Homeಮುಖಪುಟಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಮತ್ತೊಮ್ಮೆ ರಾಜ್ಯ ಸರ್ಕಾರ ಬಿಲ್ಡರ್‌ಗಳ ಲಾಬಿಗೆ ಮಣಿದು ಕಾರ್ಮಿಕರ ನೆಮ್ಮದಿಗಿಂತ ರಿಯಲ್‌ ಎಸ್ಟೇಟ್‌ ಧಣಿಗಳ ಹಿತಕ್ಕೆ ಜೋತುಬಿದ್ದಿದೆ. ಹಾಗಾಗಿ ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದಾರೆ.

ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವ ಸುತ್ತೋಲೆಯಲ್ಲಿ ಬುಧವಾರ ಬೆಳಗ್ಗೆ 09 ಗಂಟೆಗೆ ಮತ್ತು ಮಧ್ಯಾಹ್ನ 12 ಗಂಟೆಗೆ ಹೊರಬೇಕಿದ್ದ ರೈಲುಗಳನ್ನು ಓಡಿಸದಿರಲು ಸೂಚಿಸಿದ್ದು, ಕಾರಣವನ್ನು ನೀಡಿಲ್ಲ.

ಆದರೆ ಅದಕ್ಕೆ ಕಾರಣ ಮಾತ್ರ ಸ್ಪಷ್ಟವಿದೆ. ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರೆಲ್ಲರೂ ತಮ್ಮ ರಾಜ್ಯಗಳಿಗ ಹೊರಟುಹೋದರೆ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕೆಲಸಕ್ಕೆ ಹೊಡೆತುಬೀಳುತ್ತದೆ. ಹಾಗಾಗಿ ರೈಲುಗಳೇ ಹೊರಡಿದಿದ್ದರೆ ಕಾರ್ಮಿಕರು ಇಲ್ಲೇ ಉಳಿಯುವುದರಿಂದ ಕೆಲಸ ಸಾಧ್ಯ ಎಂದು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಅನ್ಯ ರಾಜ್ಯಗಳಿಗೆ ಉದ್ಯೋಗ ಹುಡುಕಿಕೊಂಡು ವಲಸೆ ಹೋಗಿದ್ದ ಕಾರ್ಮಿಕರ ಅವರ ತವರು ರಾಜ್ಯಗಳಿಗೆ ತಲುಪಿಸಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದರಂತೆ ಕರ್ನಾಟಕದಿಂದ ವಿವಿಧ ರಾಜ್ಯಗಳಿಗೆ ಪ್ರತಿ ದಿನ 2 ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿತ್ತು. ಕಳೆದ ಎರಡು ದಿನ 04 ರೈಲುಗಳು ನೆರೆಯ ರಾಜ್ಯಗಳಿಗೆ ಸಂಚಾರ ಆರಂಭಿಸಿವೆ. ಮಂಗಳವಾರ ಬೆಂಗಳೂರಿನ ಚಿಕ್ಕಬಾಣಾವರ ಜಂಕ್ಷನ್‌ನಿಂದ ಜೈಪುರಕ್ಕೆ ವಿಶೇಷ ರೈಲು ಹೊರಟಿದೆ.

ಆದರೆ, ಇದ್ದಕ್ಕಿದ್ದಂತೆ ರಾಜ್ಯ ಸರ್ಕಾರ ರೈಲುಗಳ ಸಂಚಾರಕ್ಕೆ ತಡೆ ನೀಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

ಕಾರ್ಮಿಕರು ತಮ್ಮ ಊರುಗಳಿಗೆ ಸೇರಿದರೆ, ಕಟ್ಟಡ ನಿರ್ಮಾಣದಂತಹ ಕಾಮಗಾರಿಗಳಿಗೆ ಕೂಲಿ ಕೆಲಸ ಮಾಡಲು ಕಾರ್ಮಿಕರು ಸಿಗುವುದಿಲ್ಲ. ಇದರಿಂದಾಗಿ ರಿಯಲ್‌ ಎಸ್ಟೇಟ್‌ ಖೂಳರ ಕೆಲಸಗಳು ನಿಂತು ಹೋಗುತ್ತವೆ ಎಂಬ ಕಾರಣಕ್ಕಾಗಿ ಕಾರ್ಮಿಕರು ಹೊರಗೆ ಹೋಗದಂತೆ ತಡೆಯುವ ಸಂಚು ಇದೆ ಎಂದು ಹೇಳಲಾಗುತ್ತಿದೆ.

ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರಿಗೆ ಊಟ ಸಿಗುತ್ತಿದೆಯೇ, ಅವರಿಗೆ ಸಂಬಳ ಹೋಗುತ್ತಿದೆಯೇ ಎಂಬುದರ ಬಗ್ಗೆ ಕಿಂಚಿತ್ತೂ ಯೋಚಿಸದೇ ತಮ್ಮ ಪಾಡಿಗೆ ಇದ್ದ ಬಿಲ್ಡರ್‌ಗಳು ಈಗ ಕಾರ್ಮಿಕರು ತಮ್ಮ ಊರುಗಳಿಗೆ ಹೊರಟುನಿಂತ ಸಂದರ್ಭದಲ್ಲಿ ಅದನ್ನು ತಡೆಯುತ್ತಿರುವುದು ಅಮಾನವೀಯ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಜಾರ್ಖಂಡ್‌ನ ಜಾರ್ಖಂಡ್‌ ಆರ್ಗನೈಸೇಷನ್‌ ಆಫ್‌ ಹ್ಯೂಮನ್ ರೈಟ್ಸ್‌ (Johar) ಸಂಘಟನೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಒಟ್ಟಿನಲ್ಲಿ ಕೇವಲ ನಾಲ್ಕು ಗಂಟೆಗಳ ಅವದಿ ಕಾಲಾವಕಾಶ ನೀಡಿ ಲಾಕ್‌ಡೌನ್‌ ಮಾಡಿ ಕಾರ್ಮಿಕರನ್ನು ನಿರ್ಗತಿರನ್ನಾಗಿಸಿದ್ದ ಸರ್ಕಾರ, ಈಗ ಕಾರ್ಪೋರೇಟ್‌ ಲಾಬಿಗೆ ಮಣಿದು ಕಾರ್ಮಿಕರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...