Homeಕರ್ನಾಟಕಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

ಪರಿಹಾರದ ಹಿಂದಿದೆ ರಾಜಕೀಯ ಲಾಭ; ಅಸಂಘಟಿತ ಕಾರ್ಮಿಕರನ್ನು ಕಡೆಗಣಿಸಿದ ಯಡಿಯೂರಪ್ಪ

- Advertisement -
- Advertisement -

ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಬಡ ಕಾರ್ಮಿಕರನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ ಎಂಬ ಆರೋಪ ಕೇಳಿಬಂದಿದೆ ಬೀದಿಬದಿ ವ್ಯಾಪಾರಿಗಳು, ಹಮಾಲಿ ಕಾರ್ಮಿಕರು, ಬೀಡಿಕಾರ್ಮಿಕರು, ಟೈಲರ್‌ಗಳು ಮತ್ತು ಮನೆಗೆಲಸಗಾರರಿಗೆ ಯಾವುದೇ ಪರಿಹಾರದ ಕ್ರಮಗಳನ್ನು ಕೈಗೊಳ್ಳದಿರುವುದು ಈ ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವರ್ಗವನ್ನೂ ಪರಿಹಾರ ಕ್ರಮಗಳಡಿ ತರಬೇಕಿತ್ತು ಎಂಬ ಒತ್ತಾಯ ವ್ಯಕ್ತವಾಗಿದೆ.

ಕೋವಿಡ್-19 ಲಾಕ್‌ಡೌನ್‌ನಿಂದ ಅಸಂಘಟಿತ ವಲಯದ ಕಾರ್ಮಿಕ ವರ್ಗ ಜರ್ಝರಿತವಾಗಿತ್ತು. ದಿನದ ದುಡಿಮೆಯೇ ಅವರ ಜೀವನಾಧಾರವಾಗಿತ್ತು. ಅಂಥವರ ಬದುಕು ಸಂಕಷ್ಟಕ್ಕೆ ಸಿಲುಕೊಂಡಿದ್ದು ಅವರ ನೆರವಿಗೂ ಸರ್ಕಾರ ಮುಂದಾಗಬೇಕು. ಕೇವಲ ಆಹಾರ ಕಿಟ್ ಗಳನ್ನು ನೀಡಿದರೆ ಸಾಲದು ದಿನನಿತ್ಯದ ಖರ್ಚುವೆಚ್ಚಕ್ಕೆ ಬೇಕಾದ ಕ್ರಮಗಳನ್ನು ಸರ್ಕಾರದಿಂದ ನೀರಿಕ್ಷಿಸಿದ್ದರು. ಹಲವು ಮನವಿಗಳನ್ನು ನೀಡಿದ್ದರು. ಆದರೂ ಸರ್ಕಾರ ಪರಿಹಾರದ ನಿರೀಕ್ಷೆ ಹುಸಿಯಾಗಿದೆ.

ರಾಜ್ಯದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಖ್ಯೆ 20 ಲಕ್ಷ ಇದೆ. ಹಮಾಲಿ ಕಾರ್ಮಿಕರು ಮತ್ತು ಮನೆಗೆಲಸಗಾರರು ತಲಾ 5ಲಕ್ಷ ಇದ್ದಾರೆ. ಟೈಲರ್ ಗಳ ಸಂಖ್ಯೆ 4 ಲಕ್ಷ ಮಂದಿ ಇದ್ದು ಬೀಡಿ ಕಾರ್ಮಿಕರು, ಕೃಷಿಕೂಲಿಕಾರರು ಹೀಗೆ ರಾಜ್ಯದಲ್ಲಿ 2.5 ಕೋಟಿ ಅಸಂಘಟಿತ ಕಾರ್ಮಿಕರಿದ್ದರೂ ಅವರ ಅಂಕಿಸಂಖ್ಯೆ ಸರ್ಕಾರದ ಬಳಿ ಇಲ್ಲ. ಇಂಥ
ಸಂಧರ್ಭದಲ್ಲಿ ಸರ್ಕಾರ ಇವರನ್ನು ನಿರ್ಲಕ್ಷಿಸಿರುವುದು ಸರಿಯಾದ ಕ್ರಮವಲ್ಲ ಎಂದು ಕಾರ್ಮಿಕರ ಮುಖಂಡ ಮಹಾಂತೇಶ್ ಹೇಳುತ್ತಾರೆ.

