Homeಅಂತರಾಷ್ಟ್ರೀಯಮಾಸ್ಕ್ ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಟ್ರಂಪ್

ಮಾಸ್ಕ್ ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಟ್ರಂಪ್

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರಿಜೋನಾದ ಫೀನಿಕ್ಸ್‌ನಲ್ಲಿ ಮಾಸ್ಕ್ ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿದರೂ ಮಾಸ್ಕ್ ಧರಿಸಲು ನಿರಾಕರಿಸಿರುವ ಘಟನೆ ಜರುಗಿದೆ.

ಕೊರೊನಾ ಲಾಕ್‌ಡೌನ್‌ ನಂತರ ತಮ್ಮ ಮೊದಲ ಪ್ರವಾಸದಲ್ಲಿ ಅರಿಜೋನಾದ ಫೀನಿಕ್ಸ್‌ನ ಮಾಸ್ಕ್ ತಯಾರಿಸುವ ಕಾರ್ಖಾನೆಯಾದ ಹನಿವೆಲ್‌ಗೆ ಭೇಟಿ ನೀಡಿದ್ದರು. ಅಲ್ಲಿಯ ಸಿಬ್ಬಂದಿ ಮಾಸ್ಕ್‌‌ ‌ಅನ್ನು ನೀಡಿದರೂ ಟ್ರಂಪ್ ಧರಿಸಲು ನಿರಾಕರಿಸಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಾದ ಆರ್ಥಿಕತೆಯನ್ನು ಪುನಃ ತೆರೆದರೆ ಹೆಚ್ಚಿನ ಅಮೆರಿಕನ್ನರು ಸಾಯುತ್ತಾರೆ ಎಂದು ಒಪ್ಪಿಕೊಂಡರು. “ಅಪಾರ್ಟ್ಮೆಂಟ್, ಮನೆ ಅಥವಾ ಅದು ಏನೇ ಇರಲಿ ನಿಮ್ಮನ್ನು ಲಾಕ್ ಮಾಡಲಾಗುವುದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಕೆಲವು ಜನರ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತಾರೆ ಎಂದು ಕಾರ್ಖಾನೆಯಲ್ಲಿ ಒಪ್ಪಿಕೊಂಡ ಅವರು, ಆದರೆ ನಾವು ನಮ್ಮ ದೇಶವನ್ನು ಮುಕ್ತಗೊಳಿಸಬೇಕು ಎಂದರು.

ವೈದ್ಯಕೀಯ ಸಿಬ್ಬಂದಿ ಮತ್ತು ಇತರರು ಬಳಸುವ ಮುಖವಾಡಗಳನ್ನು ತಯಾರಿಸುವ ಹನಿವೆಲ್ ಕಾರ್ಮಿಕರನ್ನು ಶ್ಲಾಘಿಸಿದ ಟ್ರಂಪ್, ಇದು ಮುಂದೆ ನೋಡುವ ಸಮಯವಾಗಿದೆ ಎಂದಿದ್ದಾರೆ.

ಅಮೆರಿಕಾದಲ್ಲಿ ನವೆಂಬರ್‌ನಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್ ಮರು ಆಯ್ಕೆಯಾಗಲು ಬಯಸಿದ್ದಾರೆ. ಆದರೆ ಕೊರೊನಾ ಸಾಂಕ್ರಮಿಕವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲವೆಂದು ಅಮೆರಿಕಾದಾದ್ಯಂತ ಟ್ರಂಪ್ ಟೀಕೆಗೆ ಒಳಗಾಗಿದ್ದಾರೆ.

ಅಮೆರಿಕಾದಲ್ಲಿ ಇದುವರೆಗೂ 12 ಲಕ್ಷಕ್ಕಿಂತಲೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಳಿದ್ದು, 72 ಸಾವಿರಕ್ಕಿಂತಲೂ  ಹೆಚ್ಚು ಜನರು ಮೃತಪಟ್ಟಿದ್ದಾರೆ. ವಿಶ್ವದಾದ್ಯಂತ 36 ಲಕ್ಷ ಜನರಿಗೆ ಸೋಂಕು ಹರಡಿದ್ದು, 2,57,000 ಜನರು ಮೃತಪಟ್ಟಿದ್ದಾರೆ.


ಇದನ್ನೂ ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ವಿಡಿಯೊ ನೋಡಿ: ಸದ್ದು…ಈ ಸುದ್ದಿ ಏನಾಗಿದೆ ? 3 ನೇ ಸಂಚಿಕೆ

ಸದ್ದು ಈ ಸುದ್ದಿಗಳೇನಾದವು? – 03

ಮಾರತ್ತಹಳ್ಳಿ ಷೆಡ್‌ ಧ್ವಂಸ ಪ್ರಕರಣದಲ್ಲಿ ಹೈಕೋರ್ಟ್‌ ಹೇಳಿದ್ದು ಜಾರಿಯಾಯಿತಾ? ಅಕ್ರಮ ಕೆಲಸಕ್ಕೆ ಕುಮ್ಮಕ್ಕು ಕೊಟ್ಟಿದ್ದ ಅರವಿಂದ ಲಿಂಬಾವಳಿ ಮತ್ತು ಸುವರ್ಣ ಟಿವಿ ಏನು ಮಾಡಬೇಕಿತ್ತು?ಆನೇಕಲ್‌ ರೀ-ಪ್ಯಾಕಿಂಗ್‌ ಪ್ರಕರಣದಲ್ಲಿ ದೂರುದಾರರು ಸ್ಥಳೀಯ ಸರ್ಕಾರಿ ಅಧಿಕಾರಿಯಾಗಿದ್ದರೂ, ಇದುವರೆಗೆ ಕ್ರಮ ಏಕಾಗಿಲ್ಲ? ಇವೆರಡು ಫಾಲೋಅಪ್‌ ಒಳಗೊಂಡಂತೆ ಮರೆಯಬಾರದ ಹಳೆಯ ಸುದ್ದಿಗಳು ಮತ್ತು ಇಂದಿನ ಸುದ್ದಿಗಳ ಇನ್ನೊಂದು ಮಗ್ಗುಲನ್ನು ತೋರಿಸುವ ವಿಶಿಷ್ಟ ಕಾರ್ಯಕ್ರಮವಿದು.ನೋಡಿ ಷೇರ್‌ ಮಾಡಿ.

Posted by Naanu Gauri on Tuesday, May 5, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...