Homeಮುಖಪುಟಆರ್‌ಸಿಇಪಿ ಒಪ್ಪಂದಕ್ಕೆ ಈ ಬಾರಿ ಭಾರತ ಸಹಿ ಹಾಕಲಿದೆಯೇ?

ಆರ್‌ಸಿಇಪಿ ಒಪ್ಪಂದಕ್ಕೆ ಈ ಬಾರಿ ಭಾರತ ಸಹಿ ಹಾಕಲಿದೆಯೇ?

- Advertisement -
- Advertisement -

2019ನೇ ವರ್ಷದ ನವೆಂಬರ್ ತಿಂಗಳಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP) ಮಾತುಕತೆಗಳಿಂದ ಹಿಂದೆ ಸರಿದಿದ್ದ ಭಾರತ ಇದೀಗ RCEP ಸದಸ್ಯ ರಾಷ್ಟ್ರಗಳು ಕಳುಹಿಸಿರುವ ಹೊಸ ಪ್ರಸ್ತಾಪವನ್ನು ಪರಿಗಣಿಸುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಏಪ್ರಿಲ್ 20 ರಿಂದ 24ರವರೆಗೆ ಜರುಗಿದ RCEP ಸದಸ್ಯ ರಾಷ್ಟ್ರಗಳ ವ್ಯಾಪಾರ ಸಮಾಲೋಚನಾ ಸಮಿತಿಯು ತನ್ನ ಸಭೆಯಲ್ಲಿ ನಿರ್ಧಾರವಾದ ಬಳಿಕ ಭಾರತವನ್ನು ಒಪ್ಪಂದದೆಡಿಗಿನ ಮಾತುಕತೆಗೆ ಮತ್ತೆ ಮರಳಿ ಕರೆತರುವ ನಿಟ್ಟಿನಲ್ಲಿ ಭಾರತ ಸರ್ಕಾರಕ್ಕೆ ಪತ್ರ ರವಾನಿಸಿದೆ.

ಪ್ರಸ್ತಾಪಿತ RCEP ಒಪ್ಪಂದವನ್ನು ಅಂತಿಮಗೊಳಿಸಲು ಪ್ರಯತ್ನಿಸುತ್ತಿರುವ ಭಾರತ ಹೊರತುಪಡಿಸಿದ ಹದಿನೈದು ಸದಸ್ಯ ದೇಶಗಳು (ದಕ್ಷಿಣ ಪೂರ್ವ ಏಷ್ಯಾದ 10 ರಾಷ್ಟ್ರಗಳು (ಆಸಿಯಾನ್) ಅಂದರೆ ಚೀನಾ, ಆಸ್ಪ್ರೇಲಿಯಾ, ನ್ಯೂಜಿಲೆಂಡ್, ಜಪಾನ್ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ 15 ರಾಷ್ಟ್ರಗಳು) ಭಾರತದ ಮುಂದೆ ಮಾರುಕಟ್ಟೆ ತೆರೆಯುವ (ಮಾರ್ಕೆಟ್ ಆಕ್ಸೆಸ್) ಕುರಿತ ನಿಯಮಾವಳಿಗಳನ್ನು ಮರುಪರಿಶೀಲಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಮೇ 15 ರೊಳಗೆ ಭಾರತಕ್ಕೆ ಪ್ರತಿಕ್ರಿಯಿಸಲು ಕೇಳಿಕೊಂಡಿವೆ ಎಂದು ಇಂಡಿಯಾ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಒಂದು ವೇಳೆ ಭಾರತವು ಒಪ್ಪಂದದ ಕುರಿತ ಮಾತುಕತೆಗೆ ಮರಳದ್ದಿದ್ದರು ಕೂಡ ಈ 15 ದೇಶಗಳು 2020 ರ ನವೆಂಬರ್-ಡಿಸೆಂಬರ್ ವೇಳೆಗೆ ಸದರಿ ಒಪ್ಪಂದವನ್ನು ಅಂತಿಮಗೊಳಿಸಲು ನಿರ್ಧರಿಸಿವೆ.

ಈಗಾಗಲೇ ಭಾರತವು ಚೀನಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಹೊರತುಪಡಿಸಿ ಇತರೆ ಎಲ್ಲಾ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ.

