Homeನಿಜವೋ ಸುಳ್ಳೋಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

- Advertisement -
- Advertisement -

ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆಕೆಯ ಬಂಧನದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಮೇಲೆ ಕೆಟ್ಟ ವೈಯಕ್ತಿಕ ದಾಳಿ ನಡೆಯುತ್ತಿದೆ.

ಮುಜಾಫರ್‌ಪುರದ ಬಿಜೆಪಿ ಸದಸ್ಯ ಎಂದು ಗುರುತಿಸಿಕೊಂಡಿರುವ ಮನೋಜ್ ಕುಮಾರ್ ಆಜಾದ್ ಅವರು ಆಕೆಯ ಕುರಿತು ಮೇ 4 ರಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ “ಶಾಹೀನ್‌ ಬಾಗ್‌ನಲ್ಲಿ ದಂಗೆ ಮಾಡಿದ ನಂತರ ಅವಿವಾಹಿತ ಜಾಮಿಯಾ ಕಾನೂನು ವಿದ್ಯಾರ್ಥಿನಿ ಸಫೂರಾ ಜಾರ್ಗರ್ ಗಲಭೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಆಕೆಯನ್ನು ಕರೋನವೈರಸ್ ಪರೀಕ್ಷೆಗೆ ಒಳಪಡಿಸಿದಾಗ, ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟನ್ನು 7 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ. ಅದೇ ರೀತಿಯಾಗಿ ಹತ್ತಾರು ಜನ ಅದೇ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್-ಚೆಕ್

ನಾವು ಈ ವಿಷಯದ ಬಗ್ಗೆ ಸತ್ಯ ಪರಿಶೀಲನೆ ನಡೆಸುವ ಮೊದಲು ಮಹಿಳೆಯರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೆಕ್ಸಿಸ್ಟ್ ಮತ್ತು ಅಸಹ್ಯಕರ ಕಾಮೆಂಟ್‌ಗಳೊಂದಿಗೆ ಗುರುತಿಸುವುದು ಸಾಮಾನ್ಯ ರೂಢಿಯಾಗಿಬಿಟ್ಟಿರುವುದನ್ನು ಖಂಡಿಸಬೇಕಿದೆ. ಅವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರೆ ಕಿರುಕುಳವು ಇನ್ನೂ ಕೆಟ್ಟದ್ದಾಗಿರುತ್ತದೆ. ಜರ್ಗರ್ ಅವರ ವೈಯಕ್ತಿಕ ಜೀವನವು ಅವಳು ಜೈಲಿನಲ್ಲಿರುವ ಸದರಿ ಪ್ರಕರಣಕ್ಕೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದರೂ ಸಹ ಕೆಲವು ಜನರು ಆಕೆಯ ತೇಜೋವಧೆ ಮಾಡಲು ಅದನ್ನು ಬಳಸುತ್ತಿರುವುದು ದುರಾದೃಷ್ಟವಾಗಿದೆ.

ಮೊದಲನೇಯದಾಗಿ ಸಫೂರ ಜರ್ಗರ್ ಮದುವೆಯಾಗಿಲ್ಲ ಎಂಬುದು ದೊಡ್ಡ ಸುಳ್ಳಾಗಿವೆ. ಅವರು 2018 ರಲ್ಲಿ ವಿವಾಹವಾಗಿದ್ದಾರೆ. ಈ ಕುರಿತು ಆಕೆಯ ಪತಿಯೊಂದಿಗೆ ಆಲ್ಟ್‌ ನ್ಯೂಸ್‌ ಮಾತಾಡಿದಾಗ ಅವರು 2018 ರಲ್ಲಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

ಇದಲ್ಲದೆ, ಆಕೆಯ ಗರ್ಭಧಾರಣೆಯನ್ನು ಇತ್ತೀಚೆಗೆ ಜೈಲಿನಲ್ಲಿ ಕಂಡುಹಿಡಿಯಲಾಯಿತು ಎಂಬ ಹೇಳಿಕೆಯೂ ಸುಳ್ಳು. ಜರ್ಗರ್‌ನನ್ನು ವಶಕ್ಕೆ ತೆಗೆದುಕೊಂಡ ಏಪ್ರಿಲ್ ಆರಂಭದಿಂದಲೂ ಇದು ಈಗಾಗಲೇ ಸುದ್ದಿಯಲ್ಲಿತ್ತು. ಏಪ್ರಿಲ್ 12 ರಿಂದ ಐಎಎನ್‌ಎಸ್ ವರದಿಯ ಸ್ಕ್ರೀನ್‌ಶಾಟ್ ಕೆಳಗೆ ನೀಡಲಾಗಿದೆ. ಅದರಂತೆ ಏಪ್ರಿಲ್ 10 ರಂದು ಬಂಧನಕ್ಕೊಳಗಾದಾಗ ಜರ್ಗರ್ ಮೂರು ತಿಂಗಳ ಗರ್ಭಿಣಿ ಎಂದು ಉಲ್ಲೇಖಿಸಿ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಅದು ವರದಿ ಮಾಡಿದೆ.

ಫೆಬ್ರವರಿ 10 ರಂದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ಜರ್ಗರ್ ಮೂರ್ಛೆ ಹೋಗಿದ್ದರು. ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ. “ಅಂದಿನಿಂದ, ಗರ್ಭಧಾರಣೆಯ ಕಾಳಜಿಯೊಂದಿಗೆ, ಅವಳು ಕ್ರಮೇಣ ತನ್ನ ದೈಹಿಕ ಚಲನೆಯನ್ನು ನಿರ್ಬಂಧಿಸಿದ್ದಳು. ಮತ್ತು COVID-19 ಸ್ಫೋಟಗೊಂಡ ನಂತರ, ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಅವಳು ಮನೆಯಿಂದ ಹೊರಗುಳಿಯುವುದನ್ನು ನಿಲ್ಲಿಸಿದ್ದಳು. ಅವಳು ಹೆಚ್ಚಾಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು ” ಎಂದು ಆಕೆಯ ಪತಿ ಹೇಳಿದ್ದಾರೆ.

ಜಾಮೀನು ಕೋರಿ ಏಪ್ರಿಲ್ 21 ರಂದು ಸಲ್ಲಿಸಿದ ಮತ್ತೊಂದು ನ್ಯಾಯಾಲಯದ ಅರ್ಜಿಯಲ್ಲಿಯೂ ಸಹ ಆಕೆಯ ವೈದ್ಯಕೀಯ ಸ್ಥಿತಿಯನ್ನು ಸಹ ಸೂಚಿಸುತ್ತದೆ. ಅಂದರೆ ಗರ್ಭಿಣಿಯಾದ ಕಾರಣಕ್ಕೆ ಜಾಮೀನು ನೀಡಬೇಕೆಂದು ಉಲ್ಲೇಖಿಸಿದೆ.

“ಸಫೂರ ವಿವಾಹಿತೆ ಎಂಬುದು ಸಾರ್ವಜನಿಕ ವಲಯದಲ್ಲಿದ್ದರೂ, ಪ್ರೇರಿತ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳ ಮೂಲಕ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗುತ್ತಿದೆ. ಅವಳನ್ನು ಮತ್ತು ಸಿಎಎ ವಿರೋಧಿ ಶಾಹೀನ್ ಬಾಗ್ ಆಂದೋಲನವನ್ನು ಅಪಚಾರ ಮಾಡುವ ಉದ್ದೇಶದೊಂದಿಗೆ ಈ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ” ಎಂದು ವೃಂದಾ ಗ್ರೋವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳು ದನಿಎತ್ತಿದ್ದರೆ ಅವರು ಸಾಮಾಜಿಕ ಕಾರ್ಯಕರ್ತರು, ಲೇಖಕರು, ಪತ್ರಕರ್ತರು ಅಥವಾ ವಿದ್ಯಾರ್ಥಿ ಕಾರ್ಯಕರ್ತರು ಯಾರೇ ಆಗಲಿ ಅವರ ವಯಕ್ತಿಕ ಜೀವನವನ್ನು ಎಳೆತಂದು ತೇಜೋವಧೆ ಮಾಡುವುದು ಸುಲಭವಾಗಿಬಿಟ್ಟಿದೆ. ಒಬ್ಬ ಮಹಿಳೆ ಅವಳು ಬಯಸಿದ್ದಲ್ಲಿ ಮದುವೆಯಾಗದೆಯೂ ತಾಯಿಯಾಗುವುದರಲ್ಲಿ ತಪ್ಪೇನಿದೆ? ಅದು ಅವಳ ಇಚ್ಚೆಯಲ್ಲವೇ? ಅವರ ಖಾಸಗಿತನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಸಫೂರ ಜರ್ಗರ್ ಅವಿವಾಹಿತ ಮಹಿಳೆ ಎಂದು ಸಾಮಾಜಿಕ ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು. ಆಕೆಯ ಗರ್ಭಧಾರಣೆಯನ್ನು ಜೈಲಿನಲ್ಲಿ ಕಂಡುಹಿಡಿಯಲಾಗಿದೆ ಎಂಬ ವಾದವೂ ಆಧಾರರಹಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...