Homeಮುಖಪುಟವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರವು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್​ಗಳ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸುವುದನ್ನು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ತೀವ್ರವಾಗಿ ಖಂಡಿಸಿದೆ.

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ನಿಝಾಮುಧ್ಥಿನ್ ಪತ್ರಿಕಾ ಹೇಳಿಕೆ ನೀಡಿದ್ದು, ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಂದಾಗಿ ಶಿಕ್ಷಣದ ವ್ಯಾಪಾರೀಕರಣಕ್ಕೆ ಅವಕಾಶವಾಗುತ್ತಿದೆ. ಕೊರೊನಾ ಲಾಕ್‌ಡೌನ್‌ನಿಂದ ಜನರು ಸಾಕಷ್ಟು ಬಳಲಿರುವಾಗ ಸರ್ಕಾರ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

2020-21 ಸಾಲಿಗೆ ಅನ್ವಯವಾಗುವಂತೆ ಖಾಸಗಿ ಕೋಟಾದಡಿಯಲ್ಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಕ್ಲಿನಿಕಲ್‌ ಸೀಟುಗಳಿಗೆ ಶೇ 30% ಅಂದರೆ ಈಗಿರುವ ರೂ 8.7 ಲಕ್ಷದಿಂದ ರೂ 11.5 ಲಕ್ಷದವರೆಗೆ ಹೆಚ್ಚಳವಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟಿನ ಶುಲ್ಕವನ್ನು ಶೇ 20% ಅಂದರೆ ರೂ 5.8 ಲಕ್ಷದಿಂದ ರೂ 7.13 ಲಕ್ಷವರೆಗೆ ಹೆಚ್ಚಿಸಲಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯ ವೇತನ ಇತರೆ ರಾಜ್ಯಗಳಿಗೆ ಹೋಲಿಸಿದರೆ ತುಂಬಾ ಕಡಿಮೆಯಿದೆ. ಈ ಕಡಿಮೆ ಶಿಷ್ಯ ವೇತನವೂ ಸಹ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಸೀಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಭರಿಸಲು ಶಿಕ್ಷಣದ ಸಾಲುಗಳನ್ನು ಪಡೆದುಕೊಳ್ಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಲಾಕ್ ಡೌನ್ ಜಾರಿ ಈ ಇರುವುದರಿಂದ ತೀವ್ರ ಆರ್ಥಿಕ ಸಂಕಷ್ಟಗಳಿಂದ ಜನರು ನರಳುತ್ತಿದ್ದಾರೆ. ಈ ಕೊರೋನಾ ಲಾಕ್ ಡೌನ್ ಸಂದರ್ಭವನ್ನು ಸರ್ಕಾರ ಶುಲ್ಕ ಹೆಚ್ಚಳ ಮಾಡಲು ದುರ್ಬಳಕೆ ಮಾಡಿಕೊಂಡು (ಇಂತಹ ಸಮಯದಲ್ಲಿ ವಿದ್ಯಾರ್ಥಿ ಸಮುದಾಯ ಹೋರಾಟ ನಡೆಸಲು ಸಹ ಅವಕಾಶವಿಲ್ಲದಂತಾಗಿದೆ.) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಿಸಿ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಲಾಗಿದೆ.

ಪ್ರತಿವರ್ಷವೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಏರಿಕೆ ಮಾಡುತ್ತಿದೆ ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತಗೊಳಿಸುವ ನೀತಿಯನ್ನು ಅನುಸರಿಸುತ್ತಿರುವುದು ದೇಶದ ಭವಿಷ್ಯಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಲಾಗಿದೆ.

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಶಿಕ್ಷಣದ ನೀಡಲು ಶುಲ್ಕ ಇಳಿಸಲು ಮುಂದಾಗಬೇಕು. ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಹಾಗೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಏಕರೂಪ ಶಾಸನ ಜಾರಿಗೆ ತರಬೇಕು ಎಂದು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ಒತ್ತಾಯಿಸುತ್ತಿದೆ.


ಇದನ್ನೂ ಓದಿ: ಗ್ರಾಮಭಾರತ – 2: ಭದ್ರಾವತಿಗೆ ಬಾರದ ತಮಿಳುನಾಡಿನ ಭತ್ತ ಕಟಾವು ಯಂತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...