Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...