Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...