Homeಮುಖಪುಟತುಮಕೂರು: ಕರೆದದ್ದು ಸಂಘ-ಸಂಸ್ಥೆಗಳ ಸಭೆ - ನಡೆಸಿದ್ದು ಬಿಜೆಪಿ ಮುಖಂಡರ ಸಭೆ!

ತುಮಕೂರು: ಕರೆದದ್ದು ಸಂಘ-ಸಂಸ್ಥೆಗಳ ಸಭೆ – ನಡೆಸಿದ್ದು ಬಿಜೆಪಿ ಮುಖಂಡರ ಸಭೆ!

- Advertisement -
- Advertisement -

ಕೋವಿಡ್ ಹರಡದಂತೆ ತಡೆಯಲು ಸಂಘ-ಸಂಸ್ಥೆಗಳ ಸಹಕಾರ ಕೋರಿ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಬಿಜೆಪಿ ಮುಖಂಡರು ಇದ್ದರೆ ಹೊರತು ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಕೊರತೆ ಎದ್ದುಕಾಣುತ್ತಿತ್ತು.

ಯಾವ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಹಕಾರವನ್ನು ಕೋರಬೇಕಿತ್ತೋ ಅದನ್ನು ಬಿಟ್ಟು ಉಳಿದಿದ್ದನ್ನು ಜಿಲ್ಲಾಡಳಿತ ಮಾಡಿತ್ತು. ಕೋವಿಡ್ ಸಂದರ್ಭದಲ್ಲಿ ಬಡವರಿಗೆ ನೆರವಾದವರು, ಕ್ವಾರಂಟೈನ್ ಮತ್ತು ಐಸೋಲೇಶನ್ ನಲ್ಲಿಟ್ಟಿದ್ದವರಿಗೆ ಆಹಾರ ನೀಡಿ ಅವರ ನೋವನ್ನು ಆಪ್ತವಾಗಿ ಆಲಿಸಿದವರಿಗೆ ಮಾತ್ರ ಸಭೆಗೆ ಆಹ್ವಾನವಿರಲಿಲ್ಲ. ಹಾಗಾಗಿ ಇದು ಸಂಘಸಂಸ್ಥೆಗಳ ಸಭೆಯಾಗದೇ, ಬಿಜೆಪಿ ಪದಾಧಿಕಾರಿಗಳ ಸಭೆಯಾಗಿದ್ದು ವಿಶೇಷವಾಗಿತ್ತು..

ಸಭೆಯಲ್ಲಿ ಸಂಸದ ಜಿ.ಎಸ್.ಬಸವರಾಜು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ, ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಶಿವಪ್ರಸಾದ್, ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್, ಡಿಸಿ, ಪೊಲೀಸ್ ವರಿಷ್ಠ, ಎಸಿ, ತಹಶೀಲ್ದಾರ್, ನಗರಸಭೆ ಆಯುಕ್ತ ಭೂಬಾಲನ್, ಜಾಮೀಯ ಮಸೀದಿ ಮುತುವಲ್ಲಿ ಮಾತ್ರ ಭಾಗವಹಿಸಿದ್ದರು. ಕೊರೋನ ವಿರುದ್ದದ ಹೋರಾಟ ಯಶಸ್ವಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂಬ ರೀತಿ ಚರ್ಚೆ ನಡೆಯುತ್ತಿತ್ತು. ಮಧ್ಯಪ್ರವೇಶಿಸಿದ ಸಾಮಾಜಿಕ ಕಾರ್ಯಕರ್ತರು ಸಾಕಷ್ಟು ಸಮಸ್ಯೆ ಇದೆ. ಸಂಘ ಸಂಸ್ಥೆಗಳ ಸಭೆ ಅಂದ್ರೆ ಇದೇನಾ ಎಂದು ಜಿಲ್ಲಾದಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಸಭೆಯ ದಾಟಿಯೇ ಬದಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವ್ಯವಸ್ಥೆ ಇರುವುದು ಕಂಡುಬಂದರೆ ಸಸ್ಪೆಂಡ್ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಉಪವಿಭಾಗಾಧಿಕಾರಿ ಮಾತ್ರ ತಹಶೀಲ್ದಾರ್ ಪರ ವಕಾಲತ್ತು ವಹಿಸಿ ಮಾತನಾಡಲು ತೊಡಗಿದರು. ಆಗ ಸಾಮಾಜಿಕ ಕಾರ್ಯಕರ್ತರೊಬ್ಬರು ಮೊಬೈಲ್ ಮೂಲಕ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಯನ್ನು ಸಂಪರ್ಕಿಸಿ ಸತ್ಯ ಹೇಳುವಂತೆ ಡಿಸಿಗೆ ಮೊಬೈಲ್ ಕೊಟ್ಟಿದ್ದಾರೆ. ಆಗ ಕ್ವಾರಂಟೈನ್ ಮತ್ತು ಐಸೋಲೇಷನ್ ನಲ್ಲಿರುವವರು ಅನುಭವಿಸುತ್ತಿರುವ ಕಷ್ಟಗಳ ದರ್ಶನ ಜಿಲ್ಲಾಧಿಕಾರಿಗಳಿಗೆ ಆಗಿದೆ.

ಈ ಪ್ರಕರಣದಿಂದ ಸತ್ಯ ಗೋಚರಿಸುವಂತೆ ಮಾಡಿದೆ. ಅಲ್ಲದೆ ಕೆಳಹಂತದ ಅಧಿಕಾರಿಗಳು ಮಾಹಿತಿ ಮುಚ್ಚಿಡುವುದು ಇದರಿಂದ ತಿಳಿಯುತ್ತದೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ನಡುವೆ ಸಮನ್ವಯದ ಕೊರತೆ ಇದೆ. ಕ್ವಾರಂಟೈನ್ ನಲ್ಲಿರುವವರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ಸಾಮಾನ್ಯ ರೋಗಿಗಳಿಗೆ ಶ್ರೀದೇವಿ ನರ್ಸಿಂಗ್ ಹೋಂನಲ್ಲಿ ಡಬಲ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.

ಕೊರೊನ ವಾರಿಯರ್ ಗಳಾಗಿ ದುಡಿಯುತ್ತಿರುವ ಎಲ್ಲರ ಮಾಹಿತಿ ಎಲ್ಲರಿಗೂ ದೊರೆಯುವಂತಾಗಬೇಕು. ಪೌರ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಸುರಕ್ಷಾ ಸಲಕರಣೆಗಳನ್ನು ನೀಡಬೇಕು ಎಂದು ಒಕ್ಕೂಟ ಆಗ್ರಹಿಸಿದೆ.


ಇದನ್ನೂ ಓದಿ: ಈ ಕೋರಾನಾ ಟೈಮಲ್ಲಿ ಒಳ್ಳೆ ಕೆಲಸ ಮಾಡ್ತಿರೋ ಒಬ್ಬ ಮುಸ್ಲಿಮನೂ ಈ ಮೀಡಿಯಾದವರಿಗೆ ಸಿಗೋದಿಲ್ವ ಸರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...