Homeಮುಖಪುಟಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು!

ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ.

- Advertisement -
- Advertisement -

ಕೊರೋನಾ ಪುರಾಣ, ವರ್ಣಕಾರಣ ಕಾಂಡ

ನಾವು ಸಣ್ಣವರಿದ್ದಾಗ ಭಾರತದ ಸ್ವರೂಪದ ಬಗ್ಗೆ ಒಂದು ಹಾಡು ಹೇಳತಿದ್ದೆವಿ- ಕೇಸರಿ -ಬಿಳಿ – ಹಸಿರು ಬಣ್ಣ ನಡುವೆ ಚಕ್ರವು ಅಂತ ಅದರಾಗ ಒಂದು ಸಾಲು ಇತ್ತು.

ಈ ಬಣ್ಣಗಳ ನಡುವೆ ರಾಜಕೀಯ ಹುಟ್ಟತದ ಅಂತ ನಮಗ ಗೊತ್ತಿರಲಿಲ್ಲ. ಇದರ ಬಗ್ಗೆ ಸ್ವಲ್ಪ ತಿಳಕೊಳ್ಳೋಣ.

ಮೊಟ್ಟ ಮೊದಲಿಗೆ, ಅಂದರ ಲಕ್ಷಾಂತರ ಮಂದಿಗೆ ಕೊರೋನಾ ಬಂದು, ಸಾವಿರಾರು ಜನ ಸತ್ತ ಮ್ಯಾಲೆ, ಭಾರತ ಸರಕಾರದ ಕಣ್ಣು ತೆರದು ಲಾಕಡೌನು (ಕೀಲಿ ಕಿಟಕ್) ಘೋಷಿಸಿತು. ಆಮ್ಯಾಲೆ ದೇಶದ 700 ಜಿಲ್ಲೆಗಳನ್ನ ಕೆಂಪು, ಕಿತ್ತಳೆ ಹಾಗೂ ಹಸಿರು ಅಂತ ಹೇಳಿ ವಿಭಜನೆ ಮಾಡಿತು.

ಅದರ ಹಿಂದಿನ ಕಾರಣ ಅಂದರೆ 1. ಯಾವುದೇ ಜಿಲ್ಲೆಯೊಳಗ ಒಂದು ಕೊರೊನಾ ಪ್ರಕರಣ ಇದ್ದರೂ ಅದು ಕೆಂಪು. 2. ಯಾವುದೇ ಪ್ರಕರಣ ಇರದಿದ್ದರ ಅದು ಹಸಿರು ಹಾಗೂ 3. ಕಳೆದ 14 ದಿನದಲ್ಲಿ ಒಂದೂ ಹೊಸ ಪ್ರಕರಣ ಇರಲಿಲ್ಲ ಅಂದರ ಅದು ಕಿತ್ತಳೆ.

ಕೆಂಪು ಜಿಲ್ಲೆಯೊಳಗ ಯಾವುದೇ ಆರ್ಥಿಕ ಚಟುವಟಿಕೆ ಇಲ್ಲ, ಓಡಾಟ ಇಲ್ಲ. ಕಿತ್ತಳೆಯೊಳಗ ಬಹಳ ಮಟ್ಟಿಗೆ ಪ್ರತಿಬಂಧ ಹಾಗೂ ಹಸಿರಿನೊಳಗ ಎಲ್ಲ ರೀತಿಯ ಚಟುವಟಿಕೆ ಹಾಗೂ ಓಡಾಟ ಮುಕ್ತ.

ಆದರ ಸಮಸ್ಯಾ ಏನಪಾ ಅಂದರ ಎಂದಿನಂತೆ ಕೇಂದ್ರ ಸರಕಾರ ಕೀಲಿ ಕಿಟಕ್ ಆಗಲಿ, ಇತರ ಪರಿಹಾರ ಕ್ರಮಗಳನ್ನಾಗಲೀ ಸಾರಾಸಾರ ವಿಚಾರ ಮಾಡಿ ಮಾಡಿರಲಿಲ್ಲ.

