Homeಮುಖಪುಟವಲಸೆ ಕಾಮಿ೯ಕರನ್ನು ಬಿಲ್ಡರ್‌ಗಳ ಜೀತದಾಳು ಮಾಡುತ್ತಿರುವ ಸಕಾ೯ರ : ಸಿಪಿಐ(ಎಂ) ಖಂಡನೆ

ವಲಸೆ ಕಾಮಿ೯ಕರನ್ನು ಬಿಲ್ಡರ್‌ಗಳ ಜೀತದಾಳು ಮಾಡುತ್ತಿರುವ ಸಕಾ೯ರ : ಸಿಪಿಐ(ಎಂ) ಖಂಡನೆ

- Advertisement -
- Advertisement -

ತಮ್ಮ ರಾಜ್ಯಗಳಿಗೆ ಹಿಂತಿರುಗಿ ಹೋಗಬಯಸುವ ಹೊರ ರಾಜ್ಯದ ವಲಸೆ ಕಾಮಿ೯ಕರನ್ನು ತಮ್ಮ ಊರುಗಳಿಗೆ ಹೋಗಲು ಬಿಡದೆ ರೈಲು ರದ್ದುಗೊಳಿಸುವ ಮೂಲಕ ಬಿಲ್ಡರ್‌ಗಳ ಜೀತದಾಳುಗಳನ್ನಾಗಿಸುತ್ತಿರುವ ರಾಜ್ಯ ಸಕಾ೯ರದ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಖಂಡಿಸಿವೆ.

ಈ ಕುರಿತು ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಸಿಪಿಐ(ಎಂ) ಕಾರ್ಯದರ್ಶಿಯಾದ ಕೆ. ಎನ್.ಉಮೇಶ್ ಮತ್ತು ಬೆಂಗಳೂರು ಉತ್ತರ ಜಿಲ್ಲಾ ಸಮಿತಿಯ ಕಾರ್ಯದರ್ಶಿಯದ ಎನ್. ಪ್ರತಾಪ್ ಸಿಂಹರವರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ ಅನಾಗರೀಕ ನಿರ್ಧಾರದಿಂದ ಕೂಡಲೇ ಸರ್ಕಾರ ಹಿಂದೆ ಸರಿಯಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 


ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳಿಸದೇ ದೂರದ ಮಾದಾವರ ಬಳಿಯ ಬಿಐಇಸಿಯಲ್ಲಿ ಕೂಡಿಹಾಕಲಾಗಿದೆ. ಮೊದಲಿಗೆ ಕಳುಹಿಸುವುದಾಗಿ ಹೇಳಿ, ಆನಂತರ ಸಚಿವರಾದ ಆರ್. ಅಶೋಕ್ ರವರು ಬಿಹಾರ ಮುಖ್ಯಮಂತ್ರಿಯವರು ಒಪ್ಪದ ಕಾರಣ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ‌ಆದರೆ ಅದೇ ಸಮಯದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಮೂಲಕ ರೈಲುಸೇವೆಯನ್ನು ರದ್ದುಗೊಳಿಸಿದ್ದಾರೆ. ಇದರ ಹಿಂದೆ ಬಿಲ್ಡರ್‌ಗಳ ಹಿತವೇ ರಾಜ್ಯ ಬಿಜೆಪಿ ಸಕಾ೯ರಕ್ಕೆ ಪ್ರಧಾನವಾಗಿದೆ ಎಂಬುದನ್ನು ಸಾಬೀತು ಮಾಡಿದೆ ಎಂದು ಹೇಳಿಕೆಯಲ್ಲಿ ಟೀಕಿಸಲಾಗಿದೆ.

ಕೂಲಿಯಿಲ್ಲದೆ ಹಸಿದಿದ್ದ ಅವರಿಗೆ ಬಿಜೆಪಿ ಬೆಂಬಲಿತ ಅದಮ್ಯ ಚೇತನ, ರವಿ ಶಂಕರ್ ಆಶ್ರಮ ಮುಂತಾದವರಿಗೆ ಸಿದ್ಧ ಆಹಾರ ಗುತ್ತಿಗೆ ನೀಡಿ ಉಪ್ಪು ಹುಳಿ ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಆಹಾರ ನೀಡಿ ಅವರನ್ನು ಮತ್ತಷ್ಟು ಹತಾಶರನ್ನಾಗಿಸಿತ್ತು. ಈ ಎಲ್ಲದರ ಪರಿಣಾಮವಾಗಿ ವಲಸೆ ಕಾಮಿ೯ಕರು ಬೇಸತ್ತು ಪೋಲಿಸರ ವಿರುದ್ಧ ತಿರುಗಿ ಬಿದ್ದಿದ್ದರು. ಕನ್ನಡ ಇಂಗ್ಲಿಷ್ ಬಾರದ ಕಾಮಿ೯ಕರಿಗೆ ಸೇವಾ ಸಿಂಧು ಆಪ್ ಮೂಲಕವೇ ನೋಂದಾಯಿಸಲು ಹೇಳಿ ಅವರನ್ನು ವಂಚಿಸಿದ ಸಕಾ೯ರವು, ಇತರರ ಸಹಾಯ ಪಡೆದು ನೋಂದಾಯಿಸಲು ಮುಂದಾದಾಗ ಸವ೯ರ್ ಡೌನ್ ಮಾಡಿ ನೋಂದಾಯಿಸಿ ಕೊಳ್ಳಲು ಬಿಡದೆ ಇದೀಗ ರೈಲುಗಳನ್ನು ರದ್ದು ಪಡಿಸಿ ವಲಸೆ ಕಾಮಿ೯ಕರನ್ನು ಜೀತದಾಳುಗಳಂತೆ ನೆಡೆಸಿ ಕೊಳ್ಳುತ್ತಿದೆ ಎಂದು ಕೆ. ಎನ್.ಉಮೇಶ್ ರವರು ಆರೋಪಿಸಿದ್ದಾರೆ.

ಇದು ಕಾರ್ಮಿಕರನ್ನು ಹತಾಶ ಸ್ಥಿತಿಗೆ ತಳ್ಳಿದ್ದು ಮುಂದೆ ಕಾಮಿ೯ಕರಿಗೆ ಉಂಟಾಗುವ ಎಲ್ಲಾ ಅನಾಹುತಗಳಿಗೂ ರಾಜ್ಯ ಬಿಜೆಪಿ ಸಕಾ೯ರದ ದುರಾಡಳಿತವೇ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...