Homeಮುಖಪುಟನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

ನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಇಂದು ಮುಂಜಾನೆ 16 ವಲಸೆ ಕಾರ್ಮಿಕರ ಮೇಲೆ ಸರಕು ರೈಲು ಚಲಿಸಿ ಮೃತಪಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ “ನನ್ನ ಕಾರ್ಮಿಕ ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 16 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಸರಕುಗಳ ರೈಲು ಚಲಿಸಿ ನನ್ನ ಕಾರ್ಮಿಕರು ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ನಮ್ಮ ರಾಷ್ಟ್ರ ನಿರ್ಮಾಣಕಾರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕು. ಸಾವಿಗೀಡಾದವರ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಗಾಯಗೊಂಡವರು ಬೇಗನೆ ಚೇತರಿಕೆಯಾಗಲಿ ಎಂಬ ಪ್ರಾರ್ಥನೆ” ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರ ಸಾವಿನಿಂದ ತೀವ್ರ ದುಃಖಿತರಾಗಿದ್ದರು ಮತ್ತು ಅವರ ಕುಟುಂಬಗಳಿಗೆ “ಸಾಧ್ಯವಿರುವ ಎಲ್ಲ ಬೆಂಬಲ” ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

“ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದಾದ ಪ್ರಾಣಹಾನಿಗೆ ತೀವ್ರ ದುಃಖಿತನಾಗಿದ್ದೇನೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಾರ್ಚ್ 24 ರಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸಿಗ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರು ಲಾಕ್ ಡೌನ್ ನಂತರ ತಮ್ಮ ಊರಿಗೆ ನಡೆಯುತ್ತಾ ಹೋಗುತ್ತಿರುವ ಮನಕಲುಕುವ ಘಟನೆ ದೇಶದಾದ್ಯಂತ ವರದಿಯಾಗುತ್ತಿದೆ. ಈ ಮಹಾ ನಡಿಗೆಯಲ್ಲಿ ಹಲವಾರು ಜನರು ಈ ವರೆಗೆ ಸಾವನ್ನಪ್ಪಿದ್ದಾರೆ.

ಕಳೆದ ವಾರ ಕೇಂದ್ರದ ಆಡಳಿತ ಬಿಜೆಪಿ ಪಕ್ಷಕ್ಕೆ ರಾಜಕೀಯ ಹಿನ್ನಡೆಯಾಗುತ್ತದೆ ಎಂಬ ಬಗ್ಗೆ ಪಕ್ಷದೊಳಗೆ ಮನವರಿಕೆ ಮಾಡಿದ ನಂತರ, ವಲಸಿಗರು ಮನೆಗೆ ಹಿಂತಿರುಗಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರವು ರೈಲ್ವೆಗೆ ಅನುಮತಿ ನೀಡಿತ್ತು. ಇದರ ಹೊರತಾಗಿಯೂ, ಹಲವಾರು ವಲಸಿಗರು ತಮ್ಮ ತವರು ರಾಜ್ಯಕ್ಕೆ ನಡೆಯುತ್ತಾ ಹೋಗುವುದನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ


ವಿಡಿಯೊ ನೋಡಿ: ಮರೆಯಲೇ ಭಾರದ ಸುದ್ದಿಗಳಿವು. ಸದ್ದು…ಈ ಸುದ್ದಿಗಳೇನಾಗಿದೆ (ನಾಲ್ಕನೇ ಸಂಚಿಕೆ)

ಸದ್ದು… ಈ ಸುದ್ದಿಗಳೇನಾದವು? – 4

ನಾವು ಕೆಲವು ಸುದ್ದಿಗಳನ್ನು ಮರೆತುಬಿಡಬೇಕೆಂದು ಬಯಸುವವರು, ಹೊಸ ಸುದ್ದಿಗಳ ರಾಶಿ ಹಾಕುತ್ತಾರೆ. ಆದರೆ, ಇಂದು ನಾವು ಕಾಣುತ್ತಿರುವ ಸಮಸ್ಯೆಗಳ ಕಾರಣ ಹಿಂದಿನ ಘಟನೆಗಳಲ್ಲಿ ಇರುತ್ತದೆ. ಹಿಂದೆ ನಡೆದ ʼಬೃಹತ್ʼ ಹಗರಣ, ಅದರ ನಂತರ ನಡೆದ ಇನ್ನೊಂದು ಭೀಕರ ಘಟನೆಯ ಕಾರಣದಿಂದ ಮರೆಯಾಗುತ್ತದೆ. ಹಾಗಾಗಿ ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅಗತ್ಯವಿದ್ದೇ ಇದೆ.ಅಂತಹ ವಿಶಿಷ್ಟ ಕಾರ್ಯಕ್ರಮದ ನಾಲ್ಕನೇ ಕಂತು ಇಲ್ಲಿದೆ ನೋಡಿ.

Posted by Naanu Gauri on Wednesday, May 6, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...