Homeಮುಖಪುಟಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯೆಂದ CMIE

- Advertisement -
- Advertisement -

ಏಪ್ರಿಲ್‌ನಲ್ಲಿ ನಿರುದ್ಯೋಗ ದರ 27.1% ರಷ್ಟು ಏರಿಕೆಯಾಗಿದೆ ಎಂದು ಮುಂಬೈ ಮೂಲದ ವೇದಿಕೆಯಾದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್‌ಐಇ) ತಿಳಿಸಿದೆ.

2020ರ ಏಪ್ರಿಲ್‌ನಲ್ಲಿ ದೇಶದ ನಿರುದ್ಯೋಗ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಇದು ಹೇಳಿದೆ. ಕೊರೊನಾ ಸೋಂಕಿನ ತಡೆಗೋಸ್ಕರ ದೇಶವೂ 3.0 ಲಾಕ್‌ಡೌನ್ ನ ಎರಡನೇ ದಿನ ಪ್ರವೇಶಿಸುತ್ತಿದ್ದಂತೆ ಆರ್ಥಿಕತೆಯಲ್ಲಿ ಉದ್ಯೋಗದ ಕೊರತೆಯಿಂದಾಗಿ ನಿರುದ್ಯೋಗ ದರ ಅಥವಾ ಆರ್ಥಿಕತೆಯಲ್ಲಿ ನಿರುದ್ಯೋಗಿಗಳ ಪಾಲು  ಶೇಕಡಾ 27.1 ಆಗಿದೆ. ಜಿಡಿಪಿ ಇಳಿಕೆಯಾಗುತ್ತಿರುವ ಸಮಯದಲ್ಲಿ ಸಿಎಂಐಇ ವರದಿಯು ಕೊರೊನಾದಿಂದಲೂ ಆರ್ಥಿಕ ಕುಸಿತವಾಗಿದೆ ಎಂದು ಹೇಳುತ್ತಿದೆ.

ಸಿಎಂಐಇ ನಿರುದ್ಯೋಗ ಸಮೀಕ್ಷೆಯನ್ನು 2016 ರಿಂದಲೂ ಮಾಡುತ್ತಿದ್ದು. ಅಂದಿನಿಂದ ಇದು ದೇಶದ ಕಾರ್ಮಿಕ ಮಾರುಕಟ್ಟೆಯ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದೆ. ಇದು ತನ್ನ ಸಮೀಕ್ಷೆಯಲ್ಲಿ ತಿಂಗಳಿಗೆ 43,600 ಮನೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸುತ್ತಿದೆ.

ಸಿಎಂಐಇ ಪ್ರಕಾರ, ಕೊರೊನಾ ಲಾಕ್‌ಡೌನ್ ಅನ್ನು ಹಿಂತೆಗೆದುಕೊಳ್ಳುವುದರಿಂದ ಜೀವನೋಪಾಯದ ವಿಷಯದಲ್ಲಿ ತ್ವರಿತ ಫಲಿತಾಂಶವನ್ನು ನೀಡುವ ನಿರೀಕ್ಷೆಯಿದೆ.


ಇದನ್ನೂ ಓದಿ: ಯೋಜನೆಯೇ ಇಲ್ಲದ ಮೋದಿ ಲಾಕ್‌ಡೌನ್ : ವೈರಸ್ ಕೊಲ್ಲದಿದ್ದರೂ, ಆರ್ಥಿಕತೆಯ ಮರಣ ನಿಶ್ಚಿತ!


ಅನೇಕ ಅರ್ಥಶಾಸ್ತ್ರಜ್ಞರು ಈಗಾಗಲೇ ತಮ್ಮ ಯೋಜನೆಗಳನ್ನು ಮಂದಿಟ್ಟಿದ್ದಾರೆ, ಕೆಲವರು ಕೊರೊನಾ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಹಿಂಜರಿತದ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 25 ರಂದು ಪ್ರಾರಂಭವಾದ ಲಾಕ್‌ಡೌನ್‌ಗೆ ಮುಂಚೆಯೇ ದೇಶದ ಆರ್ಥಿಕತೆಯು ದೀರ್ಘಕಾಲದ ನಿಧಾನಗತಿಯ ಬೆಳವಣಿಗೆಯಿಂದ ಬಳಲುತ್ತಿದೆ ಎಂದು ಸಿಎಂಐಇ ಬೊಟ್ಟು ಮಾಡಿದೆ.

ಕೊರೊನಾ ವೈರಸ್ ಪರಿಣಾಮದಿಂದಾಗಿ ಅನೇಕ ಸಮೀಕ್ಷಾ ಗುಂಪುಗಳು ಆರ್ಥಿಕತೆಗೆ ಹೆಚ್ಚು ಕೆಟ್ಟ ಪರಿಸ್ಥಿತಿಯನ್ನು ಅಂದಾಜು ಮಾಡಿವೆ. ಫಿಚ್ ರೇಟಿಂಗ್ಸ್ 2021 ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇಕಡಾ 2 ರಷ್ಟು ವಿಸ್ತರಿಸಬಹುದು ಎಂದು ಹೇಳಿದೆ. ಇದು ಕಳೆದ ಮೂವತ್ತು ವರ್ಷಗಳಲ್ಲೇ ನಿಧಾನಗತಿಯ ಆರ್ಥಿಕ ವೇಗವಾಗಿದೆ.

ಮ್ಯೂಚುವಲ್ ಫಂಡ್ ಸೇರಿದಂತೆ ಸಾಲಗಾರರು, ಸಾಲದಾತರು ಹಾಗೂ ಇತರ ಸಂಸ್ಥೆಗಳು ಎದುರಿಸುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ರಿಸರ್ವ್ ಬ್ಯಾಂಕ್ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಕೊರೊನಾ ಲಾಕ್‌ಡೌನ್‌ನಿಂದ ಉಂಟಾಗುವ ದ್ರವ್ಯತೆ ಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ಫೆಬ್ರವರಿ 2020 ರ ಹಣಕಾಸು ನೀತಿ ಸಭೆಯು ಜಿಡಿಪಿಯ ಶೇಕಡಾ 3.2 ರಷ್ಟು ಹಣವನ್ನು ಆರ್ಥಿಕತೆಗೆ ಸೇರಿಸಿದೆ.


ಇದನ್ನೂ ಓದಿ: ಕೊರೊನಾದಿಂದ ಉಂಟಾದ ಮಹಾನ್‌ ನಿರುದ್ಯೋಗ: ಅಮೇರಿಕದ ಜನರು ತಮ್ಮ ಅಹಂ ಬದಿಗಿಟ್ಟು ನೆರವು ಕೇಳುತ್ತಿದ್ದಾರೆ.


ನಮ್ಮ ಯೂ ಟ್ಯೂಬ್ ಚಾನೆಲ್‌ಗೆ  Subscribe ಆಗಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...