Homeಕರ್ನಾಟಕಬಾಕಿ ಸಂಬಳ ನೀಡುವಂತೆ 'ನಮ್ಮ ಮೆಟ್ರೋ' ಕಾರ್ಮಿಕರಿಂದ ಪ್ರತಿಭಟನೆ

ಬಾಕಿ ಸಂಬಳ ನೀಡುವಂತೆ ‘ನಮ್ಮ ಮೆಟ್ರೋ’ ಕಾರ್ಮಿಕರಿಂದ ಪ್ರತಿಭಟನೆ

- Advertisement -
- Advertisement -

ತಮ್ಮ ಬಾಕಿಯಿರುವ ಸಂಬಳವನ್ನು ನೀಡುವಂತೆ “ನಮ್ಮ ಮೆಟ್ರೋ” ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಬೊಮ್ಮನಹಳ್ಳಿಯ ಬಿಎಂಆರ್‌ಸಿಎಲ್‌ನ ಸಿಮೆಂಟ್ ಕಾಸ್ಟಿಂಗ್ ಅಂಗಳದಲ್ಲಿ ನೂರಾರು ಉದ್ರಿಕ್ತ ಮೆಟ್ರೋ ಕಾರ್ಮಿಕರು ಭಾನುವಾರ ಪ್ರತಿಭಟನೆ ನಡೆಸಿ ಸಂಬಳವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

ಶನಿವಾರ ಪ್ರಾರಂಭವಾಗಿದ್ದ ಪ್ರತಿಭಟನೆಯು ಭಾನುವಾರ ಮಧ್ಯಾಹ್ನ ಪರಿಸ್ಥತಿ ಬಿಗಡಾಯಿಸಿದ್ದರಿಂದ 500 ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿನ ಮೇಲುಸ್ತುವಾರಿ ಅಧಿಕಾರಿಯನ್ನು ಸುತ್ತುವರೆದು ತಮ್ಮನ್ನು ಈಗಿನಿಂದಲೇ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸಿದರು. ಘಟನೆಯಲ್ಲಿ ವಾಹನಗಳು ಮತ್ತು ಕಚೇರಿ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೇತನವನ್ನು ವಿಳಂಬ ಮಾಡಿರುವುದಲ್ಲದೆ ಕಂಪನಿಯು ಮೂಲಭೂತ ಸೌಕರ್ಯಗಳನ್ನು ನೀಡುವುದನ್ನು ನಿಲ್ಲಿಸಿದೆ. ಕಾರ್ಮಿಕರಿರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಿ ಎರಡು ದಿನಗಳು ಕಳೆದಿದ್ದು, ಮೂರು ದಿನಗಳಿಂದ ಪಡಿತರ ಅಂಗಡಿಯನ್ನು ಮುಚ್ಚಿದ್ದಾರೆ. ಏನನ್ನಾದರೂ ಖರೀದಿಸಲು ಹೊರಟರೆ ಪೊಲೀಸರು ನಮ್ಮನ್ನು ಹೊಡೆಯುತ್ತಾರೆ ಎಂದು ಅಲ್ಲಿನ ಕಾರ್ಮಿಕರು ಆರೋಪಿಸಿದ್ದಾರೆ.

ನಮ್ಮನ್ನು ಇಂದು ಮನೆಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಲಾಯಿತಾದರೂ ಬಿಹಾರದ ಜನರನ್ನು ಮಾತ್ರ ಬಸ್ಸಿನಲ್ಲಿ ಕರೆದೊಯ್ಯಲಾಯಿತು. ಆದರೆ ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ಹೋಗುವ ಜನರಿಗೆ ಪ್ರಯಾಣದ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಕಾರ್ಮಿಕರು ಅಲವತ್ತುಕೊಂಡಿದ್ದಾರೆ. ಈ ಕಾರ್ಮಿಕರು ಕಳೆದ ಎರಡು ತಿಂಗಳುಗಳಲ್ಲಿ ರಾಜ್ಯ ಸರ್ಕಾರದಿಂದ  ಯಾವುದೆ ಉಚಿತ ಆಹಾರ ಅಥವಾ ಪಡಿತರವನ್ನು ಪಡೆದಿಲ್ಲ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಕಾರ್ಮಿಕರೊಂದಿಗೆ ಮಾತನಾಡಿ “ಕಾರ್ಮಿಕರು ಸಂಕಟಕ್ಕೊಳಗಾಗಿದ್ದಾರೆ, ಆದರೆ ಅದು ಪ್ರಮುಖ ವಿಷಯವಲ್ಲ. ಅವರಲ್ಲಿ ಅರ್ಧದಷ್ಟು ಜನರು ಹಿಂತಿರುಗಲು ಉತ್ಸುಕರಾಗಿದ್ದಾರೆ. ಭಾನುವಾರ 130 ಕಾರ್ಮಿಕರು ಬಿಹಾರಕ್ಕೆ ತೆರಳಿದ್ದಾರೆ”ಎಂದು ಅವರು ಹೇಳಿದ್ದಾರೆ.

ಆದರೆ ಕಾರ್ಮಿಕರು ತಮ್ಮನ್ನು ಒತ್ತಾಯಪೂರ್ವಕವಾಗಿ ಉಳಿಯುವಂತೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ, ಅದಕ್ಕೆ ಪ್ರತಿಕ್ರಿಯಿಸಿದ ವ್ಯವಸ್ಥಾಪಕ ನಿರ್ದೇಶಕರು ಇಲ್ಲೇ ಉಳಿದು ಕೆಲಸವನ್ನು ಮುಂದುವರಿಸಲು ಮನವಿ ಮಾಡಿದ್ದೆವು, ಅವರ ಆರೋಗ್ಯ ರಕ್ಷಣೆ, ಆಹಾರ ಮತ್ತು ವೇತನದ ಬಗ್ಗೆ ಭರವಸೆ ನೀಡಿದ್ದೇವೆ. ಉಳಿಯುವಂತೆ ನಾವು ಅವರಿಗೆ ಮನವಿ ಮಾಡಿದರೂ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಪ್ರಯಾಣಕ್ಕಾಗಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಸಹ ಅವರ ಗಮನಕ್ಕೆ ತರಲಾಗಿದೆ”ಎಂದು ಅವರು ಹೇಳಿದರು.

ಕಾರ್ಮಿಕರನ್ನು ಹೊರಗಿನವರು ಪ್ರಚೋದಿಸಿದ್ದಾರೆ ಎಂಧು ಆರೋಪಿಸಿದ ವ್ಯವಸ್ತಾಪಕ ನಿರ್ದೇಶಕರು, ಅವರು ಹೊರಗಿನವರಿಂದ ಪ್ರಚೋದಿಸಲ್ಪಟ್ಟದ್ದರಿಂದ ಹಿಂಸಾಚಾರದಲ್ಲಿ ಪಾಲ್ಗೊಂಡರು. ಇದರಿಂದಾಗಿ ಬಿಎಂಆರ್ಸಿಎಲ್ ಎಂಜಿನಿಯರ್ ಗಾಯಗೊಂಡರು. ಇಂದು ಮತ್ತೆ ನಡೆಸಿದ ಹಿಂಸಾಚಾರದಲ್ಲಿ ವಾಹನಗಳು ಮತ್ತು ಕಚೇರಿ ಹಾನಿಗೊಳಗಾಗಿದೆ ಎಂದು ಹೇಳಿದ್ದಾರೆ.

ಕಾರ್ಮಿಕರ ಪ್ರತಿಭಟನೆಯ ನಂತರ ಬಿಎಂಆರ್‌ಸಿಎಲ್‌ ವೇತನ ಪಾವತಿ ಮಾಡಿದೆ ಎಂಬ ವರದಿಗಳು ಬಂದಿವೆ.

ಕೃಪೆ: ಡೆಕ್ಕನ್ ಹೆರಾಲ್ಡ್


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ ಭರವಸೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...