Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉತ್ತಮ ಉದಾಹರಣೆ” ಎಂದು ವಿಕಾಸ್‌ ಭಾಟಿಯಾ ಎಂಬುವವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಇದೇ ರೀತಿಯ ನೂರಾರು ಸಂದೇಶಗಳು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿವೆ. ಮಾಸ್ಕ್‌ ಧರಿಸಿರುವ ಯುವತಿಯೊಬ್ಬಳು ಕೈಯಲ್ಲಿ ಕೆಲ ವಸ್ತುಗಳನ್ನು ಹಿಡಿದು ಅಂಗಡಿಯಿಂದ ಹೊರಬರುತ್ತಿರುವ ವಿಡಿಯೋವನ್ನು ಅದರ ಜೊತೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

Deepika Padukone buying liquor in Mumbai….. Best social distancing example…… No servants……… No drivers

Posted by Vikas Bhatia on Wednesday, May 6, 2020

ಫ್ಯಾಕ್ಟ್‌ಚೆಕ್‌

ಆ ವಿಡಿಯೋದಲ್ಲಿರುವವರು ನಟಿ ರಕುಲ್‌ ಪ್ರೀತ್‌ ಸಿಂಗ್‌ ಆಗಿದ್ದಾರೆ. ಜೊತಗೆ ಕೈಯಲ್ಲಿರುವು ಮದ್ಯ ಅಲ್ಲ ಬದಲಿಗೆ ಔಷಧಿಗಳಾಗಿವೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಕೆಲವು ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ವಿಡಿಯೋವನ್ನೇ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವುದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಅಲ್ಲದೇ ಮೇ 04 ರಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ಅಲ್ಲಿನ ಸರ್ಕಾರ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಮೇ 06ರಂದು ಮದ್ಯ ಮಾರಾಟವನ್ನು ಮತ್ತೆ ನಿಷೇಧಿಸಿದೆ.

ಬಾಲಿವುಡ್‌ನ ಛಾಯಾಗ್ರಾಹಕ ವೈರಲ್ ಭಯಾನಿ ಅವರ ತಂಡವು ಸೆರೆಹಿಡಿದ ವೀಡಿಯೊ ಅದಾಗಿದ್ದು, ನಟಿ ರಕುಲ್‌ ಪ್ರೀತ್‌ ಸಿಂಗ್ ಮೇ 05 ರ ಸಂಜೆ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ತೆಗೆದ ವಿಡಿಯೋ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ ಭಯಾನಿಯವರ ಟಿಕ್‌ಟಾಕ್‌ ಅಕೌಂಟ್‌ನಲ್ಲಿ ಆ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ.

ಇನ್ನು ಕೆಆರ್‌ಕೆ ಅಫಿಷಿಯಲ್‌ ಎನ್ನುವ ಟ್ವಿಟ್ಟರ್‌ ಅಕೌಂಟ್‌ನಿಂದ “ರಕುಲ್‌ ಪ್ರೀತ್‌ ಸಿಂಗ್ ರವರು ಲಾಕ್‌ಡೌನ್‌ ಸಮಯದಲ್ಲಿ ಏನನ್ನು ಖರೀದಿಸುತ್ತಿದ್ದಾರೆ? ಆಲ್ಕೊಹಾಲ್‌ ಖರೀದಿಸಿದ್ದಾರೆಯೇ?” ಎಂದು ಪ್ರಶ್ನಿಸಿದೆ. ಇದಕ್ಕೆ ರೀಟ್ವೀಟ್‌ ಮೂಲಕ ಉತ್ತರಿಸಿರುವ ರಕುಲ್‌ ಪ್ರೀತ್‌ ಸಿಂಗ್ ” ವಾವ್‌! ಮೆಡಿಕಲ್‌ನಲ್ಲಿ ಮದ್ಯ ಮಾರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು ಟಾಂಗ್‌ ಕೊಟ್ಟಿದ್ದಾರೆ.

ಮತ್ತೊಬ್ಬರು ಈ ವಿಷಯವಾಗಿ ಪ್ರತಿಕ್ರಿಯಿಸಿ ಅದು ರಕುಲ್‌ ಪ್ರೀತ್‌ ಸಿಂಗ್ ಇರಲಿ ಅಥವಾ ದೀಪಿಕಾ ಪಡುಕೋಣೆಯೇ ಆಗಿರಲಿ ಮದ್ಯ ಖರೀದಿಸಿದರೆ ನಿಮಗೇನು ತೊಂದರೆ? ಮದ್ಯ ಖರೀದಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎಂಜೆ ಎನ್ನುವವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಾಂದ್ರಾ ಪಾಲಿ ಹಿಲ್‌ನಲ್ಲಿರುವ ಮಾಡ್ರನ್‌ ಮೆಡಿಕಲ್‌ ಶಾಪ್‌ ತನ್ನ ಅಂಗಡಿಯ ಚಿತ್ರಗಳನ್ನು ಗೂಗಲ್‌ನಲ್ಲಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿದೆ. ಅವುಗಳನ್ನು ಮತ್ತು ವಿಡಿಯೋದಲ್ಲಿರುವ ಚಿತ್ರಗಳನ್ನು ಹೋಲಿಕೆ ಮಾಡಿದ್ದಲ್ಲಿ ಪೂರ್ಣ ಸಾಮ್ಯತೆ ಕಂಡುಬಂದಿದ್ದು ಅದು ಮದ್ಯದಂಗಡಿಯಲ್ಲ, ಮೆಡಿಕಲ್‌ ಎಂಬುದು ಸಾಬೀತಾಗಿದೆ. ಆದರೆ ಕೆಲವರು ದೀಪಿಕಾ ಮದ್ಯ ಖರೀದಿಸಿದ್ದು ಎಂದು ಸುಳ್ಳು ಸಂದೇಶವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...