Homeನಿಜವೋ ಸುಳ್ಳೋಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

- Advertisement -
- Advertisement -

ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆಕೆಯ ಬಂಧನದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಮೇಲೆ ಕೆಟ್ಟ ವೈಯಕ್ತಿಕ ದಾಳಿ ನಡೆಯುತ್ತಿದೆ.

ಮುಜಾಫರ್‌ಪುರದ ಬಿಜೆಪಿ ಸದಸ್ಯ ಎಂದು ಗುರುತಿಸಿಕೊಂಡಿರುವ ಮನೋಜ್ ಕುಮಾರ್ ಆಜಾದ್ ಅವರು ಆಕೆಯ ಕುರಿತು ಮೇ 4 ರಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ “ಶಾಹೀನ್‌ ಬಾಗ್‌ನಲ್ಲಿ ದಂಗೆ ಮಾಡಿದ ನಂತರ ಅವಿವಾಹಿತ ಜಾಮಿಯಾ ಕಾನೂನು ವಿದ್ಯಾರ್ಥಿನಿ ಸಫೂರಾ ಜಾರ್ಗರ್ ಗಲಭೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಆಕೆಯನ್ನು ಕರೋನವೈರಸ್ ಪರೀಕ್ಷೆಗೆ ಒಳಪಡಿಸಿದಾಗ, ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟನ್ನು 7 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ. ಅದೇ ರೀತಿಯಾಗಿ ಹತ್ತಾರು ಜನ ಅದೇ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್-ಚೆಕ್

ನಾವು ಈ ವಿಷಯದ ಬಗ್ಗೆ ಸತ್ಯ ಪರಿಶೀಲನೆ ನಡೆಸುವ ಮೊದಲು ಮಹಿಳೆಯರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೆಕ್ಸಿಸ್ಟ್ ಮತ್ತು ಅಸಹ್ಯಕರ ಕಾಮೆಂಟ್‌ಗಳೊಂದಿಗೆ ಗುರುತಿಸುವುದು ಸಾಮಾನ್ಯ ರೂಢಿಯಾಗಿಬಿಟ್ಟಿರುವುದನ್ನು ಖಂಡಿಸಬೇಕಿದೆ. ಅವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರೆ ಕಿರುಕುಳವು ಇನ್ನೂ ಕೆಟ್ಟದ್ದಾಗಿರುತ್ತದೆ. ಜರ್ಗರ್ ಅವರ ವೈಯಕ್ತಿಕ ಜೀವನವು ಅವಳು ಜೈಲಿನಲ್ಲಿರುವ ಸದರಿ ಪ್ರಕರಣಕ್ಕೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದರೂ ಸಹ ಕೆಲವು ಜನರು ಆಕೆಯ ತೇಜೋವಧೆ ಮಾಡಲು ಅದನ್ನು ಬಳಸುತ್ತಿರುವುದು ದುರಾದೃಷ್ಟವಾಗಿದೆ.

ಮೊದಲನೇಯದಾಗಿ ಸಫೂರ ಜರ್ಗರ್ ಮದುವೆಯಾಗಿಲ್ಲ ಎಂಬುದು ದೊಡ್ಡ ಸುಳ್ಳಾಗಿವೆ. ಅವರು 2018 ರಲ್ಲಿ ವಿವಾಹವಾಗಿದ್ದಾರೆ. ಈ ಕುರಿತು ಆಕೆಯ ಪತಿಯೊಂದಿಗೆ ಆಲ್ಟ್‌ ನ್ಯೂಸ್‌ ಮಾತಾಡಿದಾಗ ಅವರು 2018 ರಲ್ಲಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

ಇದಲ್ಲದೆ, ಆಕೆಯ ಗರ್ಭಧಾರಣೆಯನ್ನು ಇತ್ತೀಚೆಗೆ ಜೈಲಿನಲ್ಲಿ ಕಂಡುಹಿಡಿಯಲಾಯಿತು ಎಂಬ ಹೇಳಿಕೆಯೂ ಸುಳ್ಳು. ಜರ್ಗರ್‌ನನ್ನು ವಶಕ್ಕೆ ತೆಗೆದುಕೊಂಡ ಏಪ್ರಿಲ್ ಆರಂಭದಿಂದಲೂ ಇದು ಈಗಾಗಲೇ ಸುದ್ದಿಯಲ್ಲಿತ್ತು. ಏಪ್ರಿಲ್ 12 ರಿಂದ ಐಎಎನ್‌ಎಸ್ ವರದಿಯ ಸ್ಕ್ರೀನ್‌ಶಾಟ್ ಕೆಳಗೆ ನೀಡಲಾಗಿದೆ. ಅದರಂತೆ ಏಪ್ರಿಲ್ 10 ರಂದು ಬಂಧನಕ್ಕೊಳಗಾದಾಗ ಜರ್ಗರ್ ಮೂರು ತಿಂಗಳ ಗರ್ಭಿಣಿ ಎಂದು ಉಲ್ಲೇಖಿಸಿ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಅದು ವರದಿ ಮಾಡಿದೆ.

ಫೆಬ್ರವರಿ 10 ರಂದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ಜರ್ಗರ್ ಮೂರ್ಛೆ ಹೋಗಿದ್ದರು. ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ. “ಅಂದಿನಿಂದ, ಗರ್ಭಧಾರಣೆಯ ಕಾಳಜಿಯೊಂದಿಗೆ, ಅವಳು ಕ್ರಮೇಣ ತನ್ನ ದೈಹಿಕ ಚಲನೆಯನ್ನು ನಿರ್ಬಂಧಿಸಿದ್ದಳು. ಮತ್ತು COVID-19 ಸ್ಫೋಟಗೊಂಡ ನಂತರ, ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಅವಳು ಮನೆಯಿಂದ ಹೊರಗುಳಿಯುವುದನ್ನು ನಿಲ್ಲಿಸಿದ್ದಳು. ಅವಳು ಹೆಚ್ಚಾಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು ” ಎಂದು ಆಕೆಯ ಪತಿ ಹೇಳಿದ್ದಾರೆ.

ಜಾಮೀನು ಕೋರಿ ಏಪ್ರಿಲ್ 21 ರಂದು ಸಲ್ಲಿಸಿದ ಮತ್ತೊಂದು ನ್ಯಾಯಾಲಯದ ಅರ್ಜಿಯಲ್ಲಿಯೂ ಸಹ ಆಕೆಯ ವೈದ್ಯಕೀಯ ಸ್ಥಿತಿಯನ್ನು ಸಹ ಸೂಚಿಸುತ್ತದೆ. ಅಂದರೆ ಗರ್ಭಿಣಿಯಾದ ಕಾರಣಕ್ಕೆ ಜಾಮೀನು ನೀಡಬೇಕೆಂದು ಉಲ್ಲೇಖಿಸಿದೆ.

“ಸಫೂರ ವಿವಾಹಿತೆ ಎಂಬುದು ಸಾರ್ವಜನಿಕ ವಲಯದಲ್ಲಿದ್ದರೂ, ಪ್ರೇರಿತ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳ ಮೂಲಕ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗುತ್ತಿದೆ. ಅವಳನ್ನು ಮತ್ತು ಸಿಎಎ ವಿರೋಧಿ ಶಾಹೀನ್ ಬಾಗ್ ಆಂದೋಲನವನ್ನು ಅಪಚಾರ ಮಾಡುವ ಉದ್ದೇಶದೊಂದಿಗೆ ಈ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ” ಎಂದು ವೃಂದಾ ಗ್ರೋವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳು ದನಿಎತ್ತಿದ್ದರೆ ಅವರು ಸಾಮಾಜಿಕ ಕಾರ್ಯಕರ್ತರು, ಲೇಖಕರು, ಪತ್ರಕರ್ತರು ಅಥವಾ ವಿದ್ಯಾರ್ಥಿ ಕಾರ್ಯಕರ್ತರು ಯಾರೇ ಆಗಲಿ ಅವರ ವಯಕ್ತಿಕ ಜೀವನವನ್ನು ಎಳೆತಂದು ತೇಜೋವಧೆ ಮಾಡುವುದು ಸುಲಭವಾಗಿಬಿಟ್ಟಿದೆ. ಒಬ್ಬ ಮಹಿಳೆ ಅವಳು ಬಯಸಿದ್ದಲ್ಲಿ ಮದುವೆಯಾಗದೆಯೂ ತಾಯಿಯಾಗುವುದರಲ್ಲಿ ತಪ್ಪೇನಿದೆ? ಅದು ಅವಳ ಇಚ್ಚೆಯಲ್ಲವೇ? ಅವರ ಖಾಸಗಿತನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಸಫೂರ ಜರ್ಗರ್ ಅವಿವಾಹಿತ ಮಹಿಳೆ ಎಂದು ಸಾಮಾಜಿಕ ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು. ಆಕೆಯ ಗರ್ಭಧಾರಣೆಯನ್ನು ಜೈಲಿನಲ್ಲಿ ಕಂಡುಹಿಡಿಯಲಾಗಿದೆ ಎಂಬ ವಾದವೂ ಆಧಾರರಹಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...