ಇದರಿಂದ ದೊಡ್ಡ ಆಭಾಸ ಆತು. ಒಂದು ಸಾವಿರ ಕೇಸು ಇರೋ ಮುಂಬೈ ಕಿತ್ತಳೆ ವಲಯದಾಗ ಬಂದು, ಕರ್ನಾಟದ 14 ಜಿಲ್ಲೆ ಗಳು ಕೆಂಪು ವಲಯದಾಗ ಬಂದವು.

ಕೇಂದ್ರದ ಆಳುವ ಪಕ್ಷಕ್ಕೆ ಅತಿ ಹೆಚ್ಚು ದೇಣಿಗೆ ಕೊಟ್ಟ ಖಾಸಗಿ ಕಂಪನಿಗಳು ಸರಕಾರದ ಮೇಲೆ ಒತ್ತಡ ಹಾಕಿದರು. ಮುಂಬೈ- ಅಹಮದಾಬಾದು- ಸುರತ ಮುಂತಾದ ಕಡೆ ಕಾರಖಾನೆ- ಅಂಗಡಿ ತೆಗೆಯಬಹುದಾದರೆ ನಮ್ಮಲ್ಲೆ ಯಾಕೆ ಬೇಡ ಅಂತ ತಕರಾರು ಮಾಡಿದರು. ಅವರು ತಮ್ಮ ತಮ್ಮ ನೌಕರರಿಗೆ ಸಂಬಳ ಕೊಟ್ಟಿದ್ದರೋ ಇಲ್ಲೋ, ಆದರೆ ಪಿಎಂ ಕೇರ್ಸ ಅನ್ನೋ ಹುಂಡಿಗೆ ರೊಕ್ಕ ಹಾಕಿ ಭಕ್ತಿಯಿಂದ ಕೈ ಮುಗದಿದ್ದರು.

ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದ್ದಕ್ಕ ಜನರಿಗೆ ತೊಂದರೆ ಆಗಿತ್ತು. ಸರಕಾರಕ್ಕೆ ತೆರಿಗೆ ಸಿಗಲಾರದ ಹಂಗ ಆಗಿತ್ತು. ಸರಕಾರಿ ನೌಕರರಿಗೆ ಸಂಬಳ ತಡಾ ಆಗಲಿಕ್ಕೆ ಸುರು ಆಗಿತ್ತು. ವಿಶ್ವಬ್ಯಾಂಕು, ಮೋಡಿ, ಮತ್ತು ಇತರ ಸಂಸ್ಥೆಗಳು ಭಾರತದ ನಿವ್ವಳ ಉತ್ಪನ್ನ ಶೇಕಡಾ 1-2 ರ ಒಳಗೆ ಇಳಿಯಲಿದೆ ಅಂತ ಭವಿಷ್ಯ ಹೇಳಲಿಕ್ಕೆ ಸುರು ಮಾಡಿದರು.

ಅಷ್ಟರೊಳಗೆ ಪಂತ ಪ್ರಧಾನ ನಮೋ ಅವರು ಮೂರನೇ ಕೀಲಿ ಕಿಟಕ್ ಘೋಷಣೆ ಮಾಡಿದ್ದರು. ಇನ್ನು ಅದನ್ನು ಹೆಂಗ ಸರಿ ಮಾಡಬೇಕು ಅಂತ ಯಾರಿಗೂ ಗೊತ್ತಿರಲಿಲ್ಲ.

