Homeಮುಖಪುಟಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

ಆರೋಗ್ಯ ಸೇತು ಆ್ಯಪ್ ಕಡ್ಡಾಯ ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ

- Advertisement -
- Advertisement -

ಸಾರ್ವಜನಿಕ ಮತ್ತು ಖಾಸಗಿ ಉದ್ಯೋಗಿಗಳಿಗೆ ‘ಆರೋಗ್ಯ ಸೇತು’ ಆ್ಯಪ್ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಆರೋಗ್ಯ ಸೇತು ಆ್ಯಪ್ ಸುರಕ್ಷಿತವಲ್ಲ ಮತ್ತು ಖಾಸಗಿ ಮಾಹಿತಿಗಳ ಸೋರಿಕೆ ಹೆಚ್ಚು ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮೇ 04 ರಿಂದ ದೇಶದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ನೌಕರರು ಆರೋಗ್ಯ ಸೇತು ಆ್ಯಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದಕ್ಕೆ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಪಸ್ವರ ಎತ್ತಿದ್ದರು.

ಆರೋಗ್ಯ ಸೇತು ಅಪ್ಲಿಕೇಶನ್, ಒಂದು ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದ್ದು, ಖಾಸಗಿ ಕಂಪನಿಗೆ ಇದರ ನಿಯಂತ್ರಣ ಜವಾಬ್ದಾರಿ ನೀಡಲಾಗಿದೆ. ಯಾವುದೇ ಸಾಂಸ್ಥಿಕ ಮೇಲ್ವಿಚಾರಣೆಯಿಲ್ಲದಿರುವುದರಿಂದ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆಯ ಕುರಿತು ಇದು ಗಂಭೀರವಾದ ಪ್ರಶ್ನೆಗಳನ್ನು ಎತ್ತುತ್ತದೆ. ತಂತ್ರಜ್ಞಾನವು ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುತ್ತದೆ; ಆದರೆ ನಾಗರಿಕರನ್ನು ಅವರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ವಿಷಯಗಳನ್ನು ಪತ್ತೆಹಚ್ಚಲು ಬಳಕೆಯಾಗುವ ವಸ್ತುವಾಗಬಾರದು” ಎಂದು ರಾಹುಲ್ ಗಾಂಧಿ ಶನಿವಾರ ಟ್ವೀಟ್ ಮಾಡಿದ್ದರು.

ಸರ್ಕಾರದ ಪರವಾಗಿ ನೀತಿ ಆಯೋಗವು ಆ್ಯಪ್ ಬಳಕೆಯನ್ನು ಸಮರ್ಥಿಸಿಕೊಂಡಿದೆ. ಜಿಪಿಎಸ್ ಡೇಟಾ ಹೊಸ ಹಾಟ್‌ಸ್ಪಾಟ್‌ಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಸ್ಥಳದ ಡೇಟಾವನ್ನು ಅಪ್ಲಿಕೇಶನ್‌ನಿಂದ ವೈಯಕ್ತಿಕ ಆಧಾರದ ಮೇಲೆ ಬಳಸುವ ಬದಲಾಗಿ, ಒಟ್ಟು ಆಧಾರದ ಮೇಲೆ ಬಳಸಲಾಗುತ್ತದೆ ಎಂದು ಅದು ಹೇಳಿದೆ.

ರಾಹುಲ್‌ ಗಾಂಧಿಯವರ ಟೀಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಈ ಅಪ್ಲಿಕೇಶನ್ “ಜನರನ್ನು ರಕ್ಷಿಸುವ ಪ್ರಬಲ ಒಡನಾಡಿ” ಎಂದು ಹೇಳಿದ್ದರು.

ಈ ನಡುವೆ “ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ” ಎಂದು ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಸವಾಲು ಹಾಕಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು ತೆಗೆದಿದ್ದಾರೆ.

ಅಲ್ಲದೇ ಪ್ರಧಾನಿ ಕಚೇರಿಯಲ್ಲಿ 5 ಮಂದಿಗೆ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

Also Read: Aarogya Setu: The COVID-19 tracking app, another Surveillance tool?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...