ಈಗ ಹೊಸದಾಗಿ ನೀಡಿರುವ ಪ್ರಸ್ತಾಪವು ಭಾರತದ ಆದ್ಯತೆಯಂತೆ ಮಾರುಕಟ್ಟೆಗಳಿಗೆ ಪ್ರವೇಶ ಸಂಬಂಧದ ಸುಂಕಗಳನ್ನು ನಿರ್ಧರಿಸುವ ವಿಚಾರಗಳಲ್ಲಿ 2014ರ ಮೂಲ ದರಗಳ ಬದಲಾಗಿ “ಮೋಸ್ಟ ಫೆವರ್ಡ್ ನೇಷನ್- ಎಮ್ಎಫ್ಎನ್”(most favoured nation- ಪರಸ್ಪರ ವ್ಯಾಪಾರಗಳಲ್ಲಿ ಮೊದಲ ಆದ್ಯತೆ ಹೊಂದಿದ ರಾಷ್ಟ್ರ) ಸುಂಕ ದರಗಳನ್ನು ಬಳಸುವ ಮತ್ತು ಆಮದುಗಳ ಹೆಚ್ಚಳದ ವಿರುದ್ಧ ಸುರಕ್ಷತಾ ಕಾರ್ಯವಿಧಾನ ಬಳಸುವ ನಿಟ್ಟಿನಲ್ಲಿ ಭಾರತದ ಬೇಡಿಕೆಗಳನ್ವಯ ಮನ್ನಣ್ಣೆ ನೀಡಿವೆ.

ಆದರೂ ಉಳಿದ 15 ದೇಶಗಳು ಮಾರ್ಕೆಟ್ ಆಕ್ಸೆಸ್ ಮತ್ತು ಸುರಕ್ಷತಾ ಕಾರ್ಯವಿಧಾನ ಎರಡನ್ನೂ ಕೆಲವು ನಿರ್ದಿಷ್ಟ ವಸ್ತುಗಳಿಗೆ ಸೀಮಿತ ಮಾಡ ಬಯಸುತ್ತಿವೆ; ಹಾಗೂ ಮೂರನೇ ಆರ್ಸಿಇಪಿ ದೇಶದ ಮೂಲಕ ಚೀನೀ ಉತ್ಪನ್ನಗಳು ಪ್ರವೇಶಿಸುವುದನ್ನು ನಿಲ್ಲಿಸುವ ಗುರಿಯಿಂದ ಭಾರತ ಬೇಡಿಕೆಯಿಟ್ಟಿದ್ದ ರೂಲ್ಸ್ ಆಫ್ ಆರಿಜಿನ್ (ಸರಕು ತಯಾರಾಗುವ ಮೂಲ ನೆಲೆ) ಕುರಿತ ನಿಯಮಗಳನ್ನು ಎಲ್ಲಾ 15 ದೇಶಗಳು ಕಡೆಗಣಿಸಿರುವುದು ಕಂಡು ಬರುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ಇತರೆ ದೇಶಗಳು ಸದ್ಯಕ್ಕೆ ಭಾರತಕ್ಕೆ ಕಳಿಸಿರುವ ಪ್ರಸ್ತಾಪದಲ್ಲಿ ಉಲ್ಲೇಖಿಸಿರುವಂತೆ “ಭಾರತದ ಆದ್ಯತೆಯಂತೆ ನವೀಕರಿಸಿದ ಮಾರುಕಟ್ಟೆ ಪ್ರವೇಶದ ಸಂಬಂಧಿತವಾಗಿ ಸೀಮಿತ ಸಂಖ್ಯೆಯ ಅತಿಮುಖ್ಯ ಉತ್ಪನ್ನಗಳ ಮೇಲೆ 2019 ಎಮ್ಎಫ್ಎನ್ ಸುಂಕಗಳನ್ನು ಬಳಸಿಕೊಂಡು ಭಾರತ ಆರ್ಸಿಇಪಿ ದೇಶಗಳೊಂದಿಗೆ ದ್ವಿಪಕ್ಷೀಯವಾಗಿ ಮಾತುಕತೆ ನಡೆಸುವುದನ್ನು ನಾವು ಸ್ವಾಗತಿಸುತ್ತೇವೆ …ಮಾರ್ಕೆಟ್ ಆಕ್ಸೆಸ್ (ಮಾರುಕಟ್ಟೆ ಪ್ರವೇಶ) ಕುರಿತಾದ ವಿಚಾರಗಳನ್ನು ದ್ವಿಪಕ್ಷೀಯ ಮಾತುಕತೆಗಳ ಮೂಲಕ ಬಗೆಹರಿಸಬಹುದು ಮತ್ತು ಅದು ಸಮತೋಲನದಲ್ಲಿ ಉಳಿಯುತ್ತದೆ ಎನ್ನುವ ತಿಳುವಳಿಕೆಯ ಮೇಲೆ ಈ ಪ್ರಸ್ತಾಪವನ್ನು ಮುಂದಿಡುತ್ತಿದ್ದೇವೆ, ಭಾರತದ ಟ್ಯಾರಿಫ್ ರಿಸ್ಟ್ರೀಕ್ಷನ್ಸ್ (ಸುಂಕ ಬದ್ಧತೆಗಳು) ಎಲ್ಲರಿಗೂ ಸ್ವೀಕಾರಾರ್ಹವಾಗಿರುತ್ತದೆ ” ಎಂದು ತಿಳಿಸಿವೆ.

ಆರ್ಸಿಇಪಿ ರಾಷ್ಟ್ರಗಳೊಂದಿಗಿನ ಭಾರತದ ವ್ಯಾಪಾರ ಕೊರತೆಯು US $ 105 ಬಿಲಿಯನ್ ಇದೆ. ಭಾರತದ ಒಟ್ಟು ವ್ಯಾಪಾರ ಕೊರತೆಯಲ್ಲಿ ಚೀನಾದ ಪಾಲು ಶೇಕಡಾ 50 ರಷ್ಟಿದೆ. ಚೀನಾದಿಂದ ತಯಾರಿಸಿದ ಸರಕುಗಳು ಹಾಗು ನ್ಯೂಜಿಲೆಂಡಿನ ಡೈರಿ ಉತ್ಪನ್ನಗಳು ಭಾರತದ ಮಾರುಕಟ್ಟೆ ಪ್ರವೇಶ ಮಾಡಿದರೆ ಪರಿಸ್ಥಿತಿ ಮಾರಾಕವಾಗಲಿದೆ ಎನ್ನುವ ಅಳಲು ಭಾರತಕ್ಕಿದೆ. ಈ ಕಾರಣಗಳಿಂದ ನವೆಂಬರ್ 2019 ರಲ್ಲಿ ಬ್ಯಾಂಕಾಕ್ನಲ್ಲಿ ನಡೆದ ಸಭೆಯಲ್ಲಿ ಭಾರತವು ಆರ್ಸಿಇಪಿ ಮಾತುಕತೆಯಿಂದ ಹಿಂದೆ ಸರಿದಿತ್ತು.

ಫೆಬ್ರವರಿ 1, 2020 ರಂದು, ಭಾರತವು ತನ್ನ 2020-21ರ ರಾಷ್ಟ್ರೀಯ ಆಯ-ವ್ಯಯ ಮಂಡನೆಯ ಭಾಗವಾಗಿ ಆಮದು ಸರಕುಗಳ ಮೇಲೆ ಗಮನ ಸೆಳೆಯುವಷ್ಟು ಸುಂಕವನ್ನು ಹೆಚ್ಚಿಸಿದೆ, ಇದು ಪ್ರಧಾನಿ ನರೇಂದ್ರ ಮೋದಿಯವರು “ಮೇಕ್ ಇನ್ ಇಂಡಿಯಾ” ಕಾರ್ಯಕ್ರಮವನ್ನು ಉತ್ತೇಜಿಸಲು ಮಾಡಿದ್ದೆನ್ನುವ ವರದಿಗಳಿವೆ. ಭಾರತ ಘೋಷಿಸಿರುವ ಈ ಸುಂಕ ಹೆಚ್ಚಳವು ಆರ್ಸಿಇಪಿ ದೇಶಗಳಿಗೆ ಭಾರತದೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕಷ್ಟವಾಗುತ್ತದೆ ಎಂದು ಆರ್ಥಿಕ ತಜ್ಞರು ಹೇಳುತ್ತಾರೆ .

ದೇಶದ ವ್ಯಾಪಾರಿಗಳು ಹಾಗೂ ಸ್ಥಳೀಯ ಕೈಗಾರಿಕಾ ಗುಂಪುಗಳ ವಿರೋಧದ ಜೊತೆಗೆ, ಭಾರತೀಯ ನಾಗರಿಕ ಸಮಾಜದಿಂದ, ವಿಶೇಷವಾಗಿ ಮಹಿಳೆಯರು, ಸಣ್ಣ ರೈತರು ಮತ್ತು ಗ್ರಾಮೀಣ ಸಮುದಾಯಗಳಿಂದ ಆರ್ಸಿಇಪಿಗೆ ವ್ಯಾಪಕವಾದ ವಿರೋಧವಿದೆ.

