Homeಮುಖಪುಟವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶುಲ್ಕ ಹೆಚ್ಚಳಕ್ಕೆ ಫ್ರೆಟರ್ನಿಟಿ ಮೂವ್ಮೆಂಟ್ ಖಂಡನೆ

ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತವಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.

- Advertisement -
- Advertisement -

ಕರ್ನಾಟಕ ರಾಜ್ಯ ಸರ್ಕಾರವು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್​ಗಳ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸುವುದನ್ನು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ತೀವ್ರವಾಗಿ ಖಂಡಿಸಿದೆ.

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ನಿಝಾಮುಧ್ಥಿನ್ ಪತ್ರಿಕಾ ಹೇಳಿಕೆ ನೀಡಿದ್ದು, ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಂದಾಗಿ ಶಿಕ್ಷಣದ ವ್ಯಾಪಾರೀಕರಣಕ್ಕೆ ಅವಕಾಶವಾಗುತ್ತಿದೆ. ಕೊರೊನಾ ಲಾಕ್‌ಡೌನ್‌ನಿಂದ ಜನರು ಸಾಕಷ್ಟು ಬಳಲಿರುವಾಗ ಸರ್ಕಾರ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ. ಕೂಡಲೇ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

2020-21 ಸಾಲಿಗೆ ಅನ್ವಯವಾಗುವಂತೆ ಖಾಸಗಿ ಕೋಟಾದಡಿಯಲ್ಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಕ್ಲಿನಿಕಲ್‌ ಸೀಟುಗಳಿಗೆ ಶೇ 30% ಅಂದರೆ ಈಗಿರುವ ರೂ 8.7 ಲಕ್ಷದಿಂದ ರೂ 11.5 ಲಕ್ಷದವರೆಗೆ ಹೆಚ್ಚಳವಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟಿನ ಶುಲ್ಕವನ್ನು ಶೇ 20% ಅಂದರೆ ರೂ 5.8 ಲಕ್ಷದಿಂದ ರೂ 7.13 ಲಕ್ಷವರೆಗೆ ಹೆಚ್ಚಿಸಲಾಗಿದೆ.

ಇದೇ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳ ಶಿಷ್ಯ ವೇತನ ಇತರೆ ರಾಜ್ಯಗಳಿಗೆ ಹೋಲಿಸಿದರೆ ತುಂಬಾ ಕಡಿಮೆಯಿದೆ. ಈ ಕಡಿಮೆ ಶಿಷ್ಯ ವೇತನವೂ ಸಹ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ಸೀಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಭರಿಸಲು ಶಿಕ್ಷಣದ ಸಾಲುಗಳನ್ನು ಪಡೆದುಕೊಳ್ಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಲಾಕ್ ಡೌನ್ ಜಾರಿ ಈ ಇರುವುದರಿಂದ ತೀವ್ರ ಆರ್ಥಿಕ ಸಂಕಷ್ಟಗಳಿಂದ ಜನರು ನರಳುತ್ತಿದ್ದಾರೆ. ಈ ಕೊರೋನಾ ಲಾಕ್ ಡೌನ್ ಸಂದರ್ಭವನ್ನು ಸರ್ಕಾರ ಶುಲ್ಕ ಹೆಚ್ಚಳ ಮಾಡಲು ದುರ್ಬಳಕೆ ಮಾಡಿಕೊಂಡು (ಇಂತಹ ಸಮಯದಲ್ಲಿ ವಿದ್ಯಾರ್ಥಿ ಸಮುದಾಯ ಹೋರಾಟ ನಡೆಸಲು ಸಹ ಅವಕಾಶವಿಲ್ಲದಂತಾಗಿದೆ.) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಸೀಟುಗಳ ಶುಲ್ಕ ಹೆಚ್ಚಿಸಿ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ದೂರಲಾಗಿದೆ.

ಪ್ರತಿವರ್ಷವೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ಏರಿಕೆ ಮಾಡುತ್ತಿದೆ ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕಗಳನ್ನು ಭರಿಸಲು ಆರ್ಥಿಕ ಶಕ್ತಿ ಇಲ್ಲದೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗಳು ಉಳ್ಳವರಿಗೆ ಮಾತ್ರ ಸೀಮಿತಗೊಳಿಸುವ ನೀತಿಯನ್ನು ಅನುಸರಿಸುತ್ತಿರುವುದು ದೇಶದ ಭವಿಷ್ಯಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಲಾಗಿದೆ.

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಶಿಕ್ಷಣದ ನೀಡಲು ಶುಲ್ಕ ಇಳಿಸಲು ಮುಂದಾಗಬೇಕು. ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಹಾಗೂ ವೈದ್ಯಕೀಯ ಶಿಕ್ಷಣದ ಶುಲ್ಕಗಳನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಏಕರೂಪ ಶಾಸನ ಜಾರಿಗೆ ತರಬೇಕು ಎಂದು ಫ್ರೆಟರ್ನಿಟಿ ಮೂವ್ಮೆಂಟ್ ಕರ್ನಾಟಕ ಒತ್ತಾಯಿಸುತ್ತಿದೆ.


ಇದನ್ನೂ ಓದಿ: ಗ್ರಾಮಭಾರತ – 2: ಭದ್ರಾವತಿಗೆ ಬಾರದ ತಮಿಳುನಾಡಿನ ಭತ್ತ ಕಟಾವು ಯಂತ್ರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...