Homeಮುಖಪುಟಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ, ವಲಸಿಗರ ಪ್ರಯಾಣದ ಖರ್ಚು ನಾವು ನೀಡುತ್ತೇವೆ: ತೇಜಸ್ವಿ ಯಾದವ್

- Advertisement -
- Advertisement -

ತಮ್ಮ ರಾಜ್ಯಕ್ಕೆ ವಾಪಾಸು ಬರುತ್ತಿರುವ ವಲಸೆ ಕಾರ್ಮಿಕರ 50 ರೈಲುಗಳ ಎಲ್ಲಾ ಪ್ರಯಾಣಿಕರ ಪ್ರಯಾಣ ದರವನ್ನು ಪಾವತಿಸಲು ಸಿದ್ದರಿದ್ದೇವೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಪ್ರಸ್ತಾಪಿಸಿದ್ದಾರೆ. ಇದಾದ ಕೆಲವೇ ಗಂಟೆಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸರ್ಕಾರವೇ ರೈಲು ದರ ಪಾವತಿಸಲಿದೆ ಎಂಬ ನಿಲುವು ಪ್ರಕಟಿಸಿದ್ದಾರೆ.

ರೈಲಿನಲ್ಲಿ ಮನೆಗೆ ಮರಳುವ ಪ್ರತಿಯೊಬ್ಬ ಕಾರ್ಮಿಕರಿಗೆ ಪೂರ್ಣ ಟಿಕೆಟ್ ಶುಲ್ಕವನ್ನು ಮರುಪಾವತಿ ಮಾಡಲಾಗುವುದು ಮತ್ತು ಹೆಚ್ಚುವರಿ 500ರೂ. ಗಳ ನೆರವು ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು “ನಮ್ಮ ವಿದ್ಯಾರ್ಥಿಗಳಿಗೆ ಮರಳಿ ಮನೆಗೆ ಉಚಿತ ಪ್ರಯಾಣವನ್ನು ಖಾತ್ರಿಪಡಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ ಮತ್ತು ಈಗ ಅದೇ ರೀತಿಯ ಸೌಲಭ್ಯವನ್ನು ವಲಸೆ ಕಾರ್ಮಿಕರಿಗೂ ವಿಸ್ತರಿಸಲಾಗುತ್ತಿದೆ” ಎಂದು ತಮ್ಮ ಪರೀಷ್ಕೃತ ನಿಲುವನ್ನು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾತ್ರವಲ್ಲದೇ ತಮ್ಮದೇ ಸಮ್ಮಿಶ್ರ ಸರ್ಕಾರದ ಹಲವು ನಾಯಕರು ಸಹ ನಿತೀಶ್‌ ಕುಮಾರ್‌ರವರ ಮೊದಲಿನ ನಿಲುವನ್ನು ಟೀಕಿಸಿದ್ದರು. ಇತರ ರಾಜ್ಯಗಳು ತಮ್ಮ ಕಾರ್ಮಿಕರನ್ನು ವಾಪಸ್ ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಾಗ ನಿತೀಶ್ ಕುಮಾರ್ ಅವರು ಕಾರ್ಮಿಕರು ಇದ್ದಲ್ಲಿಯೇ ಇರಬೇಕೆಂದು ಒತ್ತಾಯಿಸಿದರು. ಕಾರ್ಮಿಕರು ಹಿಂದಿರುಗಿದ ನಂತರ 14 ದಿನಗಳವರೆಗೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಉತ್ತರ ಪ್ರದೇಶದಂತಹ ರಾಜ್ಯಗಳ ಅವರ ಸಹವರ್ತಿಗಳು ಇತರ ನಗರಗಳಿಂದ ವಿದ್ಯಾರ್ಥಿಗಳು ಮತ್ತು ಕಾರ್ಮಿಕರನ್ನು ಮರಳಿ ಕರೆತರಲು ಬಸ್ಸುಗಳನ್ನು ಆಯೋಜಿಸಿದರೆ ನಿತೀಶ್ ಅವರು ರೈಲುಗಳನ್ನು ತಡೆದು ಕೇಂದ್ರ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟರು ಎಂಬ ಟೀಕೆಗಳು ಅವರ ಮೇಲಿದ್ದವು.

ಆರ್‌ಜೆಡಿ ಮುಖಂಡ ಹಾಗೂ ವಿರೋಧ ಪಕ್ಷದ ನಾಯಕರಾದ ತೇಜಸ್ವಿ ಯಾದವ್ ” ಆರ್‌ಜೆಡಿ 50 ರೈಲುಗಳ ಶುಲ್ಕವನ್ನು ಅಸಮರ್ಥ ಬಿಹಾರ ಸರ್ಕಾರಕ್ಕೆ ಕಾರ್ಮಿಕರ ಪರವಾಗಿ ನೀಡುತ್ತೇವೆ. ಮುಂದಿನ 5 ದಿನಗಳಲ್ಲಿ ಸರ್ಕಾರವು ರೈಲುಗಳನ್ನು ವ್ಯವಸ್ಥೆಗೊಳಿಸಬೇಕು, ಪಕ್ಷವು ತನ್ನ ಶುಲ್ಕವನ್ನು ತಕ್ಷಣವೇ ಸರ್ಕಾರಿ ಖಾತೆಗೆ ವರ್ಗಾಯಿಸುತ್ತದೆ” ಎಂದು ಹೇಳಿದ್ದರು.

ಅಲ್ಲದೆ ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ನಿತೀಶ್ ಕುಮಾರ್ ಅವರೇ, ಬಡ ಕಾರ್ಮಿಕರ 50 ರೈಲುಗಳ ಶುಲ್ಕವನ್ನು ಭರಿಸಲು ಆರ್‌ಜೆಡಿ ಸಿದ್ಧವಾಗಿದೆ, ಯಾಕೆಂದರೆ ಡಬಲ್ ಎಂಜಿನ್ ಸರ್ಕಾರ ಸಮರ್ಥವಾಗಿಲ್ಲ. ದಯವಿಟ್ಟು ಈಗ ನಿರ್ವಹಣೆಯನ್ನು ತಕ್ಷಣವೇ ಮಾಡಿ. ಸುಶಿಲ್ ಮೋದಿಯವರೇ, ದಯವಿಟ್ಟು ಒಟ್ಟು ಮೊತ್ತವನ್ನು ಹೇಳಿ, ಚೆಕ್ ಅನ್ನು ತಕ್ಷಣ ಕಳುಹಿಸಲಾಗುತ್ತದೆ. ಹೇಗಾದರೂ, ನೀವು ಲೆಕ್ಕ ಪತ್ರವನ್ನು ನೋಡಲು ಇಷ್ಟಪಡುತ್ತೀರಿ” ಎಂದು ಕುಟುಕಿದ್ದರು.

ಮಾರ್ಚ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ನಾಲ್ಕು ಗಂಟೆಗಳ ಸೂಚನೆಯೊಂದಿಗೆ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದಾಗ, ಲಕ್ಷಾಂತರ ವಲಸೆ ಕಾರ್ಮಿಕರು ತಾವು ದುಡಿಯುವ ನಗರಗಳಲ್ಲಿ ಸಿಲುಕಿಕೊಂಡರು. ಅವರ ದುಡಿಮೆಗಳು ಹಠಾತ್ತನೆ ನಿಂತು ಹೋದುದರಿಂದ, ಹಲವಾರು ಕಾರ್ಮಿಕರು ಮನೆಗೆ ತೆರಳಲು ನಿರ್ಧರಿಸಿದರು. ಆದರೆ ಯಾವುದೇ ಸಾರ್ವಜನಿಕ ಸಾರಿಗೆ ಇಲ್ಲದೆ ಸಾವಿರಾರು ಜನರು ತಮ್ಮ ಊರಿಗೆ ಮರಳಲು ಸಾವಿರಾರು ಕಿಲೋಮೀಟರನ್ನು ಕಾಲ್ನಡಿಗೆಯಲ್ಲೇ ನಡೆದರು. ಈ ಸಂಧರ್ಭದಲ್ಲಿ ನೂರಾರು ಜನರು ನೀರು-ಆಹಾರವಿಲ್ಲದೆ ಸಾವಿಗೀಡಾಗಿದ್ದರು.

ಇದರಿಂದಾಗಿ ಕಳೆದ ಶುಕ್ರವಾರ ಬಿಜೆಪಿ ತಮಗೆ ರಾಜಕೀಯ ಹಿನ್ನಡೆಯಾಗುತ್ತಿರುವ ಬಗ್ಗೆ ಚರ್ಚಿಸಿ, ವಿಶೇಷ ರೈಲುಗಳ ಮೂಲಕ ವಲಸೆ ಕಾರ್ಮಿಕರನ್ನು ಮನೆಗೆ ಹಿಂದಿರುಗಿಸುವುದಾಗಿ ಘೋಷಿಸಿತು. ಬಿಜೆಪಿ ಆಡಳಿತವಿಲ್ಲದ ರಾಜ್ಯ ಸರ್ಕಾರಗಳು ರೈಲುಗಳಿಗೆ ಪಾವತಿಸಲು ಹಣವಿಲ್ಲ ಎಂದು ಹೇಳಿದ್ದು, ಸಾಂಕ್ರಾಮಿಕ ರೋಗವನ್ನು ಎದುರಿಸುವ ಕಾರಣದಿಂದಾಗಿ ಅವರ ಹಣಕಾಸು ವೆಚ್ಚ ಒತ್ತಡದಲ್ಲಿದೆ ಎಂದು ಹೇಳಿದ್ದವು.

ಇಂದು ಬೆಳಿಗ್ಗೆ ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ ತಮ್ಮ ಪಕ್ಷವು ಕಾರ್ಮಿಕರ ಪ್ರಯಾಣ ಹಣವನ್ನು ಭರಿಸುತ್ತದೆ ಎಂದು ಘೋಷಿಸಿದ್ದಾರೆ.


ಇದನ್ನೂ ಓದಿ:  ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...