Homeನಿಜವೋ ಸುಳ್ಳೋಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ

- Advertisement -
- Advertisement -

ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಸಂಶೋಧನಾ ವಿದ್ಯಾರ್ಥಿ ಸಫೂರ ಜರ್ಗರ್ ಅವರನ್ನು ಏಪ್ರಿಲ್ 10 ರಂದು ಬಂಧಿಸಲಾಯಿತು. ನಂತರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಜಾಮೀನು ರಹಿತ ಅಪರಾಧಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಆಕೆಯ ಬಂಧನದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಮೇಲೆ ಕೆಟ್ಟ ವೈಯಕ್ತಿಕ ದಾಳಿ ನಡೆಯುತ್ತಿದೆ.

ಮುಜಾಫರ್‌ಪುರದ ಬಿಜೆಪಿ ಸದಸ್ಯ ಎಂದು ಗುರುತಿಸಿಕೊಂಡಿರುವ ಮನೋಜ್ ಕುಮಾರ್ ಆಜಾದ್ ಅವರು ಆಕೆಯ ಕುರಿತು ಮೇ 4 ರಂದು ಟ್ವೀಟ್ ಮಾಡಿದ್ದಾರೆ. ಅದರಲ್ಲಿ “ಶಾಹೀನ್‌ ಬಾಗ್‌ನಲ್ಲಿ ದಂಗೆ ಮಾಡಿದ ನಂತರ ಅವಿವಾಹಿತ ಜಾಮಿಯಾ ಕಾನೂನು ವಿದ್ಯಾರ್ಥಿನಿ ಸಫೂರಾ ಜಾರ್ಗರ್ ಗಲಭೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಆಕೆಯನ್ನು ಕರೋನವೈರಸ್ ಪರೀಕ್ಷೆಗೆ ಒಳಪಡಿಸಿದಾಗ, ಅವಳು ಎರಡು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟನ್ನು 7 ಸಾವಿರಕ್ಕೂ ಹೆಚ್ಚು ಜನ ಲೈಕ್‌ ಮಾಡಿದ್ದಾರೆ. ಅದೇ ರೀತಿಯಾಗಿ ಹತ್ತಾರು ಜನ ಅದೇ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್-ಚೆಕ್

ನಾವು ಈ ವಿಷಯದ ಬಗ್ಗೆ ಸತ್ಯ ಪರಿಶೀಲನೆ ನಡೆಸುವ ಮೊದಲು ಮಹಿಳೆಯರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸೆಕ್ಸಿಸ್ಟ್ ಮತ್ತು ಅಸಹ್ಯಕರ ಕಾಮೆಂಟ್‌ಗಳೊಂದಿಗೆ ಗುರುತಿಸುವುದು ಸಾಮಾನ್ಯ ರೂಢಿಯಾಗಿಬಿಟ್ಟಿರುವುದನ್ನು ಖಂಡಿಸಬೇಕಿದೆ. ಅವರು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರೆ ಕಿರುಕುಳವು ಇನ್ನೂ ಕೆಟ್ಟದ್ದಾಗಿರುತ್ತದೆ. ಜರ್ಗರ್ ಅವರ ವೈಯಕ್ತಿಕ ಜೀವನವು ಅವಳು ಜೈಲಿನಲ್ಲಿರುವ ಸದರಿ ಪ್ರಕರಣಕ್ಕೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದರೂ ಸಹ ಕೆಲವು ಜನರು ಆಕೆಯ ತೇಜೋವಧೆ ಮಾಡಲು ಅದನ್ನು ಬಳಸುತ್ತಿರುವುದು ದುರಾದೃಷ್ಟವಾಗಿದೆ.

ಮೊದಲನೇಯದಾಗಿ ಸಫೂರ ಜರ್ಗರ್ ಮದುವೆಯಾಗಿಲ್ಲ ಎಂಬುದು ದೊಡ್ಡ ಸುಳ್ಳಾಗಿವೆ. ಅವರು 2018 ರಲ್ಲಿ ವಿವಾಹವಾಗಿದ್ದಾರೆ. ಈ ಕುರಿತು ಆಕೆಯ ಪತಿಯೊಂದಿಗೆ ಆಲ್ಟ್‌ ನ್ಯೂಸ್‌ ಮಾತಾಡಿದಾಗ ಅವರು 2018 ರಲ್ಲಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.

ಇದಲ್ಲದೆ, ಆಕೆಯ ಗರ್ಭಧಾರಣೆಯನ್ನು ಇತ್ತೀಚೆಗೆ ಜೈಲಿನಲ್ಲಿ ಕಂಡುಹಿಡಿಯಲಾಯಿತು ಎಂಬ ಹೇಳಿಕೆಯೂ ಸುಳ್ಳು. ಜರ್ಗರ್‌ನನ್ನು ವಶಕ್ಕೆ ತೆಗೆದುಕೊಂಡ ಏಪ್ರಿಲ್ ಆರಂಭದಿಂದಲೂ ಇದು ಈಗಾಗಲೇ ಸುದ್ದಿಯಲ್ಲಿತ್ತು. ಏಪ್ರಿಲ್ 12 ರಿಂದ ಐಎಎನ್‌ಎಸ್ ವರದಿಯ ಸ್ಕ್ರೀನ್‌ಶಾಟ್ ಕೆಳಗೆ ನೀಡಲಾಗಿದೆ. ಅದರಂತೆ ಏಪ್ರಿಲ್ 10 ರಂದು ಬಂಧನಕ್ಕೊಳಗಾದಾಗ ಜರ್ಗರ್ ಮೂರು ತಿಂಗಳ ಗರ್ಭಿಣಿ ಎಂದು ಉಲ್ಲೇಖಿಸಿ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಅದು ವರದಿ ಮಾಡಿದೆ.

ಫೆಬ್ರವರಿ 10 ರಂದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ಜರ್ಗರ್ ಮೂರ್ಛೆ ಹೋಗಿದ್ದರು. ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಗೆ ದಾಖಲಾಗಬೇಕಾಗಿತ್ತು ಎಂದು ಅಲ್ ಜಜೀರಾ ವರದಿ ಮಾಡಿದೆ. “ಅಂದಿನಿಂದ, ಗರ್ಭಧಾರಣೆಯ ಕಾಳಜಿಯೊಂದಿಗೆ, ಅವಳು ಕ್ರಮೇಣ ತನ್ನ ದೈಹಿಕ ಚಲನೆಯನ್ನು ನಿರ್ಬಂಧಿಸಿದ್ದಳು. ಮತ್ತು COVID-19 ಸ್ಫೋಟಗೊಂಡ ನಂತರ, ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಅವಳು ಮನೆಯಿಂದ ಹೊರಗುಳಿಯುವುದನ್ನು ನಿಲ್ಲಿಸಿದ್ದಳು. ಅವಳು ಹೆಚ್ಚಾಗಿ ಮನೆಯಿಂದಲೇ ಕೆಲಸ ಮಾಡುತ್ತಿದ್ದಳು ” ಎಂದು ಆಕೆಯ ಪತಿ ಹೇಳಿದ್ದಾರೆ.

ಜಾಮೀನು ಕೋರಿ ಏಪ್ರಿಲ್ 21 ರಂದು ಸಲ್ಲಿಸಿದ ಮತ್ತೊಂದು ನ್ಯಾಯಾಲಯದ ಅರ್ಜಿಯಲ್ಲಿಯೂ ಸಹ ಆಕೆಯ ವೈದ್ಯಕೀಯ ಸ್ಥಿತಿಯನ್ನು ಸಹ ಸೂಚಿಸುತ್ತದೆ. ಅಂದರೆ ಗರ್ಭಿಣಿಯಾದ ಕಾರಣಕ್ಕೆ ಜಾಮೀನು ನೀಡಬೇಕೆಂದು ಉಲ್ಲೇಖಿಸಿದೆ.

“ಸಫೂರ ವಿವಾಹಿತೆ ಎಂಬುದು ಸಾರ್ವಜನಿಕ ವಲಯದಲ್ಲಿದ್ದರೂ, ಪ್ರೇರಿತ ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳ ಮೂಲಕ ತಪ್ಪು ಅಭಿಪ್ರಾಯವನ್ನು ಸೃಷ್ಟಿಸಲಾಗುತ್ತಿದೆ. ಅವಳನ್ನು ಮತ್ತು ಸಿಎಎ ವಿರೋಧಿ ಶಾಹೀನ್ ಬಾಗ್ ಆಂದೋಲನವನ್ನು ಅಪಚಾರ ಮಾಡುವ ಉದ್ದೇಶದೊಂದಿಗೆ ಈ ಸುಳ್ಳು ಸುದ್ದಿ ಬಿತ್ತರಿಸಲಾಗಿದೆ” ಎಂದು ವೃಂದಾ ಗ್ರೋವರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಣ್ಣು ಮಕ್ಕಳು ದನಿಎತ್ತಿದ್ದರೆ ಅವರು ಸಾಮಾಜಿಕ ಕಾರ್ಯಕರ್ತರು, ಲೇಖಕರು, ಪತ್ರಕರ್ತರು ಅಥವಾ ವಿದ್ಯಾರ್ಥಿ ಕಾರ್ಯಕರ್ತರು ಯಾರೇ ಆಗಲಿ ಅವರ ವಯಕ್ತಿಕ ಜೀವನವನ್ನು ಎಳೆತಂದು ತೇಜೋವಧೆ ಮಾಡುವುದು ಸುಲಭವಾಗಿಬಿಟ್ಟಿದೆ. ಒಬ್ಬ ಮಹಿಳೆ ಅವಳು ಬಯಸಿದ್ದಲ್ಲಿ ಮದುವೆಯಾಗದೆಯೂ ತಾಯಿಯಾಗುವುದರಲ್ಲಿ ತಪ್ಪೇನಿದೆ? ಅದು ಅವಳ ಇಚ್ಚೆಯಲ್ಲವೇ? ಅವರ ಖಾಸಗಿತನವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂಬುದನ್ನು ಅರಿತುಕೊಳ್ಳಬೇಕು.

ಸಫೂರ ಜರ್ಗರ್ ಅವಿವಾಹಿತ ಮಹಿಳೆ ಎಂದು ಸಾಮಾಜಿಕ ಮಾಧ್ಯಮಗಳು ಹೇಳುತ್ತಿರುವುದು ಸುಳ್ಳು. ಆಕೆಯ ಗರ್ಭಧಾರಣೆಯನ್ನು ಜೈಲಿನಲ್ಲಿ ಕಂಡುಹಿಡಿಯಲಾಗಿದೆ ಎಂಬ ವಾದವೂ ಆಧಾರರಹಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...