Homeಮುಖಪುಟಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಮತ್ತೊಮ್ಮೆ ರಾಜ್ಯ ಸರ್ಕಾರ ಬಿಲ್ಡರ್‌ಗಳ ಲಾಬಿಗೆ ಮಣಿದು ಕಾರ್ಮಿಕರ ನೆಮ್ಮದಿಗಿಂತ ರಿಯಲ್‌ ಎಸ್ಟೇಟ್‌ ಧಣಿಗಳ ಹಿತಕ್ಕೆ ಜೋತುಬಿದ್ದಿದೆ. ಹಾಗಾಗಿ ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದಾರೆ.

ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವ ಸುತ್ತೋಲೆಯಲ್ಲಿ ಬುಧವಾರ ಬೆಳಗ್ಗೆ 09 ಗಂಟೆಗೆ ಮತ್ತು ಮಧ್ಯಾಹ್ನ 12 ಗಂಟೆಗೆ ಹೊರಬೇಕಿದ್ದ ರೈಲುಗಳನ್ನು ಓಡಿಸದಿರಲು ಸೂಚಿಸಿದ್ದು, ಕಾರಣವನ್ನು ನೀಡಿಲ್ಲ.

ಆದರೆ ಅದಕ್ಕೆ ಕಾರಣ ಮಾತ್ರ ಸ್ಪಷ್ಟವಿದೆ. ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರೆಲ್ಲರೂ ತಮ್ಮ ರಾಜ್ಯಗಳಿಗ ಹೊರಟುಹೋದರೆ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕೆಲಸಕ್ಕೆ ಹೊಡೆತುಬೀಳುತ್ತದೆ. ಹಾಗಾಗಿ ರೈಲುಗಳೇ ಹೊರಡಿದಿದ್ದರೆ ಕಾರ್ಮಿಕರು ಇಲ್ಲೇ ಉಳಿಯುವುದರಿಂದ ಕೆಲಸ ಸಾಧ್ಯ ಎಂದು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಅನ್ಯ ರಾಜ್ಯಗಳಿಗೆ ಉದ್ಯೋಗ ಹುಡುಕಿಕೊಂಡು ವಲಸೆ ಹೋಗಿದ್ದ ಕಾರ್ಮಿಕರ ಅವರ ತವರು ರಾಜ್ಯಗಳಿಗೆ ತಲುಪಿಸಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದರಂತೆ ಕರ್ನಾಟಕದಿಂದ ವಿವಿಧ ರಾಜ್ಯಗಳಿಗೆ ಪ್ರತಿ ದಿನ 2 ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿತ್ತು. ಕಳೆದ ಎರಡು ದಿನ 04 ರೈಲುಗಳು ನೆರೆಯ ರಾಜ್ಯಗಳಿಗೆ ಸಂಚಾರ ಆರಂಭಿಸಿವೆ. ಮಂಗಳವಾರ ಬೆಂಗಳೂರಿನ ಚಿಕ್ಕಬಾಣಾವರ ಜಂಕ್ಷನ್‌ನಿಂದ ಜೈಪುರಕ್ಕೆ ವಿಶೇಷ ರೈಲು ಹೊರಟಿದೆ.

ಆದರೆ, ಇದ್ದಕ್ಕಿದ್ದಂತೆ ರಾಜ್ಯ ಸರ್ಕಾರ ರೈಲುಗಳ ಸಂಚಾರಕ್ಕೆ ತಡೆ ನೀಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

ಕಾರ್ಮಿಕರು ತಮ್ಮ ಊರುಗಳಿಗೆ ಸೇರಿದರೆ, ಕಟ್ಟಡ ನಿರ್ಮಾಣದಂತಹ ಕಾಮಗಾರಿಗಳಿಗೆ ಕೂಲಿ ಕೆಲಸ ಮಾಡಲು ಕಾರ್ಮಿಕರು ಸಿಗುವುದಿಲ್ಲ. ಇದರಿಂದಾಗಿ ರಿಯಲ್‌ ಎಸ್ಟೇಟ್‌ ಖೂಳರ ಕೆಲಸಗಳು ನಿಂತು ಹೋಗುತ್ತವೆ ಎಂಬ ಕಾರಣಕ್ಕಾಗಿ ಕಾರ್ಮಿಕರು ಹೊರಗೆ ಹೋಗದಂತೆ ತಡೆಯುವ ಸಂಚು ಇದೆ ಎಂದು ಹೇಳಲಾಗುತ್ತಿದೆ.

ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರಿಗೆ ಊಟ ಸಿಗುತ್ತಿದೆಯೇ, ಅವರಿಗೆ ಸಂಬಳ ಹೋಗುತ್ತಿದೆಯೇ ಎಂಬುದರ ಬಗ್ಗೆ ಕಿಂಚಿತ್ತೂ ಯೋಚಿಸದೇ ತಮ್ಮ ಪಾಡಿಗೆ ಇದ್ದ ಬಿಲ್ಡರ್‌ಗಳು ಈಗ ಕಾರ್ಮಿಕರು ತಮ್ಮ ಊರುಗಳಿಗೆ ಹೊರಟುನಿಂತ ಸಂದರ್ಭದಲ್ಲಿ ಅದನ್ನು ತಡೆಯುತ್ತಿರುವುದು ಅಮಾನವೀಯ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಜಾರ್ಖಂಡ್‌ನ ಜಾರ್ಖಂಡ್‌ ಆರ್ಗನೈಸೇಷನ್‌ ಆಫ್‌ ಹ್ಯೂಮನ್ ರೈಟ್ಸ್‌ (Johar) ಸಂಘಟನೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಒಟ್ಟಿನಲ್ಲಿ ಕೇವಲ ನಾಲ್ಕು ಗಂಟೆಗಳ ಅವದಿ ಕಾಲಾವಕಾಶ ನೀಡಿ ಲಾಕ್‌ಡೌನ್‌ ಮಾಡಿ ಕಾರ್ಮಿಕರನ್ನು ನಿರ್ಗತಿರನ್ನಾಗಿಸಿದ್ದ ಸರ್ಕಾರ, ಈಗ ಕಾರ್ಪೋರೇಟ್‌ ಲಾಬಿಗೆ ಮಣಿದು ಕಾರ್ಮಿಕರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...