಂಗ್ರೆಸ್ ಸಮಿತಿಯು ಭರಿಸಲಿದೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಇದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ಇಲ್ಲಿನ ಬಿಜೆಪಿ ಸರ್ಕಾರ ರಾಜ್ಯದೊಳಗಿನ ಬಸ್‌ ಸಾರಿಗೆಗೆ ಮೂರು ಪಟ್ಟು ಬಸ್‌ ದರ ವಿಧಿಸಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷವು ಉಚಿತ ಪ್ರಯಾಣ ಒದಗಿಸಿ ಎಂದು ಒಂದು ಕೋಟಿ ರೂ ನೆರವು ಘೋಷಿಸಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...