Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉತ್ತಮ ಉದಾಹರಣೆ” ಎಂದು ವಿಕಾಸ್‌ ಭಾಟಿಯಾ ಎಂಬುವವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಇದೇ ರೀತಿಯ ನೂರಾರು ಸಂದೇಶಗಳು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿವೆ. ಮಾಸ್ಕ್‌ ಧರಿಸಿರುವ ಯುವತಿಯೊಬ್ಬಳು ಕೈಯಲ್ಲಿ ಕೆಲ ವಸ್ತುಗಳನ್ನು ಹಿಡಿದು ಅಂಗಡಿಯಿಂದ ಹೊರಬರುತ್ತಿರುವ ವಿಡಿಯೋವನ್ನು ಅದರ ಜೊತೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

Deepika Padukone buying liquor in Mumbai….. Best social distancing example…… No servants……… No drivers

Posted by Vikas Bhatia on Wednesday, May 6, 2020

ಫ್ಯಾಕ್ಟ್‌ಚೆಕ್‌

ಆ ವಿಡಿಯೋದಲ್ಲಿರುವವರು ನಟಿ ರಕುಲ್‌ ಪ್ರೀತ್‌ ಸಿಂಗ್‌ ಆಗಿದ್ದಾರೆ. ಜೊತಗೆ ಕೈಯಲ್ಲಿರುವು ಮದ್ಯ ಅಲ್ಲ ಬದಲಿಗೆ ಔಷಧಿಗಳಾಗಿವೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಕೆಲವು ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ವಿಡಿಯೋವನ್ನೇ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವುದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಅಲ್ಲದೇ ಮೇ 04 ರಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ಅಲ್ಲಿನ ಸರ್ಕಾರ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಮೇ 06ರಂದು ಮದ್ಯ ಮಾರಾಟವನ್ನು ಮತ್ತೆ ನಿಷೇಧಿಸಿದೆ.

ಬಾಲಿವುಡ್‌ನ ಛಾಯಾಗ್ರಾಹಕ ವೈರಲ್ ಭಯಾನಿ ಅವರ ತಂಡವು ಸೆರೆಹಿಡಿದ ವೀಡಿಯೊ ಅದಾಗಿದ್ದು, ನಟಿ ರಕುಲ್‌ ಪ್ರೀತ್‌ ಸಿಂಗ್ ಮೇ 05 ರ ಸಂಜೆ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ತೆಗೆದ ವಿಡಿಯೋ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ ಭಯಾನಿಯವರ ಟಿಕ್‌ಟಾಕ್‌ ಅಕೌಂಟ್‌ನಲ್ಲಿ ಆ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ.

ಇನ್ನು ಕೆಆರ್‌ಕೆ ಅಫಿಷಿಯಲ್‌ ಎನ್ನುವ ಟ್ವಿಟ್ಟರ್‌ ಅಕೌಂಟ್‌ನಿಂದ “ರಕುಲ್‌ ಪ್ರೀತ್‌ ಸಿಂಗ್ ರವರು ಲಾಕ್‌ಡೌನ್‌ ಸಮಯದಲ್ಲಿ ಏನನ್ನು ಖರೀದಿಸುತ್ತಿದ್ದಾರೆ? ಆಲ್ಕೊಹಾಲ್‌ ಖರೀದಿಸಿದ್ದಾರೆಯೇ?” ಎಂದು ಪ್ರಶ್ನಿಸಿದೆ. ಇದಕ್ಕೆ ರೀಟ್ವೀಟ್‌ ಮೂಲಕ ಉತ್ತರಿಸಿರುವ ರಕುಲ್‌ ಪ್ರೀತ್‌ ಸಿಂಗ್ ” ವಾವ್‌! ಮೆಡಿಕಲ್‌ನಲ್ಲಿ ಮದ್ಯ ಮಾರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು ಟಾಂಗ್‌ ಕೊಟ್ಟಿದ್ದಾರೆ.

ಮತ್ತೊಬ್ಬರು ಈ ವಿಷಯವಾಗಿ ಪ್ರತಿಕ್ರಿಯಿಸಿ ಅದು ರಕುಲ್‌ ಪ್ರೀತ್‌ ಸಿಂಗ್ ಇರಲಿ ಅಥವಾ ದೀಪಿಕಾ ಪಡುಕೋಣೆಯೇ ಆಗಿರಲಿ ಮದ್ಯ ಖರೀದಿಸಿದರೆ ನಿಮಗೇನು ತೊಂದರೆ? ಮದ್ಯ ಖರೀದಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎಂಜೆ ಎನ್ನುವವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಾಂದ್ರಾ ಪಾಲಿ ಹಿಲ್‌ನಲ್ಲಿರುವ ಮಾಡ್ರನ್‌ ಮೆಡಿಕಲ್‌ ಶಾಪ್‌ ತನ್ನ ಅಂಗಡಿಯ ಚಿತ್ರಗಳನ್ನು ಗೂಗಲ್‌ನಲ್ಲಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿದೆ. ಅವುಗಳನ್ನು ಮತ್ತು ವಿಡಿಯೋದಲ್ಲಿರುವ ಚಿತ್ರಗಳನ್ನು ಹೋಲಿಕೆ ಮಾಡಿದ್ದಲ್ಲಿ ಪೂರ್ಣ ಸಾಮ್ಯತೆ ಕಂಡುಬಂದಿದ್ದು ಅದು ಮದ್ಯದಂಗಡಿಯಲ್ಲ, ಮೆಡಿಕಲ್‌ ಎಂಬುದು ಸಾಬೀತಾಗಿದೆ. ಆದರೆ ಕೆಲವರು ದೀಪಿಕಾ ಮದ್ಯ ಖರೀದಿಸಿದ್ದು ಎಂದು ಸುಳ್ಳು ಸಂದೇಶವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...