Homeಮುಖಪುಟಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

ಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

- Advertisement -
- Advertisement -

ಸಾರ್ವಜನಿಕ ಮತ್ತು ಖಾಸಗಿ ಉದ್ಯೋಗಿಗಳಿಗೆ ‘ಆರೋಗ್ಯ ಸೇತು’ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಆರೋಗ್ಯ ಸೇತು ಆ್ಯಪ್ ಸುರಕ್ಷಿತವಲ್ಲ ಮತ್ತು ಖಾಸಗಿ ಮಾಹಿತಿಗಳ ಸೋರಿಕೆ ಹೆಚ್ಚು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮೇ 04 ರಿಂದ ದೇಶದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ನೌಕರರು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದಕ್ಕೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಪಸ್ವರ ಎತ್ತಿದ್ದರು.

ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದರು.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದರು.

ಈ ನಡುವೆ “ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ” ಎಂದು ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಸವಾಲು ಹಾಕಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು ತೆಗೆದಿದ್ದಾರೆ.

ಅಲ್ಲದೇ ಪ್ರಧಾನಿ ಕಚೇರಿಯಲ್ಲಿ 5 ಮಂದಿಗೆ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

Also Read: Aarogya Setu: The COVID-19 tracking app, another Surveillance tool?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...