ಎಪ್ರಿಲ 30 ರಂದು ಕೇಂದ್ರದ ಕೆಲವು ಅಧಿಕಾರಿಗಳು ಒಂದು ಸಭೆ ನಡೆಸಿದರು. ಅದರಾಗ ಈ ಹಿಂದೆ ಮಾಡಿದ ಕಲರ ಕೋಡಿಂಗ (ವರ್ಣಾಧಾರಿತ ವಿಭಜನೆ) ಸರಿ ಇಲ್ಲ. ಅದನ್ನ ಬದಲಾಯಿಸಬೇಕು. ಬರೇ ಪ್ರಕರಣ ಪತ್ತೆ ಆಗೋದು ಮುಖ್ಯ ಅಲ್ಲ. ಅದರ ಸಂಖ್ಯೆ ಎಷ್ಟು ದಿನದೊಳಗ ದುಪ್ಪಟ್ಟು ಆಗತಾವು, ಎಷ್ಟು ಜನ ಗುಣ ಆಗಿದ್ದಾರ, ರಾಜ್ಯ ಹಾಗೂ ಜಿಲ್ಲೆ ಆಡಳಿತ ಎಷ್ಟರ ಮಟ್ಟಿಗೆ ತಯಾರು ಆಗಿದಾರು ಮುಂತಾದ ವಿಷಯಗಳನ್ನ ಆಧರಿಸಿ ಕೆಂಪು ನಿರ್ಧರಿಸೋಣ. ಕಳೆದ 21 ದಿನದೊಳಗ ಪ್ರಕರಣ ಇಲ್ಲಾ ಅಂದರ ಅದು ಹಸಿರು ಅಂತ ಅನ್ನೋಣ. ಇವು ಎರಡೂ ಇಲ್ಲದವು ಕಿತ್ತಳೆ ಜಿಲ್ಲೆಗಳು ಅಂತ ಆಗಲಿ ಅಂತ ಹೇಳಿದರು.

ರಾಜ್ಯ ಸರಕಾರಗಳು ಕೆಂಪು- ಕಿತ್ತಳೆ ಇದ್ದದ್ದನ್ನು ಹಸಿರು ಮಾಡಬಹುದು. ಆದರೆ ಉಲ್ಟಾ ಮಾಡಲು ಬರೋದಿಲ್ಲ. ಪಟ್ಟಿ ಬದಲಾವಣೆ ಮಾಡೋದಾದರ ನಾವು ಮಾಡತೇವಿ ಅಂದರು. ಕರ್ನಾಟಕದಲ್ಲಿ ಇದ್ದ 14 ಕೆಂಪು ಜಿಲ್ಲೆಗಳ ಸಂಖ್ಯೆ ಮೂರಕ್ಕೆ ಇಳಿಯಿತು.

ಹಿಂಗಾಗಿ ಮೂರನೇ ಹಂತದ ಲಾಕ್ ಡೌನ ಇದ್ದರೂ ಕೂಡ ಕಾರ್ಖಾನೆ- ಅಂಗಡಿ ತೆರೆಯಲಾಯಿತು. ಅತಿ ಕಮ್ಮಿ ಪ್ರಕರಣ ಇದ್ದಾಗ ಬಂದು ಮಾಡಿದ ಅಂಗಡಿಗಳು ಅತಿ ಹೆಚ್ಚು ಪ್ರಕರಣಗಳು ದಾಖಲಾದ ಮೇಲೆ ತೆರೆದುಕೊಂಡವು. ಇದೇ ನಿರ್ಧಾರ ತೊಗೊಳ್ಳೋದು ಆಗಿದ್ದರ ಇಷ್ಟೆಲ್ಲಾ ಸರ್ಕಸ್ಸು ಯಾಕ ಮಾಡಬೇಕಾಗಿತ್ತು. ಮೊದಲನೇ ದಿವಸವೇ ಈ ನಿರ್ಧಾರ ತೊಗೊಂಡಿದ್ದರ ಅಷ್ಟೊಂದು ಆರ್ಥಿಕ ಹಿನ್ನಡೆ ಆಗತಿರಲಿಲ್ಲ.

ಈ ಬಣ್ಣಗಳ ರಾಜಕಾರಣಕ್ಕೆ ವರ್ಣಕಾರಣ ಅನ್ನಬಹುದು. ಯಾಕ ಹಿಂಗಂದರ, ಸರಕಾರದ ನಿರ್ಧಾರಗಳು ವಿಜ್ಞಾನಿಗಳ ಮಾತು ಕೇಳಿ ನಡೆಯುತ್ತಿಲ್ಲ. ಅವು ಕೆಲವು ಐಎಎಸ್ಸು ಅಧಿಕಾರಿಗಳು ಹಾಗೂ ಕೆಲವೇ ಕೆಲವು ರಾಜಕಾರಣಿಗಳ ಮನಸೋಇಚ್ಛಿ ನಿರ್ಧಾರಗಳು. ಇವುಗಳಿಂದ ಯಾರಿಗೂ ಸ್ಪಷ್ಟತೆ ಇಲ್ಲ. ಯಾರಿಗೂ ಇವು ಸರಿಯಾಗಿ ಅರ್ಥವಾಗಿಲ್ಲ. ಇವುಗಳ ಬಗ್ಗೆ ಯಾರೂ ವೈಯಕ್ತಿಯ ಜವಾಬುದಾರಿ ತೊಗೊಳ್ಳೋದಿಲ್ಲ. ಸಧ್ಯಕ್ಕಂತೂ ಈ ಮುಖ ಇಲ್ಲದ ನಿರ್ಧಾರಗಳಿಂದ ನಮಗ ಮುಕ್ತಿ ಇಲ್ಲವೇನೋ.

ದೂರದರ್ಶಿ ಸಾಹಿತಿ ಭವಿಷ್ಯದಲ್ಲಿ ನಡಿಯೋದನ್ನು ಇಂದೇ ನಡೆದಂತೆ ಚಿತ್ರಿಸಿದ ಜಾರ್ಜ್ ಆರ್ವೆಲ್ ಅವರ ಅತಿ ಜನಪ್ರಿಯ ಕಾದಂಬರಿಯ ಹೆಸರು ʻ1984ʼ. ಅದರೊಳಗೆ ಕೆಲವು ಜನ ತಮ್ಮ ದೇಶದ ಜನರನ್ನ ಕತ್ತಲೆಯೊಳಗೆ ಇಟ್ಟು ಸರಕಾರ ನಡೆಸತಾರ. ಕಾಲ್ಪನಿಕ ʻಹಿರಿಯ ಅಣ್ಣʼನ ಹೆದರಿಕೆಯಿಂದ ಜನರ ಮೇಲೆ ದಬ್ಬಾಳಿಕೆ ನಡಸತಾರ.

ಅದೇ ಲೇಖಕನ ಇನ್ನೊಂದು ಕಾದಂಬರಿ ʻಎನಿಮಲ್ ಫಾರ್ಮʼ.

ರೈತನೊಬ್ಬನ ಮನೆಯ ಹಿತ್ತಲದಲ್ಲಿ ನಡೆಯುವ ಕತೆ ಇದು. ಬರೀ ತಿಂದುಂಡು ಹಾಯಾಗಿ ಮಲಗುವ ಚಾಲಾಕಿ ಹಂದಿಗಳು ಸರಕಾರ ರಚಿಸಿ ತಾವೇ ರಾಜರಾಗಿ ಬಿಡತಾರ. ರೈತನ ಹೊಲದಲ್ಲಿ ಕಷ್ಟಪಟ್ಟು ದುಡಿಯುವ ಕುದುರೆಗಳನ್ನು ಕಾರ್ಮಿಕರನ್ನಾಗಿ ಮಾಡಿಕೊಳ್ಳತಾವು. ಆ ತೋಟದ ಮನೆಯಲ್ಲಿ ಒಂದು ಫಲಕ ಇರತೈತಿ. ಅದರ ಮೇಲೆ ಇವತ್ತಿನ ನೀತಿ- ನಿಯಮಗಳು ಅಂತ ಬರದಿರತಾವು. ಅದನ್ನ ಯಾರು ಬರದಿತಾರ ಅಂತ ಯಾರಿಗೂ ಗೊತ್ತಿರೋದಿಲ್ಲ. ಅದರಾಗ ಒಂದು – ಎರಡು ಅಂತ ಹೇಳಿ ನಿಯಮಗಳ ಪಟ್ಟಿನ ಇರತೈತಿ. ಅವನ್ನ ಎಲ್ಲ ಪ್ರಾಣಿಗಳು ಭಕ್ತಿಯಿಂದ ಪಾಲಿಸತಿರತಾವು.

ಆದರ ಅವರ ಮೇಲೆ ದ್ವೇಷ ಸಾಧಿಸೋ ದೃಷ್ಟಿಯಿಂದ ಆ ಹಂದಿಗಳು ಒಂದು ಸಂಚು ರೂಪಿಸತಾವು. ರಾತ್ರಿ ಎಲ್ಲರೂ ಮಲಗಿದಾಗ ಎದ್ದು ಬಂದು ಆ ಪಟ್ಟಿಯ ಕೊನೆಯ ನಿಯಮಗಳನ್ನ ಅಳಿಸಿ ಸಂಪೂರ್ಣ ತದ್ವಿರುದ್ಧ ವಾದ ನಿಯಮಗಳನ್ನ ಬರದು ಬಿಡತಾವು. ಮರು ದಿನ ಬೆಳಿಗ್ಗೆ ಎದ್ದು ನಿನ್ನೆ ಎಲ್ಲರೂ ನಿಯಮ ಉಲ್ಲಂಘಿಸಿದ್ದೀರಿ ಅಂತ ಹೇಳಿ ಶಿಕ್ಷೆ ಕೊಡತಾವು. ಉಳಿದ ಪ್ರಾಣಿಗಳು ʻಇಲ್ಲ. ನಾವು ಇದರಲ್ಲಿ ಬರೆದ ನಿಯಮಗಳನ್ನೇ ಪಾಲನೆ ಮಾಡಿದ್ದೇವೆʼ ಅಂತ ತಿರುಗಿ ವಾದ ಮಾಡಿದರೆ, ಎಲ್ಲಿದೆ ನೋಡಿ? ಇಲ್ಲಿರುವ ನಿಯಮವೇ ಬೇರೆ, ನೀವು ಮಾಡಿದ್ದೇ ಬೇರೆ ಅಂತ ಅವರನ್ನು ಹೆದರಿಸುತ್ತವೆʼ.

ಕೊನೆಗೂ ಇವತ್ತಿನ ನಿಯಮ ಏನು? ನಿನ್ನೆಯದು ಏನು? ನಾಳೆಯದು ಏನು ಅಂತ ಯಾರಿಗೂ ಸರಿಯಾಗಿ ಗೊತ್ತೇ ಆಗೋದಿಲ್ಲ. ಆ ಸಂಶಯ, ಅಸ್ಪಷ್ಟತೆ, ಸಂದೇಹ, ಅಪಾರದರ್ಶಕತೆಗಳ ವಾತಾವರಣದಲ್ಲಿಯೇ ಜೀವನ ಮುಂದುವರೆಯುತ್ತದೆ. ನಿಯಮ ಪಾಲಿಸುವರಿಗೂ, ಆರಕ್ಷಕರಿಗೂ, ನಿಯಮ ಮುರಿಯುವವರಿಗೂ, ಜನಸಾಮಾನ್ಯರಿಗೂ ಎಲ್ಲರಿಗೂ ಭಯದ ವಾತಾವರಣ ಇರುತ್ತದೆ.

ಇವತ್ತಿನ ಆಗುಹೋಗುಗಳು ನಮಗ ಎನಿಮಲ್ ಫಾರ್ಮಿನ ನೆನಪು ಮಾಡಿಕೊಡತಾವು. ಅಚ್ಛೇ ದಿನ್ ಹೋಗಲಿ, ಬೊಹುತ ಬೂರೆ ದಿನ ಆನೆವಾಲೆ ಹೈಂ ಅಂತ ಅನ್ನಿಸತೈತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...