Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...