ಇದನ್ನೂ ಓದಿ: ಆರ್‌ಸಿಇಪಿ ಕುರಿತ ಸಮಗ್ರ ಮಾಹಿತಿ ಇಲ್ಲಿದೆ

ಇವರೆಲ್ಲ ಸರಕುಗಳ ಮೇಲಿನ ಸುಂಕದ ಹೊರತಾಗಿ ಎದುರಾಗುವ ಇತರೆ ಸಂಕಷ್ಟಗಳ ಬಗ್ಗೆ ಕಾಳಜಿ ಹೊಂದಿದ್ದಾರೆ. ಬೀಜಗಳು ಮತ್ತು ಸಸ್ಯಗಳ ಪೇಟೆಂಟ್, ಔಷಧಿಗಳ ಮೇಲಿನ ಹೆಚ್ಚಿದ ಏಕಸ್ವಾಮ್ಯ, ಇ-ಕಾಮರ್ಸ್ ಅನಿಯಂತ್ರಣ, ಸಾರ್ವಜನಿಕ ಸೇವೆಗಳ ಖಾಸಗೀಕರಣ ಮತ್ತು ಹೂಡಿಕೆದಾರ-ರಾಜ್ಯ ವಿವಾದ ಇತ್ಯರ್ಥದ ಕುರಿತು ಈಗಾಗಲೇ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಜೀವನಕ್ಕಾಗಿ ಕೃಷಿಯನ್ನು ಅವಲಂಭಿಸಿರುವ ರೈತಾಪಿ ವರ್ಗ ಅತೀವ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

“ಭಾರತವು RCEP ಸದಸ್ಯರಿಂದ ಪತ್ರವೊಂದನ್ನು ಸ್ವೀಕರಿಸಿದ್ದು, ಅದರಲ್ಲಿ ಭಾರತವನ್ನು ಮಾತುಕತೆಗಳಿಗೆ ಮರಳಿ ಸೇರಲು ಕೋರಿದ್ದು ಹಾಗೂ ಈ ಹಿಂದೆ ಉದ್ಬವಿಸಿದ್ದ ಹಲವು ಆತಂಕಗಳನ್ನು ಬಗೆಹರಿಸುವ ಸಲುವಾಗಿ ಕೆಲವು ಷರತ್ತುಗಳಿಗೆ ಬದ್ಧವಾಗಿರುವೆವು ಎಂದು RCEP ಸಧಸ್ಯರು ತಿಳಿಸಿದ್ದಾರೆ. ವಾಣಿಜ್ಯ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯವು ಇದೀಗ, ಪತ್ರವನ್ನು ಪರಿಶೀಲಿಸುತ್ತಿದೆ ಹಾಗೂ ಭಾರತದ ಮುಂದಿನ ಕ್ರಮ ಏನು ಎನ್ನುವುದನ್ನು ಚರ್ಚಿಸುತ್ತಿವೆ ಎಂದು ವಾಣಿಜ್ಯ ಸಚಿವಾಲಯದ ಮೂಲಗಳು ತಿಳಿಸಿವೆ.”

ಆದರೆ ಸದ್ಯಕ್ಕೆ ತಲೆದೋರಿರುವ ಆರ್ಥಿಕ ಸಮಸ್ಯೆಗಳ ಕಾರಣ ಸರಕಾರ ಮಾತುಕತೆಗಳಿಗೆ ಮರಳುವುದಿಲ್ಲ ಎನ್ನುವ ಆಶಯವಿದ್ದು ಈ ನಡುವೆ ಯುಎಸ್ ಜೊತೆಗೆ ಕೂಡ ವ್ಯಾಪಾರ ಮಾತುಕತೆಗಳನ್ನು ಭಾರತ ನಡೆಸುತ್ತಿರುವ ಸುದ್ದಿಗಳಿವೆ.

ಪ್ರಜಾಪ್ರಭುತ್ವ ದೇಶದಲ್ಲಿ ಸರಕಾರ ನೀತಿ-ನಿರ್ಧಾರಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಂಡು ಬರುತ್ತದೆಯೇ ಎಂದು ಕಾದು ನೋಡುವ ಸಮಯ ಇದು, ಭಾರತ ಸರಕಾರ ಆರ್‌ಸಿಇಪಿ ಒಪ್ಪಂದದ ಮಾತುಕತೆಗಳಿಗೆ ಮರಳಿದ್ದೇ ಆದರೆ ಕಳೆದ ನವೆಂಬರಿನಲ್ಲಿ ನಡೆದ ಸಮಗ್ರ ಆರ್ಥಿಕ ಸಹಭಾಗಿತ್ವ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಆಗ್ರಹಿಸಿ ದೇಶಾದ್ಯಂತ ರೈತರು ಬೀದಿಗಿಳಿದು ನಡೆಸಿದ ಹೋರಾಟಗಳು ಮತ್ತೆ ಮರುಕಳಿಸುವುದು ನಿಶ್ಚಿತವಾಗಿದೆ.


ಇದನ್ನೂ ಓದಿ: ಭಾರತದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ RCEP ಪರಿಣಾಮಗಳು – ಡಾ. ಬಿ.ಸಿ.ಬಸವರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...