ಕೊರೊನಾ ಸಂಕಟ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಕೊಡಿಸುವ ಕುರಿತು ಸಭೆಗಳು ಬೆಂಗಳೂರಿನಲ್ಲಿ ನಡೆದಿದೆ. ನಾಳೆ (ಮೇ07) ಸಿಎಂ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪರಿಹಾರ ನೀಡುವ ಬಗ್ಗೆ ಗಮನ ಸೆಳೆಯಲಿದ್ದರು. ಸಿದ್ದರಾಮಯ್ಯ ಭೇಟಿಯಾಗುವ ಮುನ್ನಾದಿನವೇ ಟ್ಯಾಕ್ಸಿ, ನೇಕಾರರು, ಆಟೋ, ಕಟ್ಟಡ, ಮಡಿವಾಳ ಮತ್ತು ಕ್ಷೌರಿಕರಿಗೆ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜಕೀಯ ಲಾಭ ಧಕ್ಕದಿರಲಿ ಎಂಬ ಉದ್ದೇಶ ಇದರಲ್ಲಿ ಅಡಗಿದೆ.

ವಲಸೆ ಕಾರ್ಮಿಕರನ್ನು ಅವರ ಊರಿಗೆ ತಲುಪಿಸುವ ವಿಚಾರದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಂದು ಕೋಟಿ ಘೋಷಿಸದಿದ್ದರೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿರಲಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಕಾರ್ಮಿಕ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ ಮೊದಲು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸ್ವಉದ್ಯೋಗ ಮಾಡುತ್ತಿದ್ದಾರೆ, ಅವರಿಗೆ ಪರಿಹಾರ ನೀಡಲು ಆಗುವುದಿಲ್ಲವೆಂದು ಯಡಿಯೂರಪ್ಪ ಹೇಳಿದ್ದರು ಎನ್ನಲಾಗಿದೆ. ನಂತರ ಓಲಾ ಮತ್ತು ಊಬರ್ ಮಾಲಿಕರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಟ್ಯಾಕ್ಸಿ ಚಾಲಕರಿಗೂ ಕೋವಿಡ್ ಸಂಕಷ್ಟದ ಪರಿಹಾರ ಘೋಷಣೆ ಮಾಡಿದೆ.

ಹೂವಿನ ಬೆಳೆಗಾರರು, ಆಟೋ, ಕ್ಷೌರಿಕರು, ಮಡಿವಾಳರಿಗೆ ಸಣ್ಣ ಪ್ರಮಾಣದ ಪರಿಹಾರ ನೀಡುತ್ತಿರುವುದು ಶ್ಲಾಘನೀಯ. ಇವರಂತೆಯೇ ಕಷ್ಟದ ಜೀವನ ನಡೆಸುತ್ತಿರುವ ಬೀಡಿ, ಟೈಲರ್, ಬೀದಿಬದಿ ವ್ಯಾಪಾರಿಗಳು, ಮನೆಗೆಲಸಗಾರರು, ಹಮಾಲಿ ಕಾರ್ಮಿಕರನ್ನು ಒಳಗೊಂಡಂತೆ ಪರಿಹಾರ ಘೋಷಣೆ ಮಾಡಿದ್ದರೆ ಒಳ್ಳೆಯದಿತ್ತು ಎಂದು ಕಾರ್ಮಿಕ ಮುಖಂಡರ ಆಗ್ರಹ.

ಈ ವರ್ಗದಲ್ಲಿ ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನೊಗ ಹೊತ್ತವರು ಹೆಚ್ಚಾಗಿದ್ದು ಸರ್ಕಾರ ಇವರ ನೆರವಿಗೂ ಬರಬೇಕಾಗಿದೆ.


ಇದನ್ನೂ ಓದಿ